Mission Divyastra: ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆ: ಪ್ರಧಾನಿ ಮೋದಿ

Agni-5 missile: ಇಂದು ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆಯಾಗಿದೆ ಎಂದು ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ್ದಾರೆ. ಡಿಆರ್‌ಡಿಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟ ನಡೆಸಿದ್ದಾರೆ. ಈ ಕ್ಷಿಪಣಿ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನವನ್ನು ಹೊಂದಿದೆ.

Mission Divyastra: ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆ: ಪ್ರಧಾನಿ ಮೋದಿ

Updated on: Mar 11, 2024 | 6:13 PM

ಮಿಷನ್ ದಿವ್ಯಾಸ್ತ್ರ (Mission Divyastra) ಯಶಸ್ವಿ ಉಡಾವಣೆಯನ್ನು ನಡೆಸಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ತಮ್ಮ ಎಕ್ಸ್​​ ಖಾತೆಯಲ್ಲಿ ಅಭಿನಂದನೆ ತಿಳಿಸಿದ್ದಾರೆ. ಡಿಆರ್‌ಡಿಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟ ನಡೆಸಿದ್ದಾರೆ. ಈ ಕ್ಷಿಪಣಿ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನವನ್ನು ಹೊಂದಿದೆ. ಇದು ನಮ್ಮ ಭಾರತಕ್ಕೆ ಹೆಮ್ಮೆಯ ಕ್ಷಣ ಎಂದು ಮೋದಿ ಹೇಳಿದ್ದಾರೆ.

ಈ ಕ್ಷಿಪಣಿ ಪಾಕಿಸ್ತಾನ ಮತ್ತು ಚೀನಾದಂತಹ ದೇಶಗಳಿಂದ ಬಹು ರಂಗಗಳಲ್ಲಿ ಸವಾಲುಗಳನ್ನು ಎದುರಿಸುತ್ತಿರುವ ಭಾರತೀಯ ರಕ್ಷಣಾ ಪಡೆಗಳಿಗೆ ಉತ್ತೇಜನವಾಗಿದೆ.

ಇದನ್ನೂ ಓದಿ: ಸಿಎಎ ಜಾರಿಗೆ ಕೇಂದ್ರ ಸರ್ಕಾರ ಇಂದು ರಾತ್ರಿ ಅಧಿಸೂಚನೆ ಹೊರಡಿಸುವ ಸಾಧ್ಯತೆ

ಮೋದಿ ಎಕ್ಸ್​​​ ಟ್ವೀಟ್​​ ಇಲ್ಲಿದೆ:

&nbs

ಅಗ್ನಿ-5 ಬ್ಯಾಲಿಸ್ಟಿಕ್ ಕ್ಷಿಪಣಿ

DRDO 2012ರ ಸುಮಾರಿಗೆ ಅಗ್ನಿ-V ಕ್ಷಿಪಣಿಗಳ ಪ್ರಯೋಗವನ್ನು ಪ್ರಾರಂಭಿಸಿತು. ಅಂದಿನಿಂದ, ಇದು ನವೀಕರಿಸಿದ ಸಾಮರ್ಥ್ಯಗಳೊಂದಿಗೆ ಅಗ್ನಿ-Vನ ಬಹು ಆವೃತ್ತಿಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ. 2021ರಲ್ಲಿ, ಡಿಆರ್‌ಡಿಒ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಸರ್ಫೇಸ್ ಟು ಸರ್ಫೇಸ್ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-5ನ್ನು ಯಶಸ್ವಿಯಾಗಿ ಉಡಾವಣೆ ಮಾಡಿತು. ಮೂರು-ಹಂತದ ಘನ-ಇಂಧನ ಎಂಜಿನ್ ಅನ್ನು ಬಳಸುವ ಕ್ಷಿಪಣಿಯು 5,000 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಗುರಿಗಳನ್ನು ಅತಿ ಹೆಚ್ಚು ನಿಖರತೆಯೊಂದಿಗೆ ತಲುಪುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us