AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 27-28 ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿಯ ಪ್ರಮುಖ ಗಮನದ ಭಾಗವಾಗಿ ದಕ್ಷಿಣ ಭಾರತದ ರಾಜ್ಯಗಳಿಗೆ ಪ್ರಧಾನಿಯವರ ಈ ಭೇಟಿಗಳನ್ನು ನೋಡಲಾಗುತ್ತಿದೆ. 2024 ರ ಚುನಾವಣೆಯಲ್ಲಿ 55 ಶೇಕಡಾ ಮತ ಹಂಚಿಕೆಯ ಗುರಿಯೊಂದಿಗೆ ಭಾರತದಾದ್ಯಂತ 350 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವುದರಿಂದ ಈ ಪ್ರದೇಶದಲ್ಲಿ ಪಕ್ಷದ ಹೆಜ್ಜೆಗುರುತನ್ನು ಹೆಚ್ಚಿಸುವ ಆಲೋಚನೆ ಇದೆ

ಫೆಬ್ರವರಿ 27-28 ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 23, 2024 | 9:03 PM

Share

ದೆಹಲಿ ಫೆಬ್ರವರಿ 23: ಪ್ರಧಾನಿ ನರೇಂದ್ರ ಮೋದಿ (Narendra Modi) ಫೆಬ್ರವರಿ 27-28 ರಂದು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಇಸ್ರೋದ(ISRo) ಎರಡನೇ ಬಾಹ್ಯಾಕಾಶ ಪೋರ್ಟ್‌ಗೆ ಅಡಿಪಾಯ ಹಾಕುವುದು ಸೇರಿದಂತೆ ಪಕ್ಷದ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ತಿರುಪ್ಪೂರ್‌ನಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ. ಜನವರಿಯಲ್ಲಿ ರಾಮಮಂದಿರ (Ram mandir) ಉದ್ಘಾಟನೆಗೆ ಒಂದು ದಿನ ಮೊದಲು ಅವರು ತಮಿಳುನಾಡಿನ ಕೋತಂಡರಾಮಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇಲ್ಲಿಗೆ ರಾವಣನ ಕಿರಿಯ ಸಹೋದರನಾದ ವಿಭೀಷಣನು ರಾಮನನ್ನು ಭೇಟಿಯಾಗಲು ಬಂದನೆಂದು ನಂಬಲಾಗಿದೆ. ರಾಮಸೇತುವನ್ನು ನಿರ್ಮಿಸಿದ ಸ್ಥಳ ಎಂದು ನಂಬಲಾದ ಅರಿಚಲ್ ಮುನೈಗೂ ಪ್ರಧಾನಿ ಮೋದಿ ಭೇಟಿ ನೀಡಿದ್ದರು.

ಪ್ರಧಾನಿ ಮೋದಿ ಜನವರಿಯಲ್ಲಿ ಮೂರು ಬಾರಿ ದಕ್ಷಿಣ ಭಾರತದಲ್ಲಿ ಪ್ರವಾಸ ಮಾಡಿದ್ದಾರೆ. ಭಗವಾನ್ ರಾಮನಿಗೆ ಸಂಬಂಧಿಸಿದ ದೇವಾಲಯಗಳ ಹೊರತಾಗಿ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯನ್ನು ಅವರ ಪ್ರವಾಸದಲ್ಲಿ ಒಳಗೊಂಡಿತ್ತು.

ಮಿಷನ್ ಸೌತ್

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿಯ ಪ್ರಮುಖ ಗಮನದ ಭಾಗವಾಗಿ ದಕ್ಷಿಣ ಭಾರತದ ರಾಜ್ಯಗಳಿಗೆ ಪ್ರಧಾನಿಯವರ ಈ ಭೇಟಿಗಳನ್ನು ನೋಡಲಾಗುತ್ತಿದೆ. 2024 ರ ಚುನಾವಣೆಯಲ್ಲಿ 55 ಶೇಕಡಾ ಮತ ಹಂಚಿಕೆಯ ಗುರಿಯೊಂದಿಗೆ ಭಾರತದಾದ್ಯಂತ 350 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವುದರಿಂದ ಈ ಪ್ರದೇಶದಲ್ಲಿ ಪಕ್ಷದ ಹೆಜ್ಜೆಗುರುತನ್ನು ಹೆಚ್ಚಿಸುವ ಆಲೋಚನೆ ಇದೆ. ದಕ್ಷಿಣ ಭಾರತದಲ್ಲಿ ಮತದಾರರನ್ನು ಬಿಜೆಪಿಯತ್ತ ಸೆಳೆಯುವ ಉದ್ದೇಶವೂ ಇದೆ,

ಪ್ರಧಾನಿಯವರು ಜನವರಿ 2-3 ರಂದು ತಮಿಳುನಾಡು, ಲಕ್ಷದ್ವೀಪ ಮತ್ತು ಕೇರಳದ ಪ್ರವಾಸದೊಂದಿಗೆ ವರ್ಷವನ್ನು ಪ್ರಾರಂಭಿಸಿದರು, ಇದರಲ್ಲಿ ಅವರು ಸಾವಿರಾರು ಕೋಟಿಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಜನವರಿ 16-17 ರಂದು ಪ್ರಧಾನಿ ಆಂಧ್ರಪ್ರದೇಶ ಮತ್ತು ಕೇರಳದಲ್ಲಿದ್ದರು. ಜನವರಿ 19-21 ರಂದು ಅವರು ಕರ್ನಾಟಕ ಮತ್ತು ತಮಿಳುನಾಡಿನಲ್ಲಿದ್ದರು.

ಐದು ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಕೇರಳ, ಮತ್ತು ತೆಲಂಗಾಣ ಮತ್ತು ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪಗಳ 127 ಸ್ಥಾನಗಳಲ್ಲಿ ಬಿಜೆಪಿ 2019 ರ ಲೋಕಸಭೆ ಚುನಾವಣೆಯಲ್ಲಿ ಕೇವಲ 29 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು. ಇವರಲ್ಲಿ 25 ಮಂದಿ ಕರ್ನಾಟಕದಿಂದ ಮತ್ತು ನಾಲ್ವರು ತೆಲಂಗಾಣದಿಂದ ಬಂದವರು. 2019 ರಲ್ಲಿ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಬಿಜೆಪಿಗೆ ಯಾವುದೇ ಸ್ಥಾನವಿಲ್ಲ.

ಬಿಜೆಪಿಯ ಪ್ರಮುಖ ಗಮನವು ದಕ್ಷಿಣ ಭಾರತದಲ್ಲಿ ಪಕ್ಷವು ಎಂದಿಗೂ ಗೆಲ್ಲದ ‘ದುರ್ಬಲ’ ವರ್ಗದ ಸ್ಥಾನಗಳೆಂದು ಪರಿಗಣಿಸಲ್ಪಟ್ಟ 84 ಸ್ಥಾನಗಳ ಮೇಲೆ ಕೇಂದ್ರೀಕರಿಸುತ್ತದೆ ಎಂದು ಮೂಲಗಳು ತಿಳಿಸಿವೆ. ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಪಿಎಂ ಮೋದಿ ಬಗ್ಗೆ ಒಲವು ಇದ್ದರೂ ಈ ಪ್ರೀತಿಯನ್ನು ಮತಗಳನ್ನಾಗಿ ಪರಿವರ್ತಿಸುವುದು ಪಕ್ಷಕ್ಕಿರುವ ಸವಾಲು ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಬಿಜೆಪಿ ನಾಯಕರೊಬ್ಬರು ಹೇಳಿರುವುದಾಗಿ ನ್ಯೂಸ್ 9 ವರದಿ ಮಾಡಿದೆ. ಪಕ್ಷವು ತನ್ನ ಬೂತ್ ಮಟ್ಟದ ಕಾರ್ಯತಂತ್ರವನ್ನು ಬಲಪಡಿಸುವತ್ತ ಗಮನಹರಿಸುತ್ತಿದೆ ಎಂದರು.

ಇದನ್ನೂ ಓದಿ: ಪ್ರಧಾನಿ ಮೋದಿ ಕುರಿತು ಎಐ ಜೆಮಿನಿ ತಾರತಮ್ಯದ ಉತ್ತರ; ಗೂಗಲ್​​ಗೆ ನೋಟಿಸ್ ನೀಡಲು ಕೇಂದ್ರ ಚಿಂತನೆ

ಬೂತ್ ಮಟ್ಟದ ತಂತ್ರ

ಜನವರಿ 17 ರಂದು ಕೇರಳದ ಕೊಚ್ಚಿಯಲ್ಲಿ ನಡೆದ ಶಕ್ತಿಕೇಂದ್ರ ಉಸ್ತುವಾರಿ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಿಮ್ಮ ಬೂತ್‌ನಿಂದ ಜನರನ್ನು ಮತದಾರರ ಪಟ್ಟಿಗೆ ಸಂಪರ್ಕಿಸಲು ಕೆಲಸ ಮಾಡಿ, ಮೊದಲ ಬಾರಿಗೆ ಮತದಾರರನ್ನು ಪ್ರೋತ್ಸಾಹಿಸಿ ಮತ್ತು ಮತದಾನದ ಪ್ರಯೋಜನಗಳ ಬಗ್ಗೆ ಅವರಿಗೆ ತಿಳಿಸಿ” ಎಂದು ಹೇಳಿದರು. ಕಳೆದ ವರ್ಷ ವಿಧಾನಸಭಾ ಚುನಾವಣೆ ವೇಳೆ ಸೋತಿದ್ದ ಕರ್ನಾಟಕದಲ್ಲಿ ಬಿಜೆಪಿ ತಿದ್ದಿಕೊಳ್ಳಲು ಮುಂದಾಗಿದೆ ಎನ್ನಲಾಗಿದೆ. ಒಕ್ಕಲಿಗ ಮತವನ್ನು ಕ್ರೋಢೀಕರಿಸಲು ಜನತಾದಳ (ಜಾತ್ಯತೀತ) ಜೊತೆಗಿನ ಮೈತ್ರಿಯ ಹೊರತಾಗಿ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಿಂದ ಅರ್ಧಕ್ಕಿಂತ ಹೆಚ್ಚು ಸಂಸದರನ್ನು ಬದಲಿಸಲು ಬಿಜೆಪಿ ಚಿಂತನೆ ನಡೆಸುತ್ತಿದೆ.

ತೆಲಂಗಾಣದಲ್ಲಿ, ಎಂಟು ಸ್ಥಾನಗಳನ್ನು ಗೆದ್ದು ತನ್ನ ಮತಗಳ ಪಾಲನ್ನು ದ್ವಿಗುಣಗೊಳಿಸುವ ಮೂಲಕ ತನ್ನ ಪ್ರಭಾವಶಾಲಿ ಪ್ರದರ್ಶನದ ನಂತರ, ಬಿಜೆಪಿ 17 ಲೋಕಸಭಾ ಸ್ಥಾನಗಳಲ್ಲಿ ಕನಿಷ್ಠ 10 ಸ್ಥಾನಗಳನ್ನು ಗೆಲ್ಲುವ ಪ್ರಯತ್ನದಲ್ಲಿ ಸಾಂಸ್ಥಿಕ ಕ್ರಮಗಳನ್ನು ಜಾರಿಗೆ ತರುತ್ತಿದೆ. 2024 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಮೈತ್ರಿ ಮಾಡಿಕೊಳ್ಳಲು ಪಕ್ಷವು ಯೋಚಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!