AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀರಾಮನ ಭಕ್ತರು ನೀಡಿದ ದೇಣಿಗೆಯನ್ನು ದುರ್ಬಳಕೆ ಮಾಡಿಕೊಳ್ಳುವುದು ಮಹಾಪಾಪ’-ಪ್ರಿಯಾಂಕಾ ಗಾಂಧಿ ವಾದ್ರಾ

ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಕೂಡ ಇದೊಂದು ಸ್ಕ್ಯಾಮ್​ ಎಂದಿದ್ದಾರೆ. ಹೇ..ರಾಮ. ನೋಡು ಎಂಥ ಕಾಲ ಬಂತು ! ನಿನ್ನ ಹೆಸರಲ್ಲಿ ದೇಣಿಗೆ ಪಡೆದು ಭ್ರಷ್ಟಾಚಾರ ಮಾಡಲಾಗಿದೆ ಎಂದು ವ್ಯಂಗ್ಯಭರಿತವಾಗಿ ಟ್ವೀಟ್ ಮಾಡಿದ್ದಾರೆ.

‘ಶ್ರೀರಾಮನ ಭಕ್ತರು ನೀಡಿದ ದೇಣಿಗೆಯನ್ನು ದುರ್ಬಳಕೆ ಮಾಡಿಕೊಳ್ಳುವುದು ಮಹಾಪಾಪ’-ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ
TV9 Web
| Updated By: Lakshmi Hegde|

Updated on:Jun 14, 2021 | 4:13 PM

Share

ಅಯೋಧ್ಯೆಯಲ್ಲಿ ಶ್ರೀರಾಮಜನ್ಮಭೂಮಿ ಟ್ರಸ್ಟ್​ ಭೂಮಿ ಖರೀದಿಯಲ್ಲಿ ಭ್ರಷ್ಟಾಚಾರ ಮಾಡಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಈ ಬಗ್ಗೆ ಕಿಡಿಕಾರಿದ್ದಾರೆ. ಭಕ್ತರ ದೇಣಿಗೆಗಳನ್ನು ದುರ್ಬಳಕೆ ಮಾಡಿಕೊಳ್ಳುವುದು ಮಹಾಪಾಪ ಮತ್ತು ಅವರ ನಂಬಿಕೆಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಕೋಟ್ಯಂತರ ಜನರು ಶ್ರೀರಾಮನಿಗಾಗಿ ತಮ್ಮ ಕೈಲಾದಷ್ಟು ಹಣವನ್ನು ದೇಣಿಗೆ ನೀಡಿದ್ದಾರೆ. ಅದು ಅವರ ಭಕ್ತಿ ಮತ್ತು ನಂಬಿಕೆ. ಆದರೆ ಇಲ್ಲಿ ಕೋಟ್ಯಂತರ ಭಕ್ತರ ನಂಬಿಕೆಗೆ ದ್ರೋಹವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​​ ಭೂಮಿ ಖರೀದಿ ಮಾಡಿದ ಬೆನ್ನಲ್ಲೇ ವಿವಾದ ಸೃಷ್ಟಿಯಾಗಿದ್ದು, ಸಿಬಿಐ, ಇಡಿ ತನಿಖೆಯಾಗಬೇಕು ಎಂದು ಸಮಾಜವಾದಿ ಪಾರ್ಟಿ, ಆಮ್​ ಆದ್ಮಿ ಪಕ್ಷಗಳು ಒತ್ತಾಯಿಸಿವೆ. 2 ಕೋಟಿ ರೂ.ಬೆಲೆಯ ಭೂಮಿಯನ್ನು 18 ಕೋಟಿ ರೂಪಾಯಿ ಕೊಟ್ಟು ಖರೀದಿಸಲಾಗಿದೆ. ಇದರಲ್ಲಿ ಖಂಡಿತ ಹಗರಣ ನಡೆದಿದೆ ಎಂದು ಆರೋಪಿಸಿವೆ. ಇನ್ನು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಕೂಡ ಇದೊಂದು ಸ್ಕ್ಯಾಮ್​ ಎಂದಿದ್ದಾರೆ. ಹೇ..ರಾಮ. ನೋಡು ಎಂಥ ಕಾಲ ಬಂತು ! ನಿನ್ನ ಹೆಸರಲ್ಲಿ ದೇಣಿಗೆ ಪಡೆದು ಭ್ರಷ್ಟಾಚಾರ ಮಾಡಲಾಗಿದೆ ಎಂದು ವ್ಯಂಗ್ಯಭರಿತವಾಗಿ ಟ್ವೀಟ್ ಮಾಡಿದ್ದಾರೆ. ಇನ್ನು ಈ ಬಗ್ಗೆ ಟ್ರಸ್ಟ್​​ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್​ ಸ್ಪಷ್ಟನೆ ನೀಡಿದ್ದು, ಭೂ ಖರೀದಿಯಲ್ಲಿ ಯಾವುದೇ ಹಗರಣವೂ ನಡೆದಿಲ್ಲ. ರಾಜಕೀಯ ದ್ವೇಷದಿಂದ ಈ ಆರೋಪ ಮಾಡಲಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಮತ್ತೆ ವಿವಾದದಲ್ಲಿ ಅಯೋಧ್ಯೆ ಶ್ರೀರಾಮಜನ್ಮಭೂಮಿ; ಸಿಬಿಐ, ಇಡಿ ತನಿಖೆಗೆ ಆಗ್ರಹಿಸಿದ ಎಸ್​ಪಿ, ಆಪ್​ ಪಕ್ಷಗಳು

Misuse of donations of devotees is sin Said priyanka gandhi vadra

Published On - 4:08 pm, Mon, 14 June 21

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ