Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀರಾಮನ ಭಕ್ತರು ನೀಡಿದ ದೇಣಿಗೆಯನ್ನು ದುರ್ಬಳಕೆ ಮಾಡಿಕೊಳ್ಳುವುದು ಮಹಾಪಾಪ’-ಪ್ರಿಯಾಂಕಾ ಗಾಂಧಿ ವಾದ್ರಾ

ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಕೂಡ ಇದೊಂದು ಸ್ಕ್ಯಾಮ್​ ಎಂದಿದ್ದಾರೆ. ಹೇ..ರಾಮ. ನೋಡು ಎಂಥ ಕಾಲ ಬಂತು ! ನಿನ್ನ ಹೆಸರಲ್ಲಿ ದೇಣಿಗೆ ಪಡೆದು ಭ್ರಷ್ಟಾಚಾರ ಮಾಡಲಾಗಿದೆ ಎಂದು ವ್ಯಂಗ್ಯಭರಿತವಾಗಿ ಟ್ವೀಟ್ ಮಾಡಿದ್ದಾರೆ.

‘ಶ್ರೀರಾಮನ ಭಕ್ತರು ನೀಡಿದ ದೇಣಿಗೆಯನ್ನು ದುರ್ಬಳಕೆ ಮಾಡಿಕೊಳ್ಳುವುದು ಮಹಾಪಾಪ’-ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ
Follow us
TV9 Web
| Updated By: Lakshmi Hegde

Updated on:Jun 14, 2021 | 4:13 PM

ಅಯೋಧ್ಯೆಯಲ್ಲಿ ಶ್ರೀರಾಮಜನ್ಮಭೂಮಿ ಟ್ರಸ್ಟ್​ ಭೂಮಿ ಖರೀದಿಯಲ್ಲಿ ಭ್ರಷ್ಟಾಚಾರ ಮಾಡಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಈ ಬಗ್ಗೆ ಕಿಡಿಕಾರಿದ್ದಾರೆ. ಭಕ್ತರ ದೇಣಿಗೆಗಳನ್ನು ದುರ್ಬಳಕೆ ಮಾಡಿಕೊಳ್ಳುವುದು ಮಹಾಪಾಪ ಮತ್ತು ಅವರ ನಂಬಿಕೆಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಕೋಟ್ಯಂತರ ಜನರು ಶ್ರೀರಾಮನಿಗಾಗಿ ತಮ್ಮ ಕೈಲಾದಷ್ಟು ಹಣವನ್ನು ದೇಣಿಗೆ ನೀಡಿದ್ದಾರೆ. ಅದು ಅವರ ಭಕ್ತಿ ಮತ್ತು ನಂಬಿಕೆ. ಆದರೆ ಇಲ್ಲಿ ಕೋಟ್ಯಂತರ ಭಕ್ತರ ನಂಬಿಕೆಗೆ ದ್ರೋಹವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​​ ಭೂಮಿ ಖರೀದಿ ಮಾಡಿದ ಬೆನ್ನಲ್ಲೇ ವಿವಾದ ಸೃಷ್ಟಿಯಾಗಿದ್ದು, ಸಿಬಿಐ, ಇಡಿ ತನಿಖೆಯಾಗಬೇಕು ಎಂದು ಸಮಾಜವಾದಿ ಪಾರ್ಟಿ, ಆಮ್​ ಆದ್ಮಿ ಪಕ್ಷಗಳು ಒತ್ತಾಯಿಸಿವೆ. 2 ಕೋಟಿ ರೂ.ಬೆಲೆಯ ಭೂಮಿಯನ್ನು 18 ಕೋಟಿ ರೂಪಾಯಿ ಕೊಟ್ಟು ಖರೀದಿಸಲಾಗಿದೆ. ಇದರಲ್ಲಿ ಖಂಡಿತ ಹಗರಣ ನಡೆದಿದೆ ಎಂದು ಆರೋಪಿಸಿವೆ. ಇನ್ನು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಕೂಡ ಇದೊಂದು ಸ್ಕ್ಯಾಮ್​ ಎಂದಿದ್ದಾರೆ. ಹೇ..ರಾಮ. ನೋಡು ಎಂಥ ಕಾಲ ಬಂತು ! ನಿನ್ನ ಹೆಸರಲ್ಲಿ ದೇಣಿಗೆ ಪಡೆದು ಭ್ರಷ್ಟಾಚಾರ ಮಾಡಲಾಗಿದೆ ಎಂದು ವ್ಯಂಗ್ಯಭರಿತವಾಗಿ ಟ್ವೀಟ್ ಮಾಡಿದ್ದಾರೆ. ಇನ್ನು ಈ ಬಗ್ಗೆ ಟ್ರಸ್ಟ್​​ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್​ ಸ್ಪಷ್ಟನೆ ನೀಡಿದ್ದು, ಭೂ ಖರೀದಿಯಲ್ಲಿ ಯಾವುದೇ ಹಗರಣವೂ ನಡೆದಿಲ್ಲ. ರಾಜಕೀಯ ದ್ವೇಷದಿಂದ ಈ ಆರೋಪ ಮಾಡಲಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಮತ್ತೆ ವಿವಾದದಲ್ಲಿ ಅಯೋಧ್ಯೆ ಶ್ರೀರಾಮಜನ್ಮಭೂಮಿ; ಸಿಬಿಐ, ಇಡಿ ತನಿಖೆಗೆ ಆಗ್ರಹಿಸಿದ ಎಸ್​ಪಿ, ಆಪ್​ ಪಕ್ಷಗಳು

Misuse of donations of devotees is sin Said priyanka gandhi vadra

Published On - 4:08 pm, Mon, 14 June 21

ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ