Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲಾಟ್‌ಫಾರ್ಮ್‌ಗಳ ದುರುಪಯೋಗದ ಬಗ್ಗೆ ಗೂಗಲ್, ಫೇಸ್‌ಬುಕ್ ಅಧಿಕಾರಿಗಳಿಗೆ ಸಂಸದೀಯ ಸಮಿತಿಯಿಂದ ಸಮನ್ಸ್

ಭಾರತದ ಹೊಸ ಐಟಿ ನಿಯಮಗಳು ಮತ್ತು ವೇದಿಕೆಯ ದುರುಪಯೋಗವನ್ನು ಹೇಗೆ ನಿಲ್ಲಿಸುವುದು ಎಂದು ಚರ್ಚಿಸಲು ಟ್ವಿಟರ್ ಅಧಿಕಾರಿಗಳು ಸಮಿತಿಯ ಮುಂದೆ ಹಾಜರಾದ 10 ದಿನಗಳ ನಂತರ ಈ ಸಮನ್ಸ್ ನೀಡಲಾಗಿದೆ.

ಪ್ಲಾಟ್‌ಫಾರ್ಮ್‌ಗಳ ದುರುಪಯೋಗದ ಬಗ್ಗೆ ಗೂಗಲ್, ಫೇಸ್‌ಬುಕ್ ಅಧಿಕಾರಿಗಳಿಗೆ ಸಂಸದೀಯ ಸಮಿತಿಯಿಂದ ಸಮನ್ಸ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 28, 2021 | 12:00 PM

ದೆಹಲಿ: ಸಂಸತ್ತಿನ ಸ್ಥಾಯಿ ಸಮಿತಿಯು ಟೆಕ್ ದೈತ್ಯ ಗೂಗಲ್ ಮತ್ತು ಸೋಷಿಯಲ್ ಮೀಡಿಯಾ ಕಂಪನಿ ಫೇಸ್‌ಬುಕ್‌ನ ಪ್ರತಿನಿಧಿಗಳನ್ನು ಮಂಗಳವಾರ ಹಾಜರುಪಡಿಸುವಂತೆ ಸಮನ್ಸ್ ನೀಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕಾಂಗ್ರೆಸ್ ಮುಖಂಡ ಶಶಿ ತರೂರ್ ನೇತೃತ್ವದ ಸಮಿತಿಯು ನಾಗರಿಕರ ಹಕ್ಕುಗಳನ್ನು ಕಾಪಾಡುವ ಬಗ್ಗೆ ಮತ್ತು ಸಾಮಾಜಿಕ ಮಾಧ್ಯಮಗಳ ದುರುಪಯೋಗವನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಕಂಪನಿಗಳ ಅಭಿಪ್ರಾಯಗಳನ್ನು ಕೇಳಲಿದೆ. ಭಾರತದ ಹೊಸ ಐಟಿ ನಿಯಮಗಳು ಮತ್ತು ವೇದಿಕೆಯ ದುರುಪಯೋಗವನ್ನು ಹೇಗೆ ನಿಲ್ಲಿಸುವುದು ಎಂದು ಚರ್ಚಿಸಲು ಟ್ವಿಟರ್ ಅಧಿಕಾರಿಗಳು ಸಮಿತಿಯ ಮುಂದೆ ಹಾಜರಾದ 10 ದಿನಗಳ ನಂತರ ಈ ಸಮನ್ಸ್ ನೀಡಲಾಗಿದೆ.

ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನ ಬಳಕೆದಾರರು ಅಪ್‌ಲೋಡ್ ಮಾಡುತ್ತಿರುವ ವಿಷಯ ಮತ್ತು ಅದು ನೆಲದ ಕಾನೂನನ್ನು ಗೌರವಿಸುತ್ತದೆಯೇ ಎಂಬ ಬಗ್ಗೆ ಚರ್ಚೆಗಳು ಕೇಂದ್ರೀಕೃತವಾಗಿವೆ. ಸಲಹೆಗಾರ್ತಿ ಆಯುಶಿ ಕಪೂರ್ ಮತ್ತು ಸಾರ್ವಜನಿಕ ನೀತಿ ವ್ಯವಸ್ಥಾಪಕ ಶಗುಫ್ತಾ ಕಮ್ರಾನ್ ಅವರು ಟ್ವಿಟರ್ ತಮ್ಮದೇ ಆದ ನೀತಿಗಳನ್ನು ಅನುಸರಿಸುತ್ತಿದೆ ಎಂದು ಸಮಿತಿಗೆ ಹೇಳಿದ್ದಾರೆ.

ಸಮಿತಿಯು ನಂತರ ಪ್ರತಿನಿಧಿಗಳಿಗೆ ನೆಲದ ಕಾನೂನು “ಸರ್ವೋಚ್ಚ” ಎಂದು ತಿಳಿಸಿತು ಮತ್ತು ಕಂಪನಿಯು ಅವುಗಳನ್ನು ಪಾಲಿಸುವಂತೆ ಕೇಳಿಕೊಂಡಿತು.

ಹೊಸ ಐಟಿ ನಿಯಮಗಳ ಬಗ್ಗೆ ಟ್ವಿಟರ್ ಮತ್ತು ಭಾರತ ಸರ್ಕಾರದ ನಡುವಿನ ಜಗಳದ ನಡುವೆ ಈ ಸಭೆ ಬಂದಿದೆ. ಹೊಸ ನಿಯಮಗಳನ್ನು ಪಾಲಿಸುವಂತೆ ಸರ್ಕಾರ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಅನ್ನು ಕೇಳಿದ್ದು ಇದನ್ನು ನಾಗರಿಕರ ರಕ್ಷಣೆಗಾಗಿ ರಚಿಸಲಾಗಿದೆ ಎಂದು ಹೇಳಿದೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರ ಟ್ವಿಟ್ಟರ್ ಖಾತೆಯನ್ನು ಸ್ವಲ್ಪ ಸಮಯದವರೆಗೆ ಟ್ವಿಟರ್ ಲಾಕ್ ಮಾಡಿತ್ತು.

ಸರ್ಕಾರವು ತನ್ನ ಮಧ್ಯವರ್ತಿ ಸ್ಥಾನಮಾನವನ್ನು ತೆಗೆದುಹಾಕಿದಾಗ ಟ್ವಿಟರ್ ಈಗಾಗಲೇ ಭಾರತದಲ್ಲಿ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ. ಇದರರ್ಥ ಟ್ವಿಟರ್ ಜನರ ಟ್ವೀಟ್‌ಗಳನ್ನು ಹೋಸ್ಟ್ ಮಾಡುವ ವೇದಿಕೆಯಾಗಿ ಪರಿಗಣಿಸುವುದಿಲ್ಲ ಆದರೆ ಅದು ವಿಷಯಕ್ಕೆ ಸಂಪಾದಕೀಯ ಜವಾಬ್ದಾರಿಯನ್ನು ಹೊಂದಿರುತ್ತದೆ.

ಉಪ ರಾಷ್ಟಪತಿ ವೆಂಕಯ್ಯ ನಾಯ್ಡು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಅನೇಕ ನಾಯಕರ ಖಾತೆಗಳಿಂದ ನೀಲಿ ಟಿಕ್ (ಪರಿಶೀಲನೆ ಬ್ಯಾಡ್ಜ್) ಅನ್ನು ತೆಗೆದುಹಾಕಿರುವುದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಕಾಂಗ್ರೆಸ್ ಟೂಲ್ಕಿಟ್ ಪ್ರಕರಣದಲ್ಲಿ ದೆಹಲಿ ಪೊಲೀಸರೂ ಟ್ವಿಟರ್​​ಗೆ ನೋಟಿಸ್ ನೀಡಿದ್ದಾರೆ.

ಜೂನ್ 20 ರಂದು, ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ಮಿಷನ್ ಭಾರತದ ಹೊಸ ಐಟಿ ನಿಯಮಗಳನ್ನು “ಸಾಮಾಜಿಕ ಮಾಧ್ಯಮದ ಸಾಮಾನ್ಯ ಬಳಕೆದಾರರನ್ನು ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾಗಿದೆ” ಎಂದು ಸ್ಪಷ್ಟಪಡಿಸಿತ್ತು. ಸರ್ಕಾರವು ನಾಗರಿಕ ಸಮಾಜ ಮತ್ತು ಇತರ ಮಧ್ಯಸ್ಥಗಾರರೊಂದಿಗೆ 2018 ರಲ್ಲಿ ವ್ಯಾಪಕ ಸಮಾಲೋಚನೆ ನಡೆಸಿದ ನಂತರ ಅವುಗಳನ್ನು ಅಂತಿಮಗೊಳಿಸಲಾಯಿತು.

2021 ರ ಫೆಬ್ರವರಿ 25 ರಂದು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳನ್ನು ಕೇಂದ್ರವು 2021 ಕ್ಕೆ ಸೂಚಿಸಿತು. ನಿಯಮಗಳು ಮೇ 26, 2021 ರಿಂದ ಜಾರಿಗೆ ಬಂದಿವೆ.

ಇದನ್ನೂ ಓದಿ:  Twitter India: ಟ್ವಿಟರ್​​ ಮಧ್ಯಂತರ ಕುಂದುಕೊರತೆ ಪರಿಹಾರ ಅಧಿಕಾರಿ ಧರ್ಮೇಂದ್ರ ಚತುರ್​ ರಾಜೀನಾಮೆ; ಕೇಂದ್ರದ ಸೂಚನೆ ಮೇರೆಗೆ ನೇಮಕ ಮಾಡಿದ್ದ ಕಂಪನಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ