Sign In

By signing in or creating an account, you agree with Associated Broadcasting Company's Terms & Conditions and Privacy Policy.

Mizoram Election Result 2023: ಮಿಜೋರಾಂನಲ್ಲಿ 11 ಸ್ಥಾನಗಳಲ್ಲಿ ZPMಗೆ ಆರಂಭಿಕ ಮುನ್ನಡೆ

ಮಿಜೋರಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. 11 ಸ್ಥಾನಗಳಲ್ಲಿ ಝಡ್​ಪಿಎಂ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ನವೆಂಬರ್ 7 ರಂದು ಮಿಜೋರಾಂನ 40 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಎಕ್ಸಿಟ್ ಪೋಲ್ ಪ್ರಕಾರ ಕಳೆದ ಬಾರಿ 40 ಸ್ಥಾನಗಳ ಪೈಕಿ 27 ಸ್ಥಾನಗಳನ್ನು ಗೆದ್ದಿದ್ದ ಆಡಳಿತಾರೂಢ ಮಿಜೋ ನ್ಯಾಶನಲ್ ಫ್ರಂಟ್ ಈ ಬಾರಿ ಅರ್ಧದಷ್ಟನ್ನು ದಾಟಲು ಹೆಣಗಾಡುವುದರೊಂದಿಗೆ ಹಂಗ್ ಅಸೆಂಬ್ಲಿಯನ್ನು ಎಲ್ಲಾ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

Mizoram Election Result 2023: ಮಿಜೋರಾಂನಲ್ಲಿ 11 ಸ್ಥಾನಗಳಲ್ಲಿ ZPMಗೆ ಆರಂಭಿಕ ಮುನ್ನಡೆ
ಮತಎಣಿಕೆ
Follow us
ನಯನಾ ರಾಜೀವ್
|

Updated on: Dec 04, 2023 | 9:29 AM

ಮಿಜೋರಾಂ(Mizoram)ನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. 11 ಸ್ಥಾನಗಳಲ್ಲಿ ಝಡ್​ಪಿಎಂ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ನವೆಂಬರ್ 7 ರಂದು ಮಿಜೋರಾಂನ 40 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಎಕ್ಸಿಟ್ ಪೋಲ್ ಪ್ರಕಾರ ಕಳೆದ ಬಾರಿ 40 ಸ್ಥಾನಗಳ ಪೈಕಿ 27 ಸ್ಥಾನಗಳನ್ನು ಗೆದ್ದಿದ್ದ ಆಡಳಿತಾರೂಢ ಮಿಜೋ ನ್ಯಾಶನಲ್ ಫ್ರಂಟ್ ಈ ಬಾರಿ ಅರ್ಧದಷ್ಟನ್ನು ದಾಟಲು ಹೆಣಗಾಡುವುದರೊಂದಿಗೆ ಹಂಗ್ ಅಸೆಂಬ್ಲಿಯನ್ನು ಎಲ್ಲಾ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಅಂಚೆ ಮತಪತ್ರಗಳ ಲೆಕ್ಕಾಚಾರ ನಡೆಯುತ್ತಿದ್ದು, ZPM 11 ಸ್ಥಾನಗಳಲ್ಲಿ, MNF 8 ಮತ್ತು ಕಾಂಗ್ರೆಸ್ 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮಿಜೋರಾಂನಲ್ಲಿ ಮತ ಎಣಿಕೆಗೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಈ ಬಾರಿ ಮಿಜೋ ನ್ಯಾಷನಲ್ ಫ್ರಂಟ್ (MNF), ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆಯನ್ನು ನಿರೀಕ್ಷಿಸಲಾಗಿದೆ.

ಮತ ಎಣಿಕೆಗೂ ಮುನ್ನ ಹೊರಬಿದ್ದ ಬಹುತೇಕ ಎಕ್ಸಿಟ್ ಪೋಲ್ ಗಳು ಯಾವುದೇ ಪಕ್ಷಕ್ಕೆ ಬಹುಮತ ನೀಡಿಲ್ಲ. ಎಬಿಪಿ-ಸಿ ವೋಟರ್ ಎಕ್ಸಿಟ್ ಪೋಲ್ ಪ್ರಕಾರ, ಎಂಎನ್‌ಪಿ 15 ರಿಂದ 21 ಸ್ಥಾನಗಳನ್ನು, ಕಾಂಗ್ರೆಸ್ 2 ರಿಂದ 8, ಜಿಪಿಎಂ 12 ರಿಂದ 18 ಮತ್ತು ಇತರರು 0 ರಿಂದ 5 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.

ಅದೇ ಸಮಯದಲ್ಲಿ, ಇಂಡಿಯಾ ಟಿವಿ-ಸಿಎನ್‌ಎಕ್ಸ್‌ನ ಎಕ್ಸಿಟ್ ಪೋಲ್ ಪ್ರಕಾರ, ಮಿಜೋ ನ್ಯಾಶನಲ್ ಫ್ರಂಟ್ ಆಫ್ ಝೋರಾಮ್‌ತಂಗಾ ಮಿಜೋರಾಂನಲ್ಲಿ 14-18 ಸ್ಥಾನಗಳನ್ನು ಗೆಲ್ಲಬಹುದು. ಇಲ್ಲಿ ಕಾಂಗ್ರೆಸ್ 8-10 ಸ್ಥಾನ, ಜಿಪಂ 12-16 ಮತ್ತು ಬಿಜೆಪಿ 0-2 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.

ಮತ್ತಷ್ಟು ಓದಿ: Mizoram Election Results 2023: ಮಿಜೋರಾಂನಲ್ಲಿ ಇಂದು 174 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ, ತ್ರಿಕೋನ ಸ್ಪರ್ಧೆ

ಟೈಮ್ಸ್ ನೌ-ಇಟಿಜಿಯ ಎಕ್ಸಿಟ್ ಪೋಲ್ ಡೇಟಾ ಪ್ರಕಾರ, ಮಿಜೋರಾಂನಲ್ಲಿ ಎಂಎನ್‌ಎಫ್ 14-18 ಸೀಟುಗಳು, ಝಡ್‌ಪಿಎಂ 10-14 ಸ್ಥಾನಗಳು, ಕಾಂಗ್ರೆಸ್ 9-13 ಸ್ಥಾನಗಳು ಮತ್ತು ಬಿಜೆಪಿ 0-2 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.

ಜನ್ ಕಿ ಬಾತ್ ಸಮೀಕ್ಷೆಯ ಅಂಕಿಅಂಶಗಳು MNF 10-14 ಸ್ಥಾನಗಳನ್ನು ಮತ್ತು JPM 15-25 ಸ್ಥಾನಗಳನ್ನು ಪಡೆಯುತ್ತದೆ ಎಂದು ತೋರಿಸುತ್ತದೆ. ಅದೇ ಸಮಯದಲ್ಲಿ ಕಾಂಗ್ರೆಸ್ 5-9 ಸ್ಥಾನಗಳನ್ನು ಮತ್ತು ಬಿಜೆಪಿ 0-2 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.

ಆದಾಗ್ಯೂ, ಇಂಡಿಯಾ ಟುಡೇ ಆಕ್ಸಿಸ್-ಮೈ ಇಂಡಿಯಾ ಎಕ್ಸಿಟ್ ಪೋಲ್ ಮಿಜೋರಾಂನಲ್ಲಿ ಜೋರಾಮ್ ಪೀಪಲ್ಸ್ ಮೂವ್ಮೆಂಟ್ ಕ್ಲೀನ್ ಸ್ವೀಪ್ ಮಾಡಲಿದೆ ಎಂದು ಭವಿಷ್ಯ ನುಡಿದಿದೆ. ನಿರ್ಗಮನ ಸಮೀಕ್ಷೆಗಳ ಪ್ರಕಾರ, ಪ್ರಸ್ತುತ ಮುಖ್ಯಮಂತ್ರಿ ಝೋರಂತಂಗಾ ಅವರ ಮಿಜೋ ನ್ಯಾಷನಲ್ ಫ್ರಂಟ್ ಕೇವಲ 3-7 ಸ್ಥಾನಗಳಿಗೆ ಸೀಮಿತವಾಗಬಹುದು. ಇದಲ್ಲದೇ ಕಾಂಗ್ರೆಸ್ ಪಕ್ಷ 2-4 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದ್ದು, ಬಿಜೆಪಿ 0-2 ಸ್ಥಾನಗಳಿಗೆ ತೃಪ್ತಿಪಡುವ ನಿರೀಕ್ಷೆಯಿದೆ.

ಚುನಾವಣೆಯಲ್ಲಿ 18 ಮಹಿಳೆಯರು ಸೇರಿದಂತೆ ಒಟ್ಟು 174 ಅಭ್ಯರ್ಥಿಗಳು ಕಣದಲ್ಲಿದ್ದರು. MNF, ZPM ಮತ್ತು ಕಾಂಗ್ರೆಸ್ ತಲಾ 40 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಬಿಜೆಪಿ 13 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿದೆ. ಇದಲ್ಲದೆ ಆಮ್ ಆದ್ಮಿ ಪಕ್ಷವೂ ಇಲ್ಲಿ ನಾಲ್ಕು ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸಿದೆ. ಇದಲ್ಲದೆ, 17 ಸ್ವತಂತ್ರ ಅಭ್ಯರ್ಥಿಗಳೂ ಇದ್ದರು.

2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಎಂಎನ್‌ಎಫ್ 26 ಸ್ಥಾನಗಳನ್ನು ಗೆದ್ದಿತ್ತು ಎಂಬುದು ಗಮನಾರ್ಹ, ZPM ಎಂಟು ಸ್ಥಾನಗಳನ್ನು ಗೆದ್ದಿದ್ದರೆ ಮತ್ತು ಕಾಂಗ್ರೆಸ್ ಐದು ಸ್ಥಾನಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಕಳೆದ ಬಾರಿಯೂ ಇಲ್ಲಿಂದ ಒಂದು ಸ್ಥಾನ ಗೆಲ್ಲುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು