Big News: ಆಸ್ಪತ್ರೆಗೆ ನುಗ್ಗಿ ವೈದ್ಯರ ಮುಖಕ್ಕೆ ಹೊಡೆದ ಮಿಜೋರಾಂ ಸಿಎಂ ಮಗಳು; ವಿಡಿಯೋಗೆ ಭಾರೀ ಆಕ್ರೋಶ

ಈ ಘಟನೆಯ ನಂತರ ಸಿಎಂ ಝೋರಂತಂಗ ಶನಿವಾರ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್​ವೊಂದನ್ನು ಮಾಡಿದ್ದು, ಸಾರ್ವಜನಿಕ ಕ್ಷಮೆ ಯಾಚನೆಯ ಪತ್ರವನ್ನು ಹಂಚಿಕೊಂಡಿದ್ದಾರೆ.

Big News: ಆಸ್ಪತ್ರೆಗೆ ನುಗ್ಗಿ ವೈದ್ಯರ ಮುಖಕ್ಕೆ ಹೊಡೆದ ಮಿಜೋರಾಂ ಸಿಎಂ ಮಗಳು; ವಿಡಿಯೋಗೆ ಭಾರೀ ಆಕ್ರೋಶ
Image Credit source: Live Mint
Follow us
| Updated By: ಸುಷ್ಮಾ ಚಕ್ರೆ

Updated on: Aug 22, 2022 | 11:32 AM

ಐಜ್ವಾಲ್: ಮಿಜೋರಾಂ ಮುಖ್ಯಮಂತ್ರಿ ಝೋರಂತಂಗಾ (Mizoram Chief Minister Zoramthanga) ಅವರ ಮಗಳು ಮಿಲಾರಿ ಚಾಂಗ್ಟೆ ಅವರ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಪಾಯಿಂಟ್‌ಮೆಂಟ್ ಇಲ್ಲದೆ ಆಸ್ಪತ್ರೆಗೆ ಹೋಗಿದ್ದ ಅವರನ್ನು ಭೇಟಿಯಾಗಲು ವೈದ್ಯರು ನಿರಾಕರಿಸಿದ ಕಾರಣ ಆಕೆ ವೈದ್ಯರ ಮುಖಕ್ಕೆ ಹೊಡೆಯುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಆಕೆ ಐಜ್ವಾಲ್‌ನ ಕ್ಲಿನಿಕ್‌ನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಘಟನೆ ಕಳೆದ ಬುಧವಾರ ನಡೆದಿದೆ. ಚರ್ಮರೋಗದ ವೈದ್ಯರೊಂದಿಗೆ ಕನ್ಸಲ್ಟೇಷನ್​ಗಾಗಿ ಮಿಲಾರಿ ಚಾಂಗ್ಟೆ ಕ್ಲಿನಿಕ್‌ಗೆ ಭೇಟಿ ನೀಡುವ ಮೊದಲು ಅಪಾಯಿಂಟ್‌ಮೆಂಟ್ ಪಡೆಯಬೇಕೆಂದು ವೈದ್ಯರು ಹೇಳಿದ್ದರು. ಆದರೆ, ಅದಕ್ಕೆ ಒಪ್ಪದ ಮಿಲಾರಿ ಚಾಂಗ್ಟೆ ಬಾಗಿಲು ತಳ್ಳಿಕೊಂಡು ಒಳಗೆ ನುಗ್ಗಿ, ವೈದ್ಯರ ಬಳಿಗೆ ಹೋಗಿ ಅವರ ಮುಖಕ್ಕೆ ಹೊಡೆಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನೂ ಓದಿ: Viral Video: ನನ್ನ ತಲೆಗೂದಲು ಕಟ್ ಮಾಡುತ್ತೀರಾ ಪ್ಲೀಸ್…. ಮುದ್ದಾದ ನಾಯಿಯ ವಿಡಿಯೋ ವೈರಲ್

ಆಗ ಒಬ್ಬ ವ್ಯಕ್ತಿ ಬಂದು ಮಿಲಾರಿ ಚಾಂಗ್ಟೆ ಅವರನ್ನು ತಡೆದು, ಆಕೆಯ ಕೈಗಳನ್ನು ಹಿಡಿದು ಮೆಟ್ಟಿಲುಗಳ ಮೂಲಕ ಕರೆದುಕೊಂಡು ಹೋಗುತ್ತಿರುವುದನ್ನು ನೋಡಬಹುದು. ವರದಿಗಳ ಪ್ರಕಾರ, ತಪಾಸಣೆಗೆ ಬರುವ ಮುನ್ನ ವೈದ್ಯರು ಮುಖ್ಯಮಂತ್ರಿಯವರ ಮಗಳಿಗೆ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಅದಕ್ಕೆ ಒಪ್ಪದ ಆಕೆ ನೇರವಾಗಿ ಆಸ್ಪತ್ರೆಗೆ ಬಂದಿದ್ದಾರೆ.

ಈ ಘಟನೆಯ ನಂತರ, ಸಿಎಂ ಝೋರಂತಂಗ ಶನಿವಾರ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್​ವೊಂದನ್ನು ಮಾಡಿದ್ದು, ಅವರು ಮತ್ತು ಅವರ ಪತ್ನಿ ಸಹಿ ಮಾಡಿರುವ ಸಾರ್ವಜನಿಕ ಕ್ಷಮೆ ಯಾಚನೆಯ ಪತ್ರವನ್ನು ಹಂಚಿಕೊಂಡಿದ್ದಾರೆ. ತಮ್ಮ ಇಡೀ ಕುಟುಂಬವು ವೈದ್ಯರೊಂದಿಗೆ ತನ್ನ ಮಗಳ ವರ್ತನೆಯನ್ನು ಸಮರ್ಥಿಸಿಕೊಳ್ಳುವುದಿಲ್ಲ. ನಮಗೆ ಹೇಳಲು ಏನೂ ಇಲ್ಲ ಎಂದಿರುವ ಅವರು ವೈದ್ಯರಲ್ಲಿ ಕ್ಷಮೆ ಯಾಚಿಸಿದ್ದಾರೆ. ಮಗಳ ನಡವಳಿಕೆಯನ್ನು ತಾನು ಯಾವುದೇ ರೀತಿಯಲ್ಲಿ ಸಮರ್ಥಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ