AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಆಸ್ಪತ್ರೆಗೆ ನುಗ್ಗಿ ವೈದ್ಯರ ಮುಖಕ್ಕೆ ಹೊಡೆದ ಮಿಜೋರಾಂ ಸಿಎಂ ಮಗಳು; ವಿಡಿಯೋಗೆ ಭಾರೀ ಆಕ್ರೋಶ

ಈ ಘಟನೆಯ ನಂತರ ಸಿಎಂ ಝೋರಂತಂಗ ಶನಿವಾರ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್​ವೊಂದನ್ನು ಮಾಡಿದ್ದು, ಸಾರ್ವಜನಿಕ ಕ್ಷಮೆ ಯಾಚನೆಯ ಪತ್ರವನ್ನು ಹಂಚಿಕೊಂಡಿದ್ದಾರೆ.

Big News: ಆಸ್ಪತ್ರೆಗೆ ನುಗ್ಗಿ ವೈದ್ಯರ ಮುಖಕ್ಕೆ ಹೊಡೆದ ಮಿಜೋರಾಂ ಸಿಎಂ ಮಗಳು; ವಿಡಿಯೋಗೆ ಭಾರೀ ಆಕ್ರೋಶ
Image Credit source: Live Mint
TV9 Web
| Edited By: |

Updated on: Aug 22, 2022 | 11:32 AM

Share

ಐಜ್ವಾಲ್: ಮಿಜೋರಾಂ ಮುಖ್ಯಮಂತ್ರಿ ಝೋರಂತಂಗಾ (Mizoram Chief Minister Zoramthanga) ಅವರ ಮಗಳು ಮಿಲಾರಿ ಚಾಂಗ್ಟೆ ಅವರ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಪಾಯಿಂಟ್‌ಮೆಂಟ್ ಇಲ್ಲದೆ ಆಸ್ಪತ್ರೆಗೆ ಹೋಗಿದ್ದ ಅವರನ್ನು ಭೇಟಿಯಾಗಲು ವೈದ್ಯರು ನಿರಾಕರಿಸಿದ ಕಾರಣ ಆಕೆ ವೈದ್ಯರ ಮುಖಕ್ಕೆ ಹೊಡೆಯುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಆಕೆ ಐಜ್ವಾಲ್‌ನ ಕ್ಲಿನಿಕ್‌ನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಘಟನೆ ಕಳೆದ ಬುಧವಾರ ನಡೆದಿದೆ. ಚರ್ಮರೋಗದ ವೈದ್ಯರೊಂದಿಗೆ ಕನ್ಸಲ್ಟೇಷನ್​ಗಾಗಿ ಮಿಲಾರಿ ಚಾಂಗ್ಟೆ ಕ್ಲಿನಿಕ್‌ಗೆ ಭೇಟಿ ನೀಡುವ ಮೊದಲು ಅಪಾಯಿಂಟ್‌ಮೆಂಟ್ ಪಡೆಯಬೇಕೆಂದು ವೈದ್ಯರು ಹೇಳಿದ್ದರು. ಆದರೆ, ಅದಕ್ಕೆ ಒಪ್ಪದ ಮಿಲಾರಿ ಚಾಂಗ್ಟೆ ಬಾಗಿಲು ತಳ್ಳಿಕೊಂಡು ಒಳಗೆ ನುಗ್ಗಿ, ವೈದ್ಯರ ಬಳಿಗೆ ಹೋಗಿ ಅವರ ಮುಖಕ್ಕೆ ಹೊಡೆಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನೂ ಓದಿ: Viral Video: ನನ್ನ ತಲೆಗೂದಲು ಕಟ್ ಮಾಡುತ್ತೀರಾ ಪ್ಲೀಸ್…. ಮುದ್ದಾದ ನಾಯಿಯ ವಿಡಿಯೋ ವೈರಲ್

ಆಗ ಒಬ್ಬ ವ್ಯಕ್ತಿ ಬಂದು ಮಿಲಾರಿ ಚಾಂಗ್ಟೆ ಅವರನ್ನು ತಡೆದು, ಆಕೆಯ ಕೈಗಳನ್ನು ಹಿಡಿದು ಮೆಟ್ಟಿಲುಗಳ ಮೂಲಕ ಕರೆದುಕೊಂಡು ಹೋಗುತ್ತಿರುವುದನ್ನು ನೋಡಬಹುದು. ವರದಿಗಳ ಪ್ರಕಾರ, ತಪಾಸಣೆಗೆ ಬರುವ ಮುನ್ನ ವೈದ್ಯರು ಮುಖ್ಯಮಂತ್ರಿಯವರ ಮಗಳಿಗೆ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಅದಕ್ಕೆ ಒಪ್ಪದ ಆಕೆ ನೇರವಾಗಿ ಆಸ್ಪತ್ರೆಗೆ ಬಂದಿದ್ದಾರೆ.

ಈ ಘಟನೆಯ ನಂತರ, ಸಿಎಂ ಝೋರಂತಂಗ ಶನಿವಾರ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್​ವೊಂದನ್ನು ಮಾಡಿದ್ದು, ಅವರು ಮತ್ತು ಅವರ ಪತ್ನಿ ಸಹಿ ಮಾಡಿರುವ ಸಾರ್ವಜನಿಕ ಕ್ಷಮೆ ಯಾಚನೆಯ ಪತ್ರವನ್ನು ಹಂಚಿಕೊಂಡಿದ್ದಾರೆ. ತಮ್ಮ ಇಡೀ ಕುಟುಂಬವು ವೈದ್ಯರೊಂದಿಗೆ ತನ್ನ ಮಗಳ ವರ್ತನೆಯನ್ನು ಸಮರ್ಥಿಸಿಕೊಳ್ಳುವುದಿಲ್ಲ. ನಮಗೆ ಹೇಳಲು ಏನೂ ಇಲ್ಲ ಎಂದಿರುವ ಅವರು ವೈದ್ಯರಲ್ಲಿ ಕ್ಷಮೆ ಯಾಚಿಸಿದ್ದಾರೆ. ಮಗಳ ನಡವಳಿಕೆಯನ್ನು ತಾನು ಯಾವುದೇ ರೀತಿಯಲ್ಲಿ ಸಮರ್ಥಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ