AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಆಸ್ಪತ್ರೆಗೆ ನುಗ್ಗಿ ವೈದ್ಯರ ಮುಖಕ್ಕೆ ಹೊಡೆದ ಮಿಜೋರಾಂ ಸಿಎಂ ಮಗಳು; ವಿಡಿಯೋಗೆ ಭಾರೀ ಆಕ್ರೋಶ

ಈ ಘಟನೆಯ ನಂತರ ಸಿಎಂ ಝೋರಂತಂಗ ಶನಿವಾರ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್​ವೊಂದನ್ನು ಮಾಡಿದ್ದು, ಸಾರ್ವಜನಿಕ ಕ್ಷಮೆ ಯಾಚನೆಯ ಪತ್ರವನ್ನು ಹಂಚಿಕೊಂಡಿದ್ದಾರೆ.

Big News: ಆಸ್ಪತ್ರೆಗೆ ನುಗ್ಗಿ ವೈದ್ಯರ ಮುಖಕ್ಕೆ ಹೊಡೆದ ಮಿಜೋರಾಂ ಸಿಎಂ ಮಗಳು; ವಿಡಿಯೋಗೆ ಭಾರೀ ಆಕ್ರೋಶ
Image Credit source: Live Mint
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 22, 2022 | 11:32 AM

ಐಜ್ವಾಲ್: ಮಿಜೋರಾಂ ಮುಖ್ಯಮಂತ್ರಿ ಝೋರಂತಂಗಾ (Mizoram Chief Minister Zoramthanga) ಅವರ ಮಗಳು ಮಿಲಾರಿ ಚಾಂಗ್ಟೆ ಅವರ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಪಾಯಿಂಟ್‌ಮೆಂಟ್ ಇಲ್ಲದೆ ಆಸ್ಪತ್ರೆಗೆ ಹೋಗಿದ್ದ ಅವರನ್ನು ಭೇಟಿಯಾಗಲು ವೈದ್ಯರು ನಿರಾಕರಿಸಿದ ಕಾರಣ ಆಕೆ ವೈದ್ಯರ ಮುಖಕ್ಕೆ ಹೊಡೆಯುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಆಕೆ ಐಜ್ವಾಲ್‌ನ ಕ್ಲಿನಿಕ್‌ನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಘಟನೆ ಕಳೆದ ಬುಧವಾರ ನಡೆದಿದೆ. ಚರ್ಮರೋಗದ ವೈದ್ಯರೊಂದಿಗೆ ಕನ್ಸಲ್ಟೇಷನ್​ಗಾಗಿ ಮಿಲಾರಿ ಚಾಂಗ್ಟೆ ಕ್ಲಿನಿಕ್‌ಗೆ ಭೇಟಿ ನೀಡುವ ಮೊದಲು ಅಪಾಯಿಂಟ್‌ಮೆಂಟ್ ಪಡೆಯಬೇಕೆಂದು ವೈದ್ಯರು ಹೇಳಿದ್ದರು. ಆದರೆ, ಅದಕ್ಕೆ ಒಪ್ಪದ ಮಿಲಾರಿ ಚಾಂಗ್ಟೆ ಬಾಗಿಲು ತಳ್ಳಿಕೊಂಡು ಒಳಗೆ ನುಗ್ಗಿ, ವೈದ್ಯರ ಬಳಿಗೆ ಹೋಗಿ ಅವರ ಮುಖಕ್ಕೆ ಹೊಡೆಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನೂ ಓದಿ: Viral Video: ನನ್ನ ತಲೆಗೂದಲು ಕಟ್ ಮಾಡುತ್ತೀರಾ ಪ್ಲೀಸ್…. ಮುದ್ದಾದ ನಾಯಿಯ ವಿಡಿಯೋ ವೈರಲ್

ಆಗ ಒಬ್ಬ ವ್ಯಕ್ತಿ ಬಂದು ಮಿಲಾರಿ ಚಾಂಗ್ಟೆ ಅವರನ್ನು ತಡೆದು, ಆಕೆಯ ಕೈಗಳನ್ನು ಹಿಡಿದು ಮೆಟ್ಟಿಲುಗಳ ಮೂಲಕ ಕರೆದುಕೊಂಡು ಹೋಗುತ್ತಿರುವುದನ್ನು ನೋಡಬಹುದು. ವರದಿಗಳ ಪ್ರಕಾರ, ತಪಾಸಣೆಗೆ ಬರುವ ಮುನ್ನ ವೈದ್ಯರು ಮುಖ್ಯಮಂತ್ರಿಯವರ ಮಗಳಿಗೆ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಅದಕ್ಕೆ ಒಪ್ಪದ ಆಕೆ ನೇರವಾಗಿ ಆಸ್ಪತ್ರೆಗೆ ಬಂದಿದ್ದಾರೆ.

ಈ ಘಟನೆಯ ನಂತರ, ಸಿಎಂ ಝೋರಂತಂಗ ಶನಿವಾರ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್​ವೊಂದನ್ನು ಮಾಡಿದ್ದು, ಅವರು ಮತ್ತು ಅವರ ಪತ್ನಿ ಸಹಿ ಮಾಡಿರುವ ಸಾರ್ವಜನಿಕ ಕ್ಷಮೆ ಯಾಚನೆಯ ಪತ್ರವನ್ನು ಹಂಚಿಕೊಂಡಿದ್ದಾರೆ. ತಮ್ಮ ಇಡೀ ಕುಟುಂಬವು ವೈದ್ಯರೊಂದಿಗೆ ತನ್ನ ಮಗಳ ವರ್ತನೆಯನ್ನು ಸಮರ್ಥಿಸಿಕೊಳ್ಳುವುದಿಲ್ಲ. ನಮಗೆ ಹೇಳಲು ಏನೂ ಇಲ್ಲ ಎಂದಿರುವ ಅವರು ವೈದ್ಯರಲ್ಲಿ ಕ್ಷಮೆ ಯಾಚಿಸಿದ್ದಾರೆ. ಮಗಳ ನಡವಳಿಕೆಯನ್ನು ತಾನು ಯಾವುದೇ ರೀತಿಯಲ್ಲಿ ಸಮರ್ಥಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು