AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ನೋವು ಅನುಭವಿಸ್ತಿದ್ದ ಗರ್ಭಿಣಿಗೆ, ಹೆರಿಗೆ ಮಾಡಿಸಿದ ಶಾಸಕ! ಎಲ್ಲಿ?

ತೀವ್ರ ಹೆರಿಗೆ ನೋವು ಅನುಭವಿಸುತ್ತಿದ್ದ ಗರ್ಭಿಣಿಗೆ, ಶಾಸಕರೊಬ್ಬರು ಹೆರಿಗೆ ಮಾಡಿಸಿರುವ ಘಟನೆ ಮಿಜೋರಂನಲ್ಲಿ ನಡೆದಿದೆ. ಮಿಜೋರಾಂನ ಚಾಂಫೈ ಆಸ್ಪತ್ರೆಯಲ್ಲಿ ಕಾರ್ಯನಿವರ್ಹಿಸ್ತಿದ್ದ ಏಕೈಕ ಸ್ತ್ರೀರೋಗತಜ್ಞರೂ ರಜೆಯಲ್ಲಿದ್ದರು. ಹೀಗಾಗಿ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸುವವರು ಯಾರೂ ಇಲ್ಲದೆ ಆಸ್ಪತ್ರೆಯಲ್ಲಿ ನರಳುತ್ತಿದ್ದರು. ಗಂಡು ಮಗುವಿಗೆ ಜನ್ಮ ಆ ಸಂದರ್ಭದಲ್ಲಿ ಸ್ವತಃ ವೈದ್ಯರಾಗಿರುವ ಮಿಜೋರಾಂನ ಶಾಸಕ, 62 ವರ್ಷದ ಝಡ್. ಆರ್. ಥಿಯಾಮ್ಸಂಗಾ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ. ಶಾಸಕ ಥಿಯಾಮ್ಸಂಗಾ ಸೋಮವಾರದಂದು ದೂರದ ಚಂಪಾ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪೀಡಿತರು ಹಾಗೂ ಭೂಕಂಪ […]

ಹೆರಿಗೆ ನೋವು ಅನುಭವಿಸ್ತಿದ್ದ ಗರ್ಭಿಣಿಗೆ, ಹೆರಿಗೆ ಮಾಡಿಸಿದ ಶಾಸಕ! ಎಲ್ಲಿ?
ಸಾಧು ಶ್ರೀನಾಥ್​
|

Updated on: Aug 12, 2020 | 11:23 AM

Share

ತೀವ್ರ ಹೆರಿಗೆ ನೋವು ಅನುಭವಿಸುತ್ತಿದ್ದ ಗರ್ಭಿಣಿಗೆ, ಶಾಸಕರೊಬ್ಬರು ಹೆರಿಗೆ ಮಾಡಿಸಿರುವ ಘಟನೆ ಮಿಜೋರಂನಲ್ಲಿ ನಡೆದಿದೆ. ಮಿಜೋರಾಂನ ಚಾಂಫೈ ಆಸ್ಪತ್ರೆಯಲ್ಲಿ ಕಾರ್ಯನಿವರ್ಹಿಸ್ತಿದ್ದ ಏಕೈಕ ಸ್ತ್ರೀರೋಗತಜ್ಞರೂ ರಜೆಯಲ್ಲಿದ್ದರು. ಹೀಗಾಗಿ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸುವವರು ಯಾರೂ ಇಲ್ಲದೆ ಆಸ್ಪತ್ರೆಯಲ್ಲಿ ನರಳುತ್ತಿದ್ದರು.

ಗಂಡು ಮಗುವಿಗೆ ಜನ್ಮ ಆ ಸಂದರ್ಭದಲ್ಲಿ ಸ್ವತಃ ವೈದ್ಯರಾಗಿರುವ ಮಿಜೋರಾಂನ ಶಾಸಕ, 62 ವರ್ಷದ ಝಡ್. ಆರ್. ಥಿಯಾಮ್ಸಂಗಾ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ. ಶಾಸಕ ಥಿಯಾಮ್ಸಂಗಾ ಸೋಮವಾರದಂದು ದೂರದ ಚಂಪಾ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪೀಡಿತರು ಹಾಗೂ ಭೂಕಂಪ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು.

ಆ ವೇಳೆ, ಗರ್ಭಿಣಿ ಮಹಿಳೆಯೊಬ್ಬರು ತೀವ್ರವಾದ ಹೆರಿಗೆ ನೋವು ಹಾಗೂ ರಕ್ತಸ್ರಾವದಿಂದ ಬಳಲುತ್ತಿದ್ದಾರೆ ಎಂಬುದು ತಿಳಿದಿದೆ. ಕೂಡಲೇ ಎಚ್ಚೆತ್ತ ಶಾಸಕ ಜಿಲ್ಲಾಸ್ಪತ್ರೆಗೆ ತೆರಳಿ ಸ್ವತಃ ತಾವೇ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ. ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯದಿಂದ ಇದ್ದಾರೆ ಎಂದು ತಿಳಿದುಬಂದಿದೆ.

ಡಾ. ಝಡ್. ಆರ್. ಥಿಯಾಮ್ಸಂಗಾ 2018 ರ ನವೆಂಬರ್ ವಿಧಾನಸಭಾ ಚುನಾವಣೆಯಲ್ಲಿ ಎಂಎಂಎಸ್ ಪಕ್ಷದ ಅಭ್ಯರ್ಥಿಯಾಗಿ ಜಯಗಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂಡಳಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಶಾಸಕ, ಈ ಭಾಗದ ಜನರಿಗೆ ತುರ್ತುಸೇವೆ ಅಗತ್ಯವಿದ್ದಾಗಲೆಲ್ಲ ಅಲ್ಲಿಗೆ ಸ್ವತಃ ತೆರಳಿ ವೈದ್ಯಕೀಯ ಚಿಕಿತ್ಸೆ ನೀಡುತ್ತಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ