ಹೆರಿಗೆ ನೋವು ಅನುಭವಿಸ್ತಿದ್ದ ಗರ್ಭಿಣಿಗೆ, ಹೆರಿಗೆ ಮಾಡಿಸಿದ ಶಾಸಕ! ಎಲ್ಲಿ?

ತೀವ್ರ ಹೆರಿಗೆ ನೋವು ಅನುಭವಿಸುತ್ತಿದ್ದ ಗರ್ಭಿಣಿಗೆ, ಶಾಸಕರೊಬ್ಬರು ಹೆರಿಗೆ ಮಾಡಿಸಿರುವ ಘಟನೆ ಮಿಜೋರಂನಲ್ಲಿ ನಡೆದಿದೆ. ಮಿಜೋರಾಂನ ಚಾಂಫೈ ಆಸ್ಪತ್ರೆಯಲ್ಲಿ ಕಾರ್ಯನಿವರ್ಹಿಸ್ತಿದ್ದ ಏಕೈಕ ಸ್ತ್ರೀರೋಗತಜ್ಞರೂ ರಜೆಯಲ್ಲಿದ್ದರು. ಹೀಗಾಗಿ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸುವವರು ಯಾರೂ ಇಲ್ಲದೆ ಆಸ್ಪತ್ರೆಯಲ್ಲಿ ನರಳುತ್ತಿದ್ದರು. ಗಂಡು ಮಗುವಿಗೆ ಜನ್ಮ ಆ ಸಂದರ್ಭದಲ್ಲಿ ಸ್ವತಃ ವೈದ್ಯರಾಗಿರುವ ಮಿಜೋರಾಂನ ಶಾಸಕ, 62 ವರ್ಷದ ಝಡ್. ಆರ್. ಥಿಯಾಮ್ಸಂಗಾ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ. ಶಾಸಕ ಥಿಯಾಮ್ಸಂಗಾ ಸೋಮವಾರದಂದು ದೂರದ ಚಂಪಾ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪೀಡಿತರು ಹಾಗೂ ಭೂಕಂಪ […]

ಹೆರಿಗೆ ನೋವು ಅನುಭವಿಸ್ತಿದ್ದ ಗರ್ಭಿಣಿಗೆ, ಹೆರಿಗೆ ಮಾಡಿಸಿದ ಶಾಸಕ! ಎಲ್ಲಿ?
ಸಾಧು ಶ್ರೀನಾಥ್​

Updated on: Aug 12, 2020 | 11:23 AM

ತೀವ್ರ ಹೆರಿಗೆ ನೋವು ಅನುಭವಿಸುತ್ತಿದ್ದ ಗರ್ಭಿಣಿಗೆ, ಶಾಸಕರೊಬ್ಬರು ಹೆರಿಗೆ ಮಾಡಿಸಿರುವ ಘಟನೆ ಮಿಜೋರಂನಲ್ಲಿ ನಡೆದಿದೆ. ಮಿಜೋರಾಂನ ಚಾಂಫೈ ಆಸ್ಪತ್ರೆಯಲ್ಲಿ ಕಾರ್ಯನಿವರ್ಹಿಸ್ತಿದ್ದ ಏಕೈಕ ಸ್ತ್ರೀರೋಗತಜ್ಞರೂ ರಜೆಯಲ್ಲಿದ್ದರು. ಹೀಗಾಗಿ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸುವವರು ಯಾರೂ ಇಲ್ಲದೆ ಆಸ್ಪತ್ರೆಯಲ್ಲಿ ನರಳುತ್ತಿದ್ದರು.

ಗಂಡು ಮಗುವಿಗೆ ಜನ್ಮ
ಆ ಸಂದರ್ಭದಲ್ಲಿ ಸ್ವತಃ ವೈದ್ಯರಾಗಿರುವ ಮಿಜೋರಾಂನ ಶಾಸಕ, 62 ವರ್ಷದ ಝಡ್. ಆರ್. ಥಿಯಾಮ್ಸಂಗಾ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ. ಶಾಸಕ ಥಿಯಾಮ್ಸಂಗಾ ಸೋಮವಾರದಂದು ದೂರದ ಚಂಪಾ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪೀಡಿತರು ಹಾಗೂ ಭೂಕಂಪ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು.

ಆ ವೇಳೆ, ಗರ್ಭಿಣಿ ಮಹಿಳೆಯೊಬ್ಬರು ತೀವ್ರವಾದ ಹೆರಿಗೆ ನೋವು ಹಾಗೂ ರಕ್ತಸ್ರಾವದಿಂದ ಬಳಲುತ್ತಿದ್ದಾರೆ ಎಂಬುದು ತಿಳಿದಿದೆ. ಕೂಡಲೇ ಎಚ್ಚೆತ್ತ ಶಾಸಕ ಜಿಲ್ಲಾಸ್ಪತ್ರೆಗೆ ತೆರಳಿ ಸ್ವತಃ ತಾವೇ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ. ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯದಿಂದ ಇದ್ದಾರೆ ಎಂದು ತಿಳಿದುಬಂದಿದೆ.

ಡಾ. ಝಡ್. ಆರ್. ಥಿಯಾಮ್ಸಂಗಾ 2018 ರ ನವೆಂಬರ್ ವಿಧಾನಸಭಾ ಚುನಾವಣೆಯಲ್ಲಿ ಎಂಎಂಎಸ್ ಪಕ್ಷದ ಅಭ್ಯರ್ಥಿಯಾಗಿ ಜಯಗಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂಡಳಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಶಾಸಕ, ಈ ಭಾಗದ ಜನರಿಗೆ ತುರ್ತುಸೇವೆ ಅಗತ್ಯವಿದ್ದಾಗಲೆಲ್ಲ ಅಲ್ಲಿಗೆ ಸ್ವತಃ ತೆರಳಿ ವೈದ್ಯಕೀಯ ಚಿಕಿತ್ಸೆ ನೀಡುತ್ತಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us