AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಸಚಿವ ಸಂಪುಟ ಪುನಾರಚನೆಗೆ ಎಂಕೆ ಸ್ಟಾಲಿನ್ ಚಿಂತನೆ?

ಉತ್ತಮವಾಗಿ ಕಾರ್ಯನಿರ್ವಹಿಸದ ಕನಿಷ್ಠ ಇಬ್ಬರು ಸಚಿವರನ್ನು ರಾಜೀನಾಮೆ ನೀಡುವಂತೆ ಹೇಳಿದರೆ, ರಾಜ್ಯದ ಹಣಕಾಸು ಸಚಿವ ಡಾ.ಪಳನಿವೇಲ್ ತ್ಯಾಗ ರಾಜನ್ (ಪಿಟಿಆರ್) ಸ್ಥಾನ ಕಳೆದುಕೊಳ್ಳಲಿದ್ದಾರೆಯೇ ಎಂಬುದು ಸದ್ಯದ ಪ್ರಶ್ನೆ.

ತಮಿಳುನಾಡು ಸಚಿವ ಸಂಪುಟ ಪುನಾರಚನೆಗೆ ಎಂಕೆ ಸ್ಟಾಲಿನ್ ಚಿಂತನೆ?
ಎಂ.ಕೆ ಸ್ಟಾಲಿನ್
ರಶ್ಮಿ ಕಲ್ಲಕಟ್ಟ
|

Updated on: May 08, 2023 | 8:19 PM

Share

ಚೆನ್ನೈ: ಎಂಕೆ ಸ್ಟಾಲಿನ್ (MK Stalin)ತಮ್ಮ ಸಚಿವ ಸಂಪುಟದ ಪುನಾರಚನೆ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮುಖ್ಯಮಂತ್ರಿ ಕುಟುಂಬದ ವಿರುದ್ಧ ಹಣಕಾಸು ಸಚಿವ ಪಳನಿವೇಲ್ ತ್ಯಾಗ ರಾಜನ್ (Palanivel Thiaga Rajan) ಅವರು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂಬ ವಿವಾದದ ಬೆನ್ನಲ್ಲೇ  ತಮಿಳುನಾಡು (Tamil Nadu) ರಾಜಕೀಯದಲ್ಲಿ ಈ ಸುದ್ದಿ ಕೇಳಿ ಬಂದಿದೆ. ಈ ತಿಂಗಳ ಅಂತ್ಯದಲ್ಲಿ ಮುಖ್ಯಮಂತ್ರಿ ವಿದೇಶಕ್ಕೆ ತೆರಳಲಿರುವ ಕಾರಣ ಮುಂದಿನ ಎರಡು ವಾರಗಳಲ್ಲಿ ತಮಿಳುನಾಡು ಸಚಿವ ಸಂಪುಟ ಪುನಾರಚನೆಯಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮನ್ನಾರ್ಗುಡಿ ಕ್ಷೇತ್ರವನ್ನು ಪ್ರತಿನಿಧಿಸುವ ಡಿಎಂಕೆ ಶಾಸಕ ಟಿಆರ್‌ಬಿ ರಾಜಾ ಅವರನ್ನು ಸೇರ್ಪಡೆಗೊಳಿಸಬಹುದು ಎಂದು ಕೆಲವು ಡಿಎಂಕೆ ನಾಯಕರು ಎನ್‌ಡಿಟಿವಿಗೆ ತಿಳಿಸಿದ್ದಾರೆ. ಟಿಆರ್‌ಬಿ ರಾಜಾ ಮೂರು ಬಾರಿ ಶಾಸಕರಾಗಿದ್ದಾರೆ ಮತ್ತು ಡಿಎಂಕೆ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಟಿಆರ್ ಬಾಲು ಅವರ ಪುತ್ರ.

ಶಂಕರಕೋವಿಲ್ ಶಾಸಕ ಇ ರಾಜಾ ಅವರ ಹೆಸರು ಕೂಡಾ ಸಚಿವ ಸ್ಥಾನಕ್ಕೆ ಕೇಳಿಬರುತ್ತಿದೆ.

ರಾಜ್ಯ ಸಚಿವ ಸಂಪುಟವು 53 ಸಚಿವರನ್ನು ಹೊಂದಿದ್ದು, ಯಾವುದೇ ಹೊಸ ಸೇರ್ಪಡೆ ಎಂದರೆ ಕೆಲವರನ್ನು ಬಿಡಲು ಕೇಳುವುದು ಎಂದು ಕೆಲವರು ಹೇಳುತ್ತಿದ್ದಾರೆ.

ಉತ್ತಮವಾಗಿ ಕಾರ್ಯನಿರ್ವಹಿಸದ ಕನಿಷ್ಠ ಇಬ್ಬರು ಸಚಿವರನ್ನು ರಾಜೀನಾಮೆ ನೀಡುವಂತೆ ಹೇಳಿದರೆ, ರಾಜ್ಯದ ಹಣಕಾಸು ಸಚಿವ ಡಾ.ಪಳನಿವೇಲ್ ತ್ಯಾಗ ರಾಜನ್ (ಪಿಟಿಆರ್) ಸ್ಥಾನ ಕಳೆದುಕೊಳ್ಳಲಿದ್ದಾರೆಯೇ ಎಂಬುದು ಸದ್ಯದ ಪ್ರಶ್ನೆ.

ಕಳೆದ ವಾರ, ಮುಖ್ಯಮಂತ್ರಿಯವರು ಪಿಟಿಆರ್ ಆಡಿಯೊ ಫೈಲ್‌ಗಳನ್ನು “ಅಗ್ಗದ ರಾಜಕೀಯ” ಎಂದು ತಳ್ಳಿಹಾಕಿದರು, ಇದರಲ್ಲಿ ಸಚಿವರು ಡಿಎಂಕೆಯ ಮೊದಲ ಕುಟುಂಬದ ಆಸ್ತಿಯ ಬಗ್ಗೆ ಕೆಲವು ಟೀಕೆಗಳನ್ನು ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Kerala boat tragedy: ಬೋಟ್​​ನ ಗಾಜು ಕೈಯಿಂದಲೇ ಒಡೆದು 7 ಜನರನ್ನು ರಕ್ಷಿಸಿದ ರಶೀದ್, ತಾನೂರಿನ ಸ್ಥಳೀಯರೇ ರಿಯಲ್ ಹೀರೋಗಳು

ರಾಜ್ಯ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಬಿಡುಗಡೆ ಮಾಡಿದ ಎರಡು ಆಡಿಯೋ ಕ್ಲಿಪ್‌ಗಳಲ್ಲಿ ಪಿಟಿಆರ್ ಸ್ಟಾಲಿನ್ ಅವರ ಪುತ್ರ ಉದಯನಿಧಿ ಮತ್ತು ಅಳಿಯ ವಿ ಶಬರೇಶನ್ ಅವರ ಬಗ್ಗೆ ಕೆಲವು ಟೀಕೆಗಳನ್ನು ಮಾಡಿದ್ದಾರೆ ಎಂದು ಹೇಳಲಾಗಿದೆ, ಇದನ್ನು ಹಣಕಾಸು ಸಚಿವರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಸಚಿವರು ಆರೋಪಗಳನ್ನು ನಿರಾಕರಿಸಿದ್ದು ಸುಧಾರಿತ ತಂತ್ರಜ್ಞಾನವನ್ನು ಬಳಸಿಕೊಂಡು ಕ್ಲಿಪ್‌ಗಳನ್ನು ಡಿಜಿಟಲ್ ಆಗಿ ಬದಲಾಯಿಸಲಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!