AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ರಾಜ್ಯ ಸರ್ಕಾರದ ವಿರುದ್ಧ ಶಾಸಕನ ಪ್ರತಿಭಟನೆ; ಪಾರ್ಕ್​​ನಲ್ಲಿ 12 ತಾಸು ಓಡುವುದಾಗಿ ಘೋಷಣೆ

ನಾನು ಅಶೋಕ್​ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುತ್ತೇನೆ. ಆದರೆ ಯುವಜನರ ಸಮಸ್ಯೆಗಳನ್ನು ಎತ್ತಿ ತೋರಿಸಿ, ಅದನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದು ಯಾದವ್​ ಹೇಳಿದ್ದಾರೆ.

ರಾಜಸ್ಥಾನ ರಾಜ್ಯ ಸರ್ಕಾರದ ವಿರುದ್ಧ ಶಾಸಕನ ಪ್ರತಿಭಟನೆ; ಪಾರ್ಕ್​​ನಲ್ಲಿ 12 ತಾಸು ಓಡುವುದಾಗಿ ಘೋಷಣೆ
ರಾಜಸ್ಥಾನ ಶಾಸಕ
Follow us
TV9 Web
| Updated By: Lakshmi Hegde

Updated on:Mar 26, 2022 | 7:35 PM

ಜೈಪುರ: ಬೆಹ್ರೋರ್ ವಿಧಾನಸಭೆ ಕ್ಷೇತ್ರದ ಸ್ವತಂತ್ರ ಶಾಸಕ ಬಲ್ಜೀತ್​ ಯಾದವ್ ಅವರು ಶುಕ್ರವಾರ ಸೆಂಟ್ರಲ್​ ಪಾರ್ಕ್​​ನಲ್ಲಿ ಓಟ ಶುರುಮಾಡಿದ್ದಾರೆ. ರಾಜಸ್ಥಾನ ರಾಜ್ಯದಲ್ಲಿರುವ ನಿರುದ್ಯೋಗ ಮತ್ತು ಭ್ರಷ್ಟಾಚಾರದ ವಿರುದ್ಧವಾಗಿ ನಾನು ಪ್ರತಿಭಟನೆ ನಡೆಸುತ್ತಿದ್ದೇನೆ. ಹೀಗಾಗಿ ಇಲ್ಲಿ 12 ತಾಸು ಓಡಲು ನಿರ್ಧರಿಸಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಲೈವ್​ ಬಂದು ಹೇಳಿದ್ದಾರೆ.  ಅದಕ್ಕೂ ಮೊದಲು ಗುರುವಾರ ರಾಜಸ್ಥಾನ ವಿಧಾನಸಭೆಯಲ್ಲಿ ಕೂಡ ಇದೇ ಘೋಷಣೆ ಮಾಡಿದ್ದರು. 

ನಾನು ಅಶೋಕ್​ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುತ್ತೇನೆ. ಆದರೆ ಯುವಜನರ ಸಮಸ್ಯೆಗಳನ್ನು ಎತ್ತಿ ತೋರಿಸಿ, ಅದನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ. ನಾನೊಬ್ಬ ಸ್ವತಂತ್ರ್ಯ ಅಭ್ಯರ್ಥಿ. ನಾನು ಸದನದಲ್ಲಿ ಜಾಸ್ತಿ ಮಾತನಾಡಲು ಸಾಧ್ಯವಿಲ್ಲ. ಆದರೆ ಹೀಗೆ ಓಡಿ ಪ್ರತಿಭಟನೆ ಮಾಡುವ ಮೂಲಕ ಅಸಮಾಧಾನ ಹೊರಹಾಕುತ್ತಿದ್ದೇನೆ. ಈ ರಾಜ್ಯದಲ್ಲಿ ಯುವಜನರು ಎಷ್ಟು ಕಷ್ಟಪಡುತ್ತಿದ್ದಾರೆ ಎಂಬುದನ್ನು ತೋರಿಸುತ್ತೇನೆ ಎಂದು ಬಲ್ಜಿತ್ ಯಾದವ್ ಹೇಳಿದ್ದಾರೆ. ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಓಟ ಕೈಬಿಡುವಂತೆ  ಅನೇಕರು ಹೇಳಿದರೂ ಕೇಳದೆ ಪ್ರತಿಭಟನೆ ಮುಂದುವರಿಸುತ್ತಲೇ ಇದ್ದ ಅವರನ್ನು ನಂತರ ಆಂಬುಲೆನ್ಸ್ ಮೂಲಕ ಕರೆದುಕೊಂಡು ಹೋಗಲಾಗಿದೆ.

ಇದನ್ನೂ ಓದಿ: ಖ್ಯಾತ ಹೀರೋ ಜತೆ ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ

Published On - 9:29 am, Sat, 26 March 22

ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್