AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ರಾಜ್ಯ ಸರ್ಕಾರದ ವಿರುದ್ಧ ಶಾಸಕನ ಪ್ರತಿಭಟನೆ; ಪಾರ್ಕ್​​ನಲ್ಲಿ 12 ತಾಸು ಓಡುವುದಾಗಿ ಘೋಷಣೆ

ನಾನು ಅಶೋಕ್​ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುತ್ತೇನೆ. ಆದರೆ ಯುವಜನರ ಸಮಸ್ಯೆಗಳನ್ನು ಎತ್ತಿ ತೋರಿಸಿ, ಅದನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದು ಯಾದವ್​ ಹೇಳಿದ್ದಾರೆ.

ರಾಜಸ್ಥಾನ ರಾಜ್ಯ ಸರ್ಕಾರದ ವಿರುದ್ಧ ಶಾಸಕನ ಪ್ರತಿಭಟನೆ; ಪಾರ್ಕ್​​ನಲ್ಲಿ 12 ತಾಸು ಓಡುವುದಾಗಿ ಘೋಷಣೆ
ರಾಜಸ್ಥಾನ ಶಾಸಕ
TV9 Web
| Edited By: |

Updated on:Mar 26, 2022 | 7:35 PM

Share

ಜೈಪುರ: ಬೆಹ್ರೋರ್ ವಿಧಾನಸಭೆ ಕ್ಷೇತ್ರದ ಸ್ವತಂತ್ರ ಶಾಸಕ ಬಲ್ಜೀತ್​ ಯಾದವ್ ಅವರು ಶುಕ್ರವಾರ ಸೆಂಟ್ರಲ್​ ಪಾರ್ಕ್​​ನಲ್ಲಿ ಓಟ ಶುರುಮಾಡಿದ್ದಾರೆ. ರಾಜಸ್ಥಾನ ರಾಜ್ಯದಲ್ಲಿರುವ ನಿರುದ್ಯೋಗ ಮತ್ತು ಭ್ರಷ್ಟಾಚಾರದ ವಿರುದ್ಧವಾಗಿ ನಾನು ಪ್ರತಿಭಟನೆ ನಡೆಸುತ್ತಿದ್ದೇನೆ. ಹೀಗಾಗಿ ಇಲ್ಲಿ 12 ತಾಸು ಓಡಲು ನಿರ್ಧರಿಸಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಲೈವ್​ ಬಂದು ಹೇಳಿದ್ದಾರೆ.  ಅದಕ್ಕೂ ಮೊದಲು ಗುರುವಾರ ರಾಜಸ್ಥಾನ ವಿಧಾನಸಭೆಯಲ್ಲಿ ಕೂಡ ಇದೇ ಘೋಷಣೆ ಮಾಡಿದ್ದರು. 

ನಾನು ಅಶೋಕ್​ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುತ್ತೇನೆ. ಆದರೆ ಯುವಜನರ ಸಮಸ್ಯೆಗಳನ್ನು ಎತ್ತಿ ತೋರಿಸಿ, ಅದನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ. ನಾನೊಬ್ಬ ಸ್ವತಂತ್ರ್ಯ ಅಭ್ಯರ್ಥಿ. ನಾನು ಸದನದಲ್ಲಿ ಜಾಸ್ತಿ ಮಾತನಾಡಲು ಸಾಧ್ಯವಿಲ್ಲ. ಆದರೆ ಹೀಗೆ ಓಡಿ ಪ್ರತಿಭಟನೆ ಮಾಡುವ ಮೂಲಕ ಅಸಮಾಧಾನ ಹೊರಹಾಕುತ್ತಿದ್ದೇನೆ. ಈ ರಾಜ್ಯದಲ್ಲಿ ಯುವಜನರು ಎಷ್ಟು ಕಷ್ಟಪಡುತ್ತಿದ್ದಾರೆ ಎಂಬುದನ್ನು ತೋರಿಸುತ್ತೇನೆ ಎಂದು ಬಲ್ಜಿತ್ ಯಾದವ್ ಹೇಳಿದ್ದಾರೆ. ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಓಟ ಕೈಬಿಡುವಂತೆ  ಅನೇಕರು ಹೇಳಿದರೂ ಕೇಳದೆ ಪ್ರತಿಭಟನೆ ಮುಂದುವರಿಸುತ್ತಲೇ ಇದ್ದ ಅವರನ್ನು ನಂತರ ಆಂಬುಲೆನ್ಸ್ ಮೂಲಕ ಕರೆದುಕೊಂಡು ಹೋಗಲಾಗಿದೆ.

ಇದನ್ನೂ ಓದಿ: ಖ್ಯಾತ ಹೀರೋ ಜತೆ ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ

Published On - 9:29 am, Sat, 26 March 22

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು