AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ನಾಯಕತ್ವದ ಬದಲಾವಣೆ ಇಲ್ಲ; ಸೋನಿಯಾ ಗಾಂಧಿಗೆ ವರದಿ ಸಲ್ಲಿಸಿದ ಎಐಸಿಸಿ ಸಮಿತಿ

Amarinder Singh: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ ಎಂದು ಹೇಳಿದ ಸಮಿತಿ ದಲಿತ ಮುಖಂಡರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಸೂಚಿಸಿತು. ದಲಿತ ನಾಯಕನನ್ನು ಉಪ ಮುಖ್ಯಮಂತ್ರಿ ಆಗಿ ಮಾಡಬೇಕೆಂದು ಅದು ಶಿಫಾರಸು ಮಾಡಿದೆ.

ಪಂಜಾಬ್​ನಲ್ಲಿ ನಾಯಕತ್ವದ ಬದಲಾವಣೆ ಇಲ್ಲ; ಸೋನಿಯಾ ಗಾಂಧಿಗೆ ವರದಿ ಸಲ್ಲಿಸಿದ ಎಐಸಿಸಿ ಸಮಿತಿ
ಅಮರಿಂದರ್ ಸಿಂಗ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jun 10, 2021 | 4:36 PM

Share

ಅಮೃತಸರ: ಪಂಜಾಬ್‌ನಲ್ಲಿ ಭಿನ್ನಮತ ಕೊನೆಗೊಳಿಸಲು ರಚಿಸಲಾದ ಮೂರು ಸದಸ್ಯರ ಎಐಸಿಸಿ ಸಮಿತಿ ತನ್ನ ವರದಿಯನ್ನು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದೆ. ಶಾಸಕರಲ್ಲಿ ಹೆಚ್ಚಿನವರು ಸಿಎಂ ಅಮರಿಂದರ್ ಸಿಂಗ್ ಅವರೊಂದಿಗೆ ಇದ್ದಾರೆ ಮತ್ತು ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಅಗತ್ಯವಿಲ್ಲ ಎಂದು ಸಮಿತಿ ಹೇಳಿದೆ. ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ ಎಂದು ಹೇಳಿದ ಸಮಿತಿ ದಲಿತ ಮುಖಂಡರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಸೂಚಿಸಿತು. ದಲಿತ ನಾಯಕನನ್ನು ಉಪ ಮುಖ್ಯಮಂತ್ರಿ ಆಗಿ ಮಾಡಬೇಕೆಂದು ಅದು ಶಿಫಾರಸು ಮಾಡಿದೆ. ಕೆಲವು ಶಾಸಕರು “ಅತೃಪ್ತಿ” ಹೊಂದಿದ್ದಾರೆ ಆದರೆ ಅಮರಿಂದರ್ ಸಿಂಗ್ ವಿರುದ್ಧ ಅಲ್ಲ ಎಂದು ಸಮಿತಿ ಹೇಳಿದೆ. ಅದೇ ವೇಳೆ ಹೊಸ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ನೇಮಿಸಲು ಸಮಿತಿ ಶಿಫಾರಸು ಮಾಡಿದೆ.

ನವಜೋತ್ ಸಿಂಗ್ ಸಿಧು ಮತ್ತು ಅಮರಿಂದರ್ ಸಿಂಗ್ ಬಣಗಳ ನಡುವೆ ಹೆಚ್ಚುತ್ತಿರುವ ಬಿರುಕು ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ಕಳೆದ ತಿಂಗಳು ಈ ಸಮಿತಿಯನ್ನು ರಚಿಸಿದ್ದರು. ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪಂಜಾಬ್ ವ್ಯವಹಾರಗಳ ಉಸ್ತುವಾರಿ ಹರೀಶ್ ರಾವತ್ ಮತ್ತು ಮಾಜಿ ಸಂಸದ ಜೆಪಿ ಅಗರ್ವಾಲ್ ಅವರನ್ನೊಳಗೊಂಡ ಸಮಿತಿಯು ಪರಿಷ್ಕರಿಸಿದ ಪಕ್ಷದ ಘಟಕದಲ್ಲಿ ಎಲ್ಲಾ ವಿಭಾಗಗಳು, ಜಾತಿಗಳು ಮತ್ತು ಪ್ರದೇಶಗಳಿಗೆ ಅವಕಾಶ ಕಲ್ಪಿಸುವಂತೆ ಸೂಚಿಸಿದೆ.

ನವಜೋತ್ ಸಿಂಗ್ ಸಿಧು ಅವರನ್ನು ಮತ್ತೆ ಮುಂದೆ ತರುವುದಕ್ಕಾಗಿ “ಸೂಕ್ತವಾಗಿ ಸ್ಥಳಾವಕಾಶ” ನೀಡಬೇಕು ಎಂದು ಅದು ಹೇಳಿದೆ. ಈ ಸಮಿತಿ ಈ ಹಿಂದೆ ಕಾಂಗ್ರೆಸ್ ಶಾಸಕರಾದ ಸಿಧು ಮತ್ತು ಅಮರಿಂದರ್ ಅವರನ್ನು ಭೇಟಿ ಮಾಡಿತ್ತು.

ಸಿಧು ಅವರು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರೊಂದಿಗೆ ಜಗಳವಾಡಿದ್ದಾರೆ ಮತ್ತು ರಾಜ್ಯದಲ್ಲಿ ಪ್ರಮುಖ ವಿಷಯದ ಬಗ್ಗೆ ಎಸ್ಐಟಿ ವರದಿಯ ಬಗ್ಗೆ ಸಾರ್ವಜನಿಕವಾಗಿ ಟೀಕೆ ಮಾಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಖಾತೆಯನ್ನು ತ್ಯಜಿಸಿದ ನಂತರ ಸಿಧು 2019 ರ ಜುಲೈನಲ್ಲಿ ಅಮರಿಂದರ್ ಸಿಂಗ್ ಸಂಪುಟದಿಂದ ಹೊರಬಂದಿದ್ದರು. ಮುಂದಿನ ವರ್ಷ ಪಂಜಾಬ್ ನಲ್ಲಿ ಚುನಾವಣೆ ನಡೆಯಲಿದೆ.

(MLAs are with CM Amarinder Singh and there is no need for a change of of guard in Punjab AICC panel)

ಇದನ್ನೂ ಓದಿ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ವಿರುದ್ಧ ಭುಗಿಲೆದ್ದ ಅಸಮಾಧಾನ, ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ

ಇದನ್ನೂ ಓದಿ: Yogi Adityanath ದೆಹಲಿ ತಲುಪಿದ ಯೋಗಿ ಆದಿತ್ಯನಾಥ; ಪ್ರಧಾನಿ ಮೋದಿ ಜತೆ ನಾಳೆ ಭೇಟಿ ಸಾಧ್ಯತೆ

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು