AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಎನ್​​ಎಸ್​ ಮುಖ್ಯಸ್ಥ ರಾಜ್ ಠಾಕ್ರೆ ವಿರುದ್ಧ ಜಾಮೀನು ರಹಿತ ವಾರಂಟ್​; ಜೂ.8ರೊಳಗೆ ಕೋರ್ಟ್​ಗೆ ಹಾಜರುಪಡಿಸಲು ಆದೇಶ

ಇತ್ತೀಚೆಗೆ ಕೂಡ ರಾಜ್​ ಠಾಕ್ರೆ  ಹನುಮಾನ್​ ಚಾಲೀಸಾ-ಆಜಾನ್ ವಿಚಾರದಲ್ಲಿ ವಿವಾದ ಸೃಷ್ಟಿಸಿದ್ದರು. ಮಸೀದಿಗಳಲ್ಲಿ ಆಜಾನ್​ ವೇಳೆ ಧ್ವನಿವರ್ಧಕ ಹಾಕುವುದು ಯಾಕೆ? ಆ ಲೌಡ್​ಸ್ಪೀಕರ್​​ಗಳನ್ನು ಮಹಾರಾಷ್ಟ್ರ ಸರ್ಕಾರ ಆದಷ್ಟು ಬೇಗನೇ ತೆಗೆಸಬೇಕು ಎಂದು ಹೇಳಿದ್ದರು.

ಎಂಎನ್​​ಎಸ್​ ಮುಖ್ಯಸ್ಥ ರಾಜ್ ಠಾಕ್ರೆ ವಿರುದ್ಧ ಜಾಮೀನು ರಹಿತ ವಾರಂಟ್​; ಜೂ.8ರೊಳಗೆ ಕೋರ್ಟ್​ಗೆ ಹಾಜರುಪಡಿಸಲು ಆದೇಶ
ರಾಜ್​ ಠಾಕ್ರೆ
TV9 Web
| Edited By: |

Updated on:May 03, 2022 | 5:37 PM

Share

ಸಾಂಗ್ಲಿ: ಮಹಾರಾಷ್ಟ್ರ ನವನಿರ್ಮಾಣ ಸೇನಾ (MNS) ಮುಖ್ಯಸ್ಥ ರಾಜ್ ಠಾಕ್ರೆ ವಿರುದ್ಧ ಸಾಂಗ್ಲಿ ಜಿಲ್ಲೆಯ ಕೋರ್ಟ್​ವೊಂದು ಜಾಮೀನುರಹಿತ ವಾರೆಂಟ್ ಜಾರಿಗೊಳಿಸಿದೆ. ಸುಮಾರು 14 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ವಾರಂಟ್ ಜಾರಿ ಮಾಡಿ, ಕೋರ್ಟ್ ಆದೇಶ ಹೊರಡಿಸಿದೆ.  ಹಾಗೇ, ರಾಜ್​ ಠಾಕ್ರೆಯವರನ್ನು ಬಂಧಿಸಿ, ಕೋರ್ಟ್​ಗೆ ಹಾಜರುಪಡಿಸುವಂತೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್  ಮುಂಬೈ ಪೊಲೀಸರಿಗೆ ಸೂಚಿಸಿದ್ದಾರೆ. 

2008ರಲ್ಲಿ ರಾಜ್​ ಠಾಕ್ರೆ ಅವರೊಂದು ಪ್ರಚೋದನಕಾರಿ ಭಾಷಣ ಮಾಡಿದ್ದರ ವಿರುದ್ಧ ಕೇಸ್​ ದಾಖಲಾಗಿದೆ.  ಈಗ ರಾಜ್​ ಠಾಕ್ರೆ ಮತ್ತು ಎಂಎನ್​ಎಸ್​ನ ಇನ್ನೊಬ್ಬ ನಾಯಕ ಶಿರೀಶ್​ ಪರ್ಕರ್​ ವಿರುದ್ಧ ವಾರಂಟ್​ ಜಾರಿ ಮಾಡಲಾಗಿದೆ. ಅವರಿಬ್ಬರನ್ನೂ ಕೋರ್ಟ್​ಗೆ ಹಾಜರುಪಡಿಸುವ ಜವಾಬ್ದಾರಿಯನ್ನು ಮುಂಬೈ ಪೊಲೀಸ್ ಆಯುಕ್ತ ಮತ್ತು ಖೇರ್ವಾಡಿ ಠಾಣೆ ಪೊಲೀಸರಿಗೆ ನೀಡಲಾಗಿದೆ. ಏಪ್ರಿಲ್​ 6ರಂದೇ ಕೋರ್ಟ್ ಈ ಆದೇಶ ಕೊಟ್ಟಿದ್ದರೂ, ಪೊಲೀಸರು ರಾಜ್ ಠಾಕ್ರೆಯವರನ್ನು ನ್ಯಾಯಾಲಯದ ಎದುರು ಕರೆತರಲು ವಿಫಲರಾಗಿದ್ದಾರೆ ಎಂದು ಹೇಳಲಾಗಿದೆ. ಜೂ.8ರೊಳಗೆ ಅವರಿಬ್ಬರನ್ನೂ ಕೋರ್ಟ್​ಗೆ ಕರೆತರಬೇಕು ಎಂದು ಕೋರ್ಟ್​ ಹೇಳಿದೆ.

ಇತ್ತೀಚೆಗೆ ಕೂಡ ರಾಜ್​ ಠಾಕ್ರೆ  ಹನುಮಾನ್​ ಚಾಲೀಸಾ-ಆಜಾನ್ ವಿಚಾರದಲ್ಲಿ ವಿವಾದ ಸೃಷ್ಟಿಸಿದ್ದರು. ಮಸೀದಿಗಳಲ್ಲಿ ಆಜಾನ್​ ವೇಳೆ ಧ್ವನಿವರ್ಧಕ ಹಾಕುವುದು ಯಾಕೆ? ಆ ಲೌಡ್​ಸ್ಪೀಕರ್​​ಗಳನ್ನು ಮಹಾರಾಷ್ಟ್ರ ಸರ್ಕಾರ ಆದಷ್ಟು ಬೇಗನೇ ತೆಗೆಸಬೇಕು. ಹಾಗೊಮ್ಮೆ ತೆಗೆಸದೆ ಇದ್ದರೆ, ಮಸೀದಿಯ ಹೊರಗೆ ಧ್ವನಿವರ್ಧಕ ಹಾಕಿ ಹನುಮಾನ್​ ಚಾಲೀಸಾ ಪಠಿಸುವ ಎಚ್ಚರಿಕೆಯನ್ನೂ ನೀಡಿದ್ದರು. ಮಹಾರಾಷ್ಟ್ರ ಸರ್ಕಾರದ ಆಡಳಿತವನ್ನು, ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯನ್ನು ಟೀಕಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಧಾರ್ಮಿಕ ಪ್ರದೇಶದಲ್ಲಿ ಅಕ್ರಮವಾಗಿ ಹಾಕಿದ್ದ ಸಾವಿರಾರು ಮೈಕ್​​ಗಳನ್ನು ಅಲ್ಲಿನ ಸರ್ಕಾರ ತೆಗೆಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ರನ್ನು ಹೊಗಳಿದ್ದರು. ನಮ್ಮಲ್ಲಿ ಯಾರೂ ಯೋಗಿಗಳು ಇಲ್ಲ ಎಂದು ಹೇಳುವ ಮೂಲಕ ಉದ್ಧವ್ ಠಾಕ್ರೆಗೆ ಟಾಂಗ್​ ಕೊಟ್ಟಿದ್ದರು.

ಇದನ್ನೂ ಓದಿ: ಫೋಟೋ ಬೇಕೆಂದಾದರೆ ಹತ್ತಿರ ನಿಂತ್ಕೊಳ್ಳಮ್ಮ ಅನ್ನುತ್ತಾ ಯುವತಿಯನ್ನು ಸಮೀಪಕ್ಕೆ ಎಳೆದುಕೊಂಡರು ಯಡಿಯೂರಪ್ಪ!

Published On - 5:35 pm, Tue, 3 May 22

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್