AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಎನ್​​ಎಸ್​ ಮುಖ್ಯಸ್ಥ ರಾಜ್ ಠಾಕ್ರೆ ವಿರುದ್ಧ ಜಾಮೀನು ರಹಿತ ವಾರಂಟ್​; ಜೂ.8ರೊಳಗೆ ಕೋರ್ಟ್​ಗೆ ಹಾಜರುಪಡಿಸಲು ಆದೇಶ

ಇತ್ತೀಚೆಗೆ ಕೂಡ ರಾಜ್​ ಠಾಕ್ರೆ  ಹನುಮಾನ್​ ಚಾಲೀಸಾ-ಆಜಾನ್ ವಿಚಾರದಲ್ಲಿ ವಿವಾದ ಸೃಷ್ಟಿಸಿದ್ದರು. ಮಸೀದಿಗಳಲ್ಲಿ ಆಜಾನ್​ ವೇಳೆ ಧ್ವನಿವರ್ಧಕ ಹಾಕುವುದು ಯಾಕೆ? ಆ ಲೌಡ್​ಸ್ಪೀಕರ್​​ಗಳನ್ನು ಮಹಾರಾಷ್ಟ್ರ ಸರ್ಕಾರ ಆದಷ್ಟು ಬೇಗನೇ ತೆಗೆಸಬೇಕು ಎಂದು ಹೇಳಿದ್ದರು.

ಎಂಎನ್​​ಎಸ್​ ಮುಖ್ಯಸ್ಥ ರಾಜ್ ಠಾಕ್ರೆ ವಿರುದ್ಧ ಜಾಮೀನು ರಹಿತ ವಾರಂಟ್​; ಜೂ.8ರೊಳಗೆ ಕೋರ್ಟ್​ಗೆ ಹಾಜರುಪಡಿಸಲು ಆದೇಶ
ರಾಜ್​ ಠಾಕ್ರೆ
TV9 Web
| Edited By: |

Updated on:May 03, 2022 | 5:37 PM

Share

ಸಾಂಗ್ಲಿ: ಮಹಾರಾಷ್ಟ್ರ ನವನಿರ್ಮಾಣ ಸೇನಾ (MNS) ಮುಖ್ಯಸ್ಥ ರಾಜ್ ಠಾಕ್ರೆ ವಿರುದ್ಧ ಸಾಂಗ್ಲಿ ಜಿಲ್ಲೆಯ ಕೋರ್ಟ್​ವೊಂದು ಜಾಮೀನುರಹಿತ ವಾರೆಂಟ್ ಜಾರಿಗೊಳಿಸಿದೆ. ಸುಮಾರು 14 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ವಾರಂಟ್ ಜಾರಿ ಮಾಡಿ, ಕೋರ್ಟ್ ಆದೇಶ ಹೊರಡಿಸಿದೆ.  ಹಾಗೇ, ರಾಜ್​ ಠಾಕ್ರೆಯವರನ್ನು ಬಂಧಿಸಿ, ಕೋರ್ಟ್​ಗೆ ಹಾಜರುಪಡಿಸುವಂತೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್  ಮುಂಬೈ ಪೊಲೀಸರಿಗೆ ಸೂಚಿಸಿದ್ದಾರೆ. 

2008ರಲ್ಲಿ ರಾಜ್​ ಠಾಕ್ರೆ ಅವರೊಂದು ಪ್ರಚೋದನಕಾರಿ ಭಾಷಣ ಮಾಡಿದ್ದರ ವಿರುದ್ಧ ಕೇಸ್​ ದಾಖಲಾಗಿದೆ.  ಈಗ ರಾಜ್​ ಠಾಕ್ರೆ ಮತ್ತು ಎಂಎನ್​ಎಸ್​ನ ಇನ್ನೊಬ್ಬ ನಾಯಕ ಶಿರೀಶ್​ ಪರ್ಕರ್​ ವಿರುದ್ಧ ವಾರಂಟ್​ ಜಾರಿ ಮಾಡಲಾಗಿದೆ. ಅವರಿಬ್ಬರನ್ನೂ ಕೋರ್ಟ್​ಗೆ ಹಾಜರುಪಡಿಸುವ ಜವಾಬ್ದಾರಿಯನ್ನು ಮುಂಬೈ ಪೊಲೀಸ್ ಆಯುಕ್ತ ಮತ್ತು ಖೇರ್ವಾಡಿ ಠಾಣೆ ಪೊಲೀಸರಿಗೆ ನೀಡಲಾಗಿದೆ. ಏಪ್ರಿಲ್​ 6ರಂದೇ ಕೋರ್ಟ್ ಈ ಆದೇಶ ಕೊಟ್ಟಿದ್ದರೂ, ಪೊಲೀಸರು ರಾಜ್ ಠಾಕ್ರೆಯವರನ್ನು ನ್ಯಾಯಾಲಯದ ಎದುರು ಕರೆತರಲು ವಿಫಲರಾಗಿದ್ದಾರೆ ಎಂದು ಹೇಳಲಾಗಿದೆ. ಜೂ.8ರೊಳಗೆ ಅವರಿಬ್ಬರನ್ನೂ ಕೋರ್ಟ್​ಗೆ ಕರೆತರಬೇಕು ಎಂದು ಕೋರ್ಟ್​ ಹೇಳಿದೆ.

ಇತ್ತೀಚೆಗೆ ಕೂಡ ರಾಜ್​ ಠಾಕ್ರೆ  ಹನುಮಾನ್​ ಚಾಲೀಸಾ-ಆಜಾನ್ ವಿಚಾರದಲ್ಲಿ ವಿವಾದ ಸೃಷ್ಟಿಸಿದ್ದರು. ಮಸೀದಿಗಳಲ್ಲಿ ಆಜಾನ್​ ವೇಳೆ ಧ್ವನಿವರ್ಧಕ ಹಾಕುವುದು ಯಾಕೆ? ಆ ಲೌಡ್​ಸ್ಪೀಕರ್​​ಗಳನ್ನು ಮಹಾರಾಷ್ಟ್ರ ಸರ್ಕಾರ ಆದಷ್ಟು ಬೇಗನೇ ತೆಗೆಸಬೇಕು. ಹಾಗೊಮ್ಮೆ ತೆಗೆಸದೆ ಇದ್ದರೆ, ಮಸೀದಿಯ ಹೊರಗೆ ಧ್ವನಿವರ್ಧಕ ಹಾಕಿ ಹನುಮಾನ್​ ಚಾಲೀಸಾ ಪಠಿಸುವ ಎಚ್ಚರಿಕೆಯನ್ನೂ ನೀಡಿದ್ದರು. ಮಹಾರಾಷ್ಟ್ರ ಸರ್ಕಾರದ ಆಡಳಿತವನ್ನು, ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯನ್ನು ಟೀಕಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಧಾರ್ಮಿಕ ಪ್ರದೇಶದಲ್ಲಿ ಅಕ್ರಮವಾಗಿ ಹಾಕಿದ್ದ ಸಾವಿರಾರು ಮೈಕ್​​ಗಳನ್ನು ಅಲ್ಲಿನ ಸರ್ಕಾರ ತೆಗೆಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ರನ್ನು ಹೊಗಳಿದ್ದರು. ನಮ್ಮಲ್ಲಿ ಯಾರೂ ಯೋಗಿಗಳು ಇಲ್ಲ ಎಂದು ಹೇಳುವ ಮೂಲಕ ಉದ್ಧವ್ ಠಾಕ್ರೆಗೆ ಟಾಂಗ್​ ಕೊಟ್ಟಿದ್ದರು.

ಇದನ್ನೂ ಓದಿ: ಫೋಟೋ ಬೇಕೆಂದಾದರೆ ಹತ್ತಿರ ನಿಂತ್ಕೊಳ್ಳಮ್ಮ ಅನ್ನುತ್ತಾ ಯುವತಿಯನ್ನು ಸಮೀಪಕ್ಕೆ ಎಳೆದುಕೊಂಡರು ಯಡಿಯೂರಪ್ಪ!

Published On - 5:35 pm, Tue, 3 May 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್