AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಎನ್​​ಎಸ್​ ಮುಖ್ಯಸ್ಥ ರಾಜ್ ಠಾಕ್ರೆ ವಿರುದ್ಧ ಜಾಮೀನು ರಹಿತ ವಾರಂಟ್​; ಜೂ.8ರೊಳಗೆ ಕೋರ್ಟ್​ಗೆ ಹಾಜರುಪಡಿಸಲು ಆದೇಶ

ಇತ್ತೀಚೆಗೆ ಕೂಡ ರಾಜ್​ ಠಾಕ್ರೆ  ಹನುಮಾನ್​ ಚಾಲೀಸಾ-ಆಜಾನ್ ವಿಚಾರದಲ್ಲಿ ವಿವಾದ ಸೃಷ್ಟಿಸಿದ್ದರು. ಮಸೀದಿಗಳಲ್ಲಿ ಆಜಾನ್​ ವೇಳೆ ಧ್ವನಿವರ್ಧಕ ಹಾಕುವುದು ಯಾಕೆ? ಆ ಲೌಡ್​ಸ್ಪೀಕರ್​​ಗಳನ್ನು ಮಹಾರಾಷ್ಟ್ರ ಸರ್ಕಾರ ಆದಷ್ಟು ಬೇಗನೇ ತೆಗೆಸಬೇಕು ಎಂದು ಹೇಳಿದ್ದರು.

ಎಂಎನ್​​ಎಸ್​ ಮುಖ್ಯಸ್ಥ ರಾಜ್ ಠಾಕ್ರೆ ವಿರುದ್ಧ ಜಾಮೀನು ರಹಿತ ವಾರಂಟ್​; ಜೂ.8ರೊಳಗೆ ಕೋರ್ಟ್​ಗೆ ಹಾಜರುಪಡಿಸಲು ಆದೇಶ
ರಾಜ್​ ಠಾಕ್ರೆ
TV9 Web
| Edited By: |

Updated on:May 03, 2022 | 5:37 PM

Share

ಸಾಂಗ್ಲಿ: ಮಹಾರಾಷ್ಟ್ರ ನವನಿರ್ಮಾಣ ಸೇನಾ (MNS) ಮುಖ್ಯಸ್ಥ ರಾಜ್ ಠಾಕ್ರೆ ವಿರುದ್ಧ ಸಾಂಗ್ಲಿ ಜಿಲ್ಲೆಯ ಕೋರ್ಟ್​ವೊಂದು ಜಾಮೀನುರಹಿತ ವಾರೆಂಟ್ ಜಾರಿಗೊಳಿಸಿದೆ. ಸುಮಾರು 14 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ವಾರಂಟ್ ಜಾರಿ ಮಾಡಿ, ಕೋರ್ಟ್ ಆದೇಶ ಹೊರಡಿಸಿದೆ.  ಹಾಗೇ, ರಾಜ್​ ಠಾಕ್ರೆಯವರನ್ನು ಬಂಧಿಸಿ, ಕೋರ್ಟ್​ಗೆ ಹಾಜರುಪಡಿಸುವಂತೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್  ಮುಂಬೈ ಪೊಲೀಸರಿಗೆ ಸೂಚಿಸಿದ್ದಾರೆ. 

2008ರಲ್ಲಿ ರಾಜ್​ ಠಾಕ್ರೆ ಅವರೊಂದು ಪ್ರಚೋದನಕಾರಿ ಭಾಷಣ ಮಾಡಿದ್ದರ ವಿರುದ್ಧ ಕೇಸ್​ ದಾಖಲಾಗಿದೆ.  ಈಗ ರಾಜ್​ ಠಾಕ್ರೆ ಮತ್ತು ಎಂಎನ್​ಎಸ್​ನ ಇನ್ನೊಬ್ಬ ನಾಯಕ ಶಿರೀಶ್​ ಪರ್ಕರ್​ ವಿರುದ್ಧ ವಾರಂಟ್​ ಜಾರಿ ಮಾಡಲಾಗಿದೆ. ಅವರಿಬ್ಬರನ್ನೂ ಕೋರ್ಟ್​ಗೆ ಹಾಜರುಪಡಿಸುವ ಜವಾಬ್ದಾರಿಯನ್ನು ಮುಂಬೈ ಪೊಲೀಸ್ ಆಯುಕ್ತ ಮತ್ತು ಖೇರ್ವಾಡಿ ಠಾಣೆ ಪೊಲೀಸರಿಗೆ ನೀಡಲಾಗಿದೆ. ಏಪ್ರಿಲ್​ 6ರಂದೇ ಕೋರ್ಟ್ ಈ ಆದೇಶ ಕೊಟ್ಟಿದ್ದರೂ, ಪೊಲೀಸರು ರಾಜ್ ಠಾಕ್ರೆಯವರನ್ನು ನ್ಯಾಯಾಲಯದ ಎದುರು ಕರೆತರಲು ವಿಫಲರಾಗಿದ್ದಾರೆ ಎಂದು ಹೇಳಲಾಗಿದೆ. ಜೂ.8ರೊಳಗೆ ಅವರಿಬ್ಬರನ್ನೂ ಕೋರ್ಟ್​ಗೆ ಕರೆತರಬೇಕು ಎಂದು ಕೋರ್ಟ್​ ಹೇಳಿದೆ.

ಇತ್ತೀಚೆಗೆ ಕೂಡ ರಾಜ್​ ಠಾಕ್ರೆ  ಹನುಮಾನ್​ ಚಾಲೀಸಾ-ಆಜಾನ್ ವಿಚಾರದಲ್ಲಿ ವಿವಾದ ಸೃಷ್ಟಿಸಿದ್ದರು. ಮಸೀದಿಗಳಲ್ಲಿ ಆಜಾನ್​ ವೇಳೆ ಧ್ವನಿವರ್ಧಕ ಹಾಕುವುದು ಯಾಕೆ? ಆ ಲೌಡ್​ಸ್ಪೀಕರ್​​ಗಳನ್ನು ಮಹಾರಾಷ್ಟ್ರ ಸರ್ಕಾರ ಆದಷ್ಟು ಬೇಗನೇ ತೆಗೆಸಬೇಕು. ಹಾಗೊಮ್ಮೆ ತೆಗೆಸದೆ ಇದ್ದರೆ, ಮಸೀದಿಯ ಹೊರಗೆ ಧ್ವನಿವರ್ಧಕ ಹಾಕಿ ಹನುಮಾನ್​ ಚಾಲೀಸಾ ಪಠಿಸುವ ಎಚ್ಚರಿಕೆಯನ್ನೂ ನೀಡಿದ್ದರು. ಮಹಾರಾಷ್ಟ್ರ ಸರ್ಕಾರದ ಆಡಳಿತವನ್ನು, ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯನ್ನು ಟೀಕಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಧಾರ್ಮಿಕ ಪ್ರದೇಶದಲ್ಲಿ ಅಕ್ರಮವಾಗಿ ಹಾಕಿದ್ದ ಸಾವಿರಾರು ಮೈಕ್​​ಗಳನ್ನು ಅಲ್ಲಿನ ಸರ್ಕಾರ ತೆಗೆಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ರನ್ನು ಹೊಗಳಿದ್ದರು. ನಮ್ಮಲ್ಲಿ ಯಾರೂ ಯೋಗಿಗಳು ಇಲ್ಲ ಎಂದು ಹೇಳುವ ಮೂಲಕ ಉದ್ಧವ್ ಠಾಕ್ರೆಗೆ ಟಾಂಗ್​ ಕೊಟ್ಟಿದ್ದರು.

ಇದನ್ನೂ ಓದಿ: ಫೋಟೋ ಬೇಕೆಂದಾದರೆ ಹತ್ತಿರ ನಿಂತ್ಕೊಳ್ಳಮ್ಮ ಅನ್ನುತ್ತಾ ಯುವತಿಯನ್ನು ಸಮೀಪಕ್ಕೆ ಎಳೆದುಕೊಂಡರು ಯಡಿಯೂರಪ್ಪ!

Published On - 5:35 pm, Tue, 3 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ