AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ವನಿವರ್ಧಕದಲ್ಲಿ ಹನುಮಾನ್​ ಚಾಲೀಸಾ, ಭಕ್ತಿಗೀತೆಗಳನ್ನು ಹಾಕಿದ ರಾಜ್ ಠಾಕ್ರೆ ಪಕ್ಷದ ಕಾರ್ಯಕರ್ತರು; ಕೂಡಲೇ ಬಂದು ತಡೆದ ಪೊಲೀಸರು

ರಾಜ್ಯಾದ್ಯಂತ ಮಸೀದಿಗಳಿಗೆ ಹಾಕಿರುವ ಧ್ವನಿವರ್ಧಕಗಳನ್ನು ತೆಗೆದುಹಾಕಲು ಮಹಾರಾಷ್ಟ್ರ ಸರ್ಕಾರ ಕ್ರಮ ಕೈಗೊಳ್ಳದೆ ಇದ್ದರೆ, ನಾವು ಮಸೀದಿಗಳ ಹೊರಗೆ ಧ್ವನಿವರ್ಧಕ ಹಾಕಿ ಹನುಮಾನ ಚಾಲೀಸಾ ಪಠಣ ಹಾಕುತ್ತೇವೆ ಎಂದು ರಾಜ್​ ಠಾಕ್ರೆ ಹೇಳಿದ್ದರು.

ಧ್ವನಿವರ್ಧಕದಲ್ಲಿ ಹನುಮಾನ್​ ಚಾಲೀಸಾ, ಭಕ್ತಿಗೀತೆಗಳನ್ನು ಹಾಕಿದ ರಾಜ್ ಠಾಕ್ರೆ ಪಕ್ಷದ ಕಾರ್ಯಕರ್ತರು; ಕೂಡಲೇ ಬಂದು ತಡೆದ ಪೊಲೀಸರು
ಧ್ವನಿವರ್ಧಕದಲ್ಲಿ ಹನುಮಾನ ಚಾಲೀಸಾ ಹಾಕಿದ ಎಂಎನ್​ಎಸ್ ಕಾರ್ಯಕರ್ತರು
TV9 Web
| Edited By: |

Updated on: Apr 10, 2022 | 12:24 PM

Share

ಮುಂಬೈನಲ್ಲಿರುವ ಶಿವಸೇನೆ ಪಕ್ಷದ ಪ್ರಧಾನ ಕಚೇರಿ ಎದುರು ಇಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS)ಕಾರ್ಯಕರ್ತರು ಹನುಮಾನ ಚಾಲೀಸಾ ಮತ್ತು ಇತರ ಧಾರ್ಮಿಕ ಗೀತೆಗಳನ್ನು ಹಾಕಿದ ಘಟನೆ ನಡೆಯಿತು.  ಅಷ್ಟೇ ಅಲ್ಲ, ಹನುಮಾನ ಚಾಲೀಸಾ ಮತ್ತು ಭಕ್ತಿಗೀತೆಗಳು ದೊಡ್ಡದಾಗಿ ಕೇಳುವಂತೆ ಧ್ವನಿವರ್ಧಕವನ್ನೂ ಅಳವಡಿಸಿದ್ದರು. ಆದರೆ ಕೆಲವೇ ಕ್ಷಣಗಳಲ್ಲಿ ಪೊಲೀಸರು ಅದನ್ನು ತಡೆದಿದ್ದಾರೆ. ಹಾಡುಗಳನ್ನು ಹಾಕಲು ಬಳಸಿದ್ದ ಉಪಕರಣಗಳು ಇದ್ದ ವಾಹನ, ಧ್ವನಿವರ್ಧಕಗಳನ್ನೆಲ್ಲ ಜಪ್ತಿ ಮಾಡುವ ಜತೆ, ಎಂಎನ್​ಎಸ್​ ನಾಯಕ ಯಶವಂತ್​ ಕಿಲ್ಲೇಕರ್​ ಅವರನ್ನು ವಶಕ್ಕೆ ಪಡೆದು, ಶಿವಾಜಿ ಪಾರ್ಕ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಎಚ್ಚರಿಕೆ ಕೊಟ್ಟಿದ್ದ ರಾಜ್ ಠಾಕ್ರೆ

ಕೆಲವೇ ದಿನಗಳ ಹಿಂದೆ ಎಂಎನ್​ಎಸ್​ ಮುಖ್ಯಸ್ಥ ರಾಜ್ ಠಾಕ್ರೆ ಈ ಎಚ್ಚರಿಕೆಯನ್ನು ನೀಡಿದ್ದರು. ರಾಜ್ಯಾದ್ಯಂತ ಮಸೀದಿಗಳಿಗೆ ಹಾಕಿರುವ ಧ್ವನಿವರ್ಧಕಗಳನ್ನು ತೆಗೆದುಹಾಕಲು ಮಹಾರಾಷ್ಟ್ರ ಸರ್ಕಾರ ಕ್ರಮ ಕೈಗೊಳ್ಳದೆ ಇದ್ದರೆ, ನಾವು ಮಸೀದಿಗಳ ಹೊರಗೆ ಧ್ವನಿವರ್ಧಕ ಹಾಕಿ ಹನುಮಾನ ಚಾಲೀಸಾ ಪಠಣ ಹಾಕುತ್ತೇವೆ. ಆಜಾನ್​ಕ್ಕಿಂತಲೂ ದೊಡ್ಡದಾಗಿ ಕೇಳುವಂತೆ ಮಾಡುತ್ತೇವೆ ಎಂದು ಹೇಳಿದ್ದರು. ಹಾಗಂತ ನಾನು ಪ್ರಾರ್ಥನೆಗಳ ವಿರೋಧಿಯಲ್ಲ. ಯಾವುದೇ ಒಂದು ನಿರ್ಧಿಷ್ಟ ಧರ್ಮದ ವಿರೋಧಿಯೂ ಅಲ್ಲ, ಆದರೆ ನಾನೂ ನನ್ನ ಧರ್ಮದ ಗೌರವವನ್ನು ಎತ್ತಿ ಹಿಡಿಯುತ್ತೇನೆ ಎಂದಿದ್ದರು.

ರಾಜ್ ಠಾಕ್ರೆ ಈ ಹೇಳಿಕೆ ವಿವಾದವನ್ನು ಎಬ್ಬಿಸಿತ್ತು. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ಶಿವಸೇನೆ ಸಂಸದ ಸಂಜಯ್​ ರಾವತ್​ ಮತ್ತು ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್ ಈ ಹೇಳಿಕೆಯನ್ನು ವಿರೋಧಿಸಿದ್ದರು.  ಆದರೆ ಅದಕ್ಕೆಲ್ಲ ತಲೆಕೆಡಿಸಿಕೊಳ್ಳದ ಎಂಎನ್​ಎಸ್​ ಕಾರ್ಯಕರ್ತರು, ಮುಂಬೈನ ಘಾಟ್​ಕೋಪರ್​ನಲ್ಲಿರುವ ಎಂಎನ್​ಎಸ್​ ಪಕ್ಷದ ಕಚೇರಿ ಎದುರು ದೊಡ್ಡದಾಗಿ ಹನುಮಾನ್ ಚಾಲೀಸಾ ಹಾಕಿದ್ದರು. ಆಗ ಪೊಲೀಸರು ಅವರಿಗೆ ದಂಡ ವಿಧಿಸಿದ್ದಲ್ಲದೆ, ಮತ್ತೊಮ್ಮೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.  ಹಾಗಿದ್ದಾಗ್ಯೂ ಇಂದು ರಾಮನವಮಿ ಪ್ರಯುಕ್ತ ಎಂಎನ್​ಎಸ್​ ಕಾರ್ಯಕರ್ತರು ಶಿವಸೇನೆ ಪಕ್ಷದ ಪ್ರಧಾನ ಕಚೇರಿ ಎದುರು ಮತ್ತೊಮ್ಮೆ ಧ್ವನಿವರ್ಧಕದ ಮೂಲಕ ಹನುಮಾನ ಚಾಲೀಸಾ ಮತ್ತು ಭಕ್ತಿಗೀತೆಗಳನ್ನು ಹಾಕಿದ್ದಾರೆ.

ಇದನ್ನೂ ಓದಿ: ಕೊವಿಡ್​ 19 ಲಸಿಕೆ 2ನೇ ಡೋಸ್​ ಪಡೆದು 9 ತಿಂಗಳು ಕಳೆದವರೆಲ್ಲ 3ನೇ ಡೋಸ್​ಗೆ ಸಿದ್ಧರಾಗಿ; ಈ ವಿಚಾರಗಳು ನಿಮ್ಮ ಗಮನದಲ್ಲಿರಲಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು