Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಪಘಾತದಲ್ಲಿ ಗಾಯಗೊಂಡ ಹಿರಿಯ ನಾಗರಿಕನನ್ನು ರಕ್ಷಿಸಲು ಹೋದವರ ಮೇಲೆ ಗುಂಪು ಹಲ್ಲೆ; ಪ್ರಾಣವನ್ನೇ ಕಳೆದುಕೊಂಡ ಯುವಕ

ಅನಿಮೇಶ್​ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪೊಲೀಸರ ಎದುರೇ ಈ ಹೊಡೆದಾಟ ನಡೆದಿದೆ ಎಂದೂ ಹೇಳಲಾಗಿದೆ.

Video: ಅಪಘಾತದಲ್ಲಿ ಗಾಯಗೊಂಡ ಹಿರಿಯ ನಾಗರಿಕನನ್ನು ರಕ್ಷಿಸಲು ಹೋದವರ ಮೇಲೆ ಗುಂಪು ಹಲ್ಲೆ; ಪ್ರಾಣವನ್ನೇ ಕಳೆದುಕೊಂಡ ಯುವಕ
ಅಸ್ಸಾಂನಲ್ಲಿ ಹಲ್ಲೆಯ ಚಿತ್ರ
Follow us
TV9 Web
| Updated By: Lakshmi Hegde

Updated on: Nov 30, 2021 | 8:42 AM

ರಸ್ತೆಯಲ್ಲಿ ಅಪಘಾತವಾಗಿ ಗಾಯಗೊಂಡು ಬಿದ್ದಿದ್ದ ಹಿರಿಯ ನಾಗರಿಕನಿಗೆ ನೆರವು ನೀಡಲು ಮುಂದಾದವರ ಮೇಲೆ ಗುಂಪೊಂದು ಹಲ್ಲೆ ಮಾಡಿದ ಪರಿಣಾಮ ಒಬ್ಬ ಮೃತಪಟ್ಟ ದುರ್ಘಟನೆ ಅಸ್ಸಾಂನ ಜೊಹ್ರತ್​​ನಲ್ಲಿ ನಡೆದಿದೆ. ಹೀಗೆ ಮೃತಪಟ್ಟವನು ಆಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟದ ನಾಯಕ (AASU). ಈ ಗುಂಪು ಹಲ್ಲೆಯಲ್ಲಿ ಒಬ್ಬ ಪತ್ರಕರ್ತ ಸೇರಿ ಇಬ್ಬರು ಗಾಯಗೊಂಡಿದ್ದಾರೆ. 

ಮೃತ ಯವಕನನ್ನು ಅನಿಮೇಶ್​ ಭೂಯಾನ್​ (24) ಎಂದು ಗುರುತಿಸಲಾಗಿದೆ. ನಿರ್ಮಲ್​ ಚರಿಯಾಲಿ ಎಂಬಲ್ಲಿ ಒಂದು ರಸ್ತೆ ಅಪಘಾತವಾಗಿತ್ತು. ಅದರಲ್ಲಿ ಹಿರಿಯ ನಾಗರಿಕರೊಬ್ಬರಿಗೆ ಗಾಯವಾಗಿತ್ತು. ಗಾಯಗೊಂಡು ಬಿದ್ದಿದ್ದ ಅವರನ್ನು ರಕ್ಷಿಸಲು ಮುಂದಾಗ ಅನಿಮೇಶ್​ ಭೂಯಾನ್​ ಮತ್ತು ಇತರ ಇಬ್ಬರ ಮೇಲೆ ಅಲ್ಲಿಯೇ ಇದ್ದ ಗುಂಪೊಂದು ದಾಳಿ ನಡೆಸಿದೆ.

ಅನಿಮೇಶ್​ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪೊಲೀಸರ ಎದುರೇ ಈ ಹೊಡೆದಾಟ ನಡೆದಿದೆ ಎಂದೂ ಹೇಳಲಾಗಿದೆ. ಇನ್ನು ಗಾಯಗೊಂಡ ಮೂವರನ್ನೂ ಪೊಲೀಸರು ಜೊಹ್ರತ್​ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದರು. ಇವರಲ್ಲಿ ಅನಿಮೇಶ್​ ಸ್ಥಿತಿ ಗಂಭೀರವಾಗಿದ್ದು, ಹೋಗುವಷ್ಟರಲ್ಲೇ ಮೃತಪಟ್ಟಿದ್ದರು.

ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಇದೀಗ 10 ಮಂದಿಯನ್ನು ಬಂಧಿಸಿದ್ದಾರೆ.  ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ. ಇನ್ನುಳಿದವರನ್ನು ಪತ್ತೆ ಮಾಡಲು ಕಾರ್ಯಾಚರಣೆ  ನಡೆಯುತ್ತಿದೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ. ಆರೋಪಿಗಳನ್ನು ಇನ್ನು 24 ಗಂಟೆಯಲ್ಲಿ ಬಂಧಿಸುವಂತೆ ಜೊಹ್ರತ್​ ಜಿಲ್ಲಾ ಎಎಎಸ್​ಯು ಆಗ್ರಹ ಮಾಡಿದೆ.

ಇದನ್ನೂ ಓದಿ: ಚೆನ್ನಾಗಿ ನಿದ್ರೆ ಮಾಡಬೇಕಾದರೆ, ಹಾಸಿಗೆಗೆ ತೆರಳುವ 4-5 ಗಂಟೆ ಮೊದಲು ರಾತ್ರಿಯೂಟ ಸೇವಿಸಬೇಕು: ಡಾ ಸೌಜನ್ಯ ವಶಿಷ್ಠ

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ