AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಪಘಾತದಲ್ಲಿ ಗಾಯಗೊಂಡ ಹಿರಿಯ ನಾಗರಿಕನನ್ನು ರಕ್ಷಿಸಲು ಹೋದವರ ಮೇಲೆ ಗುಂಪು ಹಲ್ಲೆ; ಪ್ರಾಣವನ್ನೇ ಕಳೆದುಕೊಂಡ ಯುವಕ

ಅನಿಮೇಶ್​ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪೊಲೀಸರ ಎದುರೇ ಈ ಹೊಡೆದಾಟ ನಡೆದಿದೆ ಎಂದೂ ಹೇಳಲಾಗಿದೆ.

Video: ಅಪಘಾತದಲ್ಲಿ ಗಾಯಗೊಂಡ ಹಿರಿಯ ನಾಗರಿಕನನ್ನು ರಕ್ಷಿಸಲು ಹೋದವರ ಮೇಲೆ ಗುಂಪು ಹಲ್ಲೆ; ಪ್ರಾಣವನ್ನೇ ಕಳೆದುಕೊಂಡ ಯುವಕ
ಅಸ್ಸಾಂನಲ್ಲಿ ಹಲ್ಲೆಯ ಚಿತ್ರ
TV9 Web
| Edited By: |

Updated on: Nov 30, 2021 | 8:42 AM

Share

ರಸ್ತೆಯಲ್ಲಿ ಅಪಘಾತವಾಗಿ ಗಾಯಗೊಂಡು ಬಿದ್ದಿದ್ದ ಹಿರಿಯ ನಾಗರಿಕನಿಗೆ ನೆರವು ನೀಡಲು ಮುಂದಾದವರ ಮೇಲೆ ಗುಂಪೊಂದು ಹಲ್ಲೆ ಮಾಡಿದ ಪರಿಣಾಮ ಒಬ್ಬ ಮೃತಪಟ್ಟ ದುರ್ಘಟನೆ ಅಸ್ಸಾಂನ ಜೊಹ್ರತ್​​ನಲ್ಲಿ ನಡೆದಿದೆ. ಹೀಗೆ ಮೃತಪಟ್ಟವನು ಆಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟದ ನಾಯಕ (AASU). ಈ ಗುಂಪು ಹಲ್ಲೆಯಲ್ಲಿ ಒಬ್ಬ ಪತ್ರಕರ್ತ ಸೇರಿ ಇಬ್ಬರು ಗಾಯಗೊಂಡಿದ್ದಾರೆ. 

ಮೃತ ಯವಕನನ್ನು ಅನಿಮೇಶ್​ ಭೂಯಾನ್​ (24) ಎಂದು ಗುರುತಿಸಲಾಗಿದೆ. ನಿರ್ಮಲ್​ ಚರಿಯಾಲಿ ಎಂಬಲ್ಲಿ ಒಂದು ರಸ್ತೆ ಅಪಘಾತವಾಗಿತ್ತು. ಅದರಲ್ಲಿ ಹಿರಿಯ ನಾಗರಿಕರೊಬ್ಬರಿಗೆ ಗಾಯವಾಗಿತ್ತು. ಗಾಯಗೊಂಡು ಬಿದ್ದಿದ್ದ ಅವರನ್ನು ರಕ್ಷಿಸಲು ಮುಂದಾಗ ಅನಿಮೇಶ್​ ಭೂಯಾನ್​ ಮತ್ತು ಇತರ ಇಬ್ಬರ ಮೇಲೆ ಅಲ್ಲಿಯೇ ಇದ್ದ ಗುಂಪೊಂದು ದಾಳಿ ನಡೆಸಿದೆ.

ಅನಿಮೇಶ್​ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪೊಲೀಸರ ಎದುರೇ ಈ ಹೊಡೆದಾಟ ನಡೆದಿದೆ ಎಂದೂ ಹೇಳಲಾಗಿದೆ. ಇನ್ನು ಗಾಯಗೊಂಡ ಮೂವರನ್ನೂ ಪೊಲೀಸರು ಜೊಹ್ರತ್​ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದರು. ಇವರಲ್ಲಿ ಅನಿಮೇಶ್​ ಸ್ಥಿತಿ ಗಂಭೀರವಾಗಿದ್ದು, ಹೋಗುವಷ್ಟರಲ್ಲೇ ಮೃತಪಟ್ಟಿದ್ದರು.

ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಇದೀಗ 10 ಮಂದಿಯನ್ನು ಬಂಧಿಸಿದ್ದಾರೆ.  ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ. ಇನ್ನುಳಿದವರನ್ನು ಪತ್ತೆ ಮಾಡಲು ಕಾರ್ಯಾಚರಣೆ  ನಡೆಯುತ್ತಿದೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ. ಆರೋಪಿಗಳನ್ನು ಇನ್ನು 24 ಗಂಟೆಯಲ್ಲಿ ಬಂಧಿಸುವಂತೆ ಜೊಹ್ರತ್​ ಜಿಲ್ಲಾ ಎಎಎಸ್​ಯು ಆಗ್ರಹ ಮಾಡಿದೆ.

ಇದನ್ನೂ ಓದಿ: ಚೆನ್ನಾಗಿ ನಿದ್ರೆ ಮಾಡಬೇಕಾದರೆ, ಹಾಸಿಗೆಗೆ ತೆರಳುವ 4-5 ಗಂಟೆ ಮೊದಲು ರಾತ್ರಿಯೂಟ ಸೇವಿಸಬೇಕು: ಡಾ ಸೌಜನ್ಯ ವಶಿಷ್ಠ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ