AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಪಘಾತದಲ್ಲಿ ಗಾಯಗೊಂಡ ಹಿರಿಯ ನಾಗರಿಕನನ್ನು ರಕ್ಷಿಸಲು ಹೋದವರ ಮೇಲೆ ಗುಂಪು ಹಲ್ಲೆ; ಪ್ರಾಣವನ್ನೇ ಕಳೆದುಕೊಂಡ ಯುವಕ

ಅನಿಮೇಶ್​ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪೊಲೀಸರ ಎದುರೇ ಈ ಹೊಡೆದಾಟ ನಡೆದಿದೆ ಎಂದೂ ಹೇಳಲಾಗಿದೆ.

Video: ಅಪಘಾತದಲ್ಲಿ ಗಾಯಗೊಂಡ ಹಿರಿಯ ನಾಗರಿಕನನ್ನು ರಕ್ಷಿಸಲು ಹೋದವರ ಮೇಲೆ ಗುಂಪು ಹಲ್ಲೆ; ಪ್ರಾಣವನ್ನೇ ಕಳೆದುಕೊಂಡ ಯುವಕ
ಅಸ್ಸಾಂನಲ್ಲಿ ಹಲ್ಲೆಯ ಚಿತ್ರ
TV9 Web
| Edited By: |

Updated on: Nov 30, 2021 | 8:42 AM

Share

ರಸ್ತೆಯಲ್ಲಿ ಅಪಘಾತವಾಗಿ ಗಾಯಗೊಂಡು ಬಿದ್ದಿದ್ದ ಹಿರಿಯ ನಾಗರಿಕನಿಗೆ ನೆರವು ನೀಡಲು ಮುಂದಾದವರ ಮೇಲೆ ಗುಂಪೊಂದು ಹಲ್ಲೆ ಮಾಡಿದ ಪರಿಣಾಮ ಒಬ್ಬ ಮೃತಪಟ್ಟ ದುರ್ಘಟನೆ ಅಸ್ಸಾಂನ ಜೊಹ್ರತ್​​ನಲ್ಲಿ ನಡೆದಿದೆ. ಹೀಗೆ ಮೃತಪಟ್ಟವನು ಆಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟದ ನಾಯಕ (AASU). ಈ ಗುಂಪು ಹಲ್ಲೆಯಲ್ಲಿ ಒಬ್ಬ ಪತ್ರಕರ್ತ ಸೇರಿ ಇಬ್ಬರು ಗಾಯಗೊಂಡಿದ್ದಾರೆ. 

ಮೃತ ಯವಕನನ್ನು ಅನಿಮೇಶ್​ ಭೂಯಾನ್​ (24) ಎಂದು ಗುರುತಿಸಲಾಗಿದೆ. ನಿರ್ಮಲ್​ ಚರಿಯಾಲಿ ಎಂಬಲ್ಲಿ ಒಂದು ರಸ್ತೆ ಅಪಘಾತವಾಗಿತ್ತು. ಅದರಲ್ಲಿ ಹಿರಿಯ ನಾಗರಿಕರೊಬ್ಬರಿಗೆ ಗಾಯವಾಗಿತ್ತು. ಗಾಯಗೊಂಡು ಬಿದ್ದಿದ್ದ ಅವರನ್ನು ರಕ್ಷಿಸಲು ಮುಂದಾಗ ಅನಿಮೇಶ್​ ಭೂಯಾನ್​ ಮತ್ತು ಇತರ ಇಬ್ಬರ ಮೇಲೆ ಅಲ್ಲಿಯೇ ಇದ್ದ ಗುಂಪೊಂದು ದಾಳಿ ನಡೆಸಿದೆ.

ಅನಿಮೇಶ್​ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪೊಲೀಸರ ಎದುರೇ ಈ ಹೊಡೆದಾಟ ನಡೆದಿದೆ ಎಂದೂ ಹೇಳಲಾಗಿದೆ. ಇನ್ನು ಗಾಯಗೊಂಡ ಮೂವರನ್ನೂ ಪೊಲೀಸರು ಜೊಹ್ರತ್​ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದರು. ಇವರಲ್ಲಿ ಅನಿಮೇಶ್​ ಸ್ಥಿತಿ ಗಂಭೀರವಾಗಿದ್ದು, ಹೋಗುವಷ್ಟರಲ್ಲೇ ಮೃತಪಟ್ಟಿದ್ದರು.

ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಇದೀಗ 10 ಮಂದಿಯನ್ನು ಬಂಧಿಸಿದ್ದಾರೆ.  ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ. ಇನ್ನುಳಿದವರನ್ನು ಪತ್ತೆ ಮಾಡಲು ಕಾರ್ಯಾಚರಣೆ  ನಡೆಯುತ್ತಿದೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ. ಆರೋಪಿಗಳನ್ನು ಇನ್ನು 24 ಗಂಟೆಯಲ್ಲಿ ಬಂಧಿಸುವಂತೆ ಜೊಹ್ರತ್​ ಜಿಲ್ಲಾ ಎಎಎಸ್​ಯು ಆಗ್ರಹ ಮಾಡಿದೆ.

ಇದನ್ನೂ ಓದಿ: ಚೆನ್ನಾಗಿ ನಿದ್ರೆ ಮಾಡಬೇಕಾದರೆ, ಹಾಸಿಗೆಗೆ ತೆರಳುವ 4-5 ಗಂಟೆ ಮೊದಲು ರಾತ್ರಿಯೂಟ ಸೇವಿಸಬೇಕು: ಡಾ ಸೌಜನ್ಯ ವಶಿಷ್ಠ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ