AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಪಘಾತದಲ್ಲಿ ಗಾಯಗೊಂಡ ಹಿರಿಯ ನಾಗರಿಕನನ್ನು ರಕ್ಷಿಸಲು ಹೋದವರ ಮೇಲೆ ಗುಂಪು ಹಲ್ಲೆ; ಪ್ರಾಣವನ್ನೇ ಕಳೆದುಕೊಂಡ ಯುವಕ

ಅನಿಮೇಶ್​ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪೊಲೀಸರ ಎದುರೇ ಈ ಹೊಡೆದಾಟ ನಡೆದಿದೆ ಎಂದೂ ಹೇಳಲಾಗಿದೆ.

Video: ಅಪಘಾತದಲ್ಲಿ ಗಾಯಗೊಂಡ ಹಿರಿಯ ನಾಗರಿಕನನ್ನು ರಕ್ಷಿಸಲು ಹೋದವರ ಮೇಲೆ ಗುಂಪು ಹಲ್ಲೆ; ಪ್ರಾಣವನ್ನೇ ಕಳೆದುಕೊಂಡ ಯುವಕ
ಅಸ್ಸಾಂನಲ್ಲಿ ಹಲ್ಲೆಯ ಚಿತ್ರ
TV9 Web
| Edited By: |

Updated on: Nov 30, 2021 | 8:42 AM

Share

ರಸ್ತೆಯಲ್ಲಿ ಅಪಘಾತವಾಗಿ ಗಾಯಗೊಂಡು ಬಿದ್ದಿದ್ದ ಹಿರಿಯ ನಾಗರಿಕನಿಗೆ ನೆರವು ನೀಡಲು ಮುಂದಾದವರ ಮೇಲೆ ಗುಂಪೊಂದು ಹಲ್ಲೆ ಮಾಡಿದ ಪರಿಣಾಮ ಒಬ್ಬ ಮೃತಪಟ್ಟ ದುರ್ಘಟನೆ ಅಸ್ಸಾಂನ ಜೊಹ್ರತ್​​ನಲ್ಲಿ ನಡೆದಿದೆ. ಹೀಗೆ ಮೃತಪಟ್ಟವನು ಆಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟದ ನಾಯಕ (AASU). ಈ ಗುಂಪು ಹಲ್ಲೆಯಲ್ಲಿ ಒಬ್ಬ ಪತ್ರಕರ್ತ ಸೇರಿ ಇಬ್ಬರು ಗಾಯಗೊಂಡಿದ್ದಾರೆ. 

ಮೃತ ಯವಕನನ್ನು ಅನಿಮೇಶ್​ ಭೂಯಾನ್​ (24) ಎಂದು ಗುರುತಿಸಲಾಗಿದೆ. ನಿರ್ಮಲ್​ ಚರಿಯಾಲಿ ಎಂಬಲ್ಲಿ ಒಂದು ರಸ್ತೆ ಅಪಘಾತವಾಗಿತ್ತು. ಅದರಲ್ಲಿ ಹಿರಿಯ ನಾಗರಿಕರೊಬ್ಬರಿಗೆ ಗಾಯವಾಗಿತ್ತು. ಗಾಯಗೊಂಡು ಬಿದ್ದಿದ್ದ ಅವರನ್ನು ರಕ್ಷಿಸಲು ಮುಂದಾಗ ಅನಿಮೇಶ್​ ಭೂಯಾನ್​ ಮತ್ತು ಇತರ ಇಬ್ಬರ ಮೇಲೆ ಅಲ್ಲಿಯೇ ಇದ್ದ ಗುಂಪೊಂದು ದಾಳಿ ನಡೆಸಿದೆ.

ಅನಿಮೇಶ್​ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪೊಲೀಸರ ಎದುರೇ ಈ ಹೊಡೆದಾಟ ನಡೆದಿದೆ ಎಂದೂ ಹೇಳಲಾಗಿದೆ. ಇನ್ನು ಗಾಯಗೊಂಡ ಮೂವರನ್ನೂ ಪೊಲೀಸರು ಜೊಹ್ರತ್​ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದರು. ಇವರಲ್ಲಿ ಅನಿಮೇಶ್​ ಸ್ಥಿತಿ ಗಂಭೀರವಾಗಿದ್ದು, ಹೋಗುವಷ್ಟರಲ್ಲೇ ಮೃತಪಟ್ಟಿದ್ದರು.

ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಇದೀಗ 10 ಮಂದಿಯನ್ನು ಬಂಧಿಸಿದ್ದಾರೆ.  ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ. ಇನ್ನುಳಿದವರನ್ನು ಪತ್ತೆ ಮಾಡಲು ಕಾರ್ಯಾಚರಣೆ  ನಡೆಯುತ್ತಿದೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ. ಆರೋಪಿಗಳನ್ನು ಇನ್ನು 24 ಗಂಟೆಯಲ್ಲಿ ಬಂಧಿಸುವಂತೆ ಜೊಹ್ರತ್​ ಜಿಲ್ಲಾ ಎಎಎಸ್​ಯು ಆಗ್ರಹ ಮಾಡಿದೆ.

ಇದನ್ನೂ ಓದಿ: ಚೆನ್ನಾಗಿ ನಿದ್ರೆ ಮಾಡಬೇಕಾದರೆ, ಹಾಸಿಗೆಗೆ ತೆರಳುವ 4-5 ಗಂಟೆ ಮೊದಲು ರಾತ್ರಿಯೂಟ ಸೇವಿಸಬೇಕು: ಡಾ ಸೌಜನ್ಯ ವಶಿಷ್ಠ

Follow Us
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ