AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಪಘಾತದಲ್ಲಿ ಗಾಯಗೊಂಡ ಹಿರಿಯ ನಾಗರಿಕನನ್ನು ರಕ್ಷಿಸಲು ಹೋದವರ ಮೇಲೆ ಗುಂಪು ಹಲ್ಲೆ; ಪ್ರಾಣವನ್ನೇ ಕಳೆದುಕೊಂಡ ಯುವಕ

ಅನಿಮೇಶ್​ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪೊಲೀಸರ ಎದುರೇ ಈ ಹೊಡೆದಾಟ ನಡೆದಿದೆ ಎಂದೂ ಹೇಳಲಾಗಿದೆ.

Video: ಅಪಘಾತದಲ್ಲಿ ಗಾಯಗೊಂಡ ಹಿರಿಯ ನಾಗರಿಕನನ್ನು ರಕ್ಷಿಸಲು ಹೋದವರ ಮೇಲೆ ಗುಂಪು ಹಲ್ಲೆ; ಪ್ರಾಣವನ್ನೇ ಕಳೆದುಕೊಂಡ ಯುವಕ
ಅಸ್ಸಾಂನಲ್ಲಿ ಹಲ್ಲೆಯ ಚಿತ್ರ
TV9 Web
| Edited By: |

Updated on: Nov 30, 2021 | 8:42 AM

Share

ರಸ್ತೆಯಲ್ಲಿ ಅಪಘಾತವಾಗಿ ಗಾಯಗೊಂಡು ಬಿದ್ದಿದ್ದ ಹಿರಿಯ ನಾಗರಿಕನಿಗೆ ನೆರವು ನೀಡಲು ಮುಂದಾದವರ ಮೇಲೆ ಗುಂಪೊಂದು ಹಲ್ಲೆ ಮಾಡಿದ ಪರಿಣಾಮ ಒಬ್ಬ ಮೃತಪಟ್ಟ ದುರ್ಘಟನೆ ಅಸ್ಸಾಂನ ಜೊಹ್ರತ್​​ನಲ್ಲಿ ನಡೆದಿದೆ. ಹೀಗೆ ಮೃತಪಟ್ಟವನು ಆಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟದ ನಾಯಕ (AASU). ಈ ಗುಂಪು ಹಲ್ಲೆಯಲ್ಲಿ ಒಬ್ಬ ಪತ್ರಕರ್ತ ಸೇರಿ ಇಬ್ಬರು ಗಾಯಗೊಂಡಿದ್ದಾರೆ. 

ಮೃತ ಯವಕನನ್ನು ಅನಿಮೇಶ್​ ಭೂಯಾನ್​ (24) ಎಂದು ಗುರುತಿಸಲಾಗಿದೆ. ನಿರ್ಮಲ್​ ಚರಿಯಾಲಿ ಎಂಬಲ್ಲಿ ಒಂದು ರಸ್ತೆ ಅಪಘಾತವಾಗಿತ್ತು. ಅದರಲ್ಲಿ ಹಿರಿಯ ನಾಗರಿಕರೊಬ್ಬರಿಗೆ ಗಾಯವಾಗಿತ್ತು. ಗಾಯಗೊಂಡು ಬಿದ್ದಿದ್ದ ಅವರನ್ನು ರಕ್ಷಿಸಲು ಮುಂದಾಗ ಅನಿಮೇಶ್​ ಭೂಯಾನ್​ ಮತ್ತು ಇತರ ಇಬ್ಬರ ಮೇಲೆ ಅಲ್ಲಿಯೇ ಇದ್ದ ಗುಂಪೊಂದು ದಾಳಿ ನಡೆಸಿದೆ.

ಅನಿಮೇಶ್​ ಮತ್ತು ಇತರರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪೊಲೀಸರ ಎದುರೇ ಈ ಹೊಡೆದಾಟ ನಡೆದಿದೆ ಎಂದೂ ಹೇಳಲಾಗಿದೆ. ಇನ್ನು ಗಾಯಗೊಂಡ ಮೂವರನ್ನೂ ಪೊಲೀಸರು ಜೊಹ್ರತ್​ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದರು. ಇವರಲ್ಲಿ ಅನಿಮೇಶ್​ ಸ್ಥಿತಿ ಗಂಭೀರವಾಗಿದ್ದು, ಹೋಗುವಷ್ಟರಲ್ಲೇ ಮೃತಪಟ್ಟಿದ್ದರು.

ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಇದೀಗ 10 ಮಂದಿಯನ್ನು ಬಂಧಿಸಿದ್ದಾರೆ.  ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ. ಇನ್ನುಳಿದವರನ್ನು ಪತ್ತೆ ಮಾಡಲು ಕಾರ್ಯಾಚರಣೆ  ನಡೆಯುತ್ತಿದೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ. ಆರೋಪಿಗಳನ್ನು ಇನ್ನು 24 ಗಂಟೆಯಲ್ಲಿ ಬಂಧಿಸುವಂತೆ ಜೊಹ್ರತ್​ ಜಿಲ್ಲಾ ಎಎಎಸ್​ಯು ಆಗ್ರಹ ಮಾಡಿದೆ.

ಇದನ್ನೂ ಓದಿ: ಚೆನ್ನಾಗಿ ನಿದ್ರೆ ಮಾಡಬೇಕಾದರೆ, ಹಾಸಿಗೆಗೆ ತೆರಳುವ 4-5 ಗಂಟೆ ಮೊದಲು ರಾತ್ರಿಯೂಟ ಸೇವಿಸಬೇಕು: ಡಾ ಸೌಜನ್ಯ ವಶಿಷ್ಠ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು