AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ 5 ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆ ನಿಷೇಧ, ಶಾಲೆಗೆ ರಜೆ ಘೋಷಣೆ

Manipur: ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆ (ಸೆಪ್ಟೆಂಬರ್ 27)ಯಿಂದ ಸೆಪ್ಟೆಂಬರ್ 29(ಶುಕ್ರವಾರ) ವರೆಗೆ ರಜೆ ಘೋಷಿಸಲಾಗಿದೆ. ಈಗಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ದೃಷ್ಟಿಯಿಂದ ಮತ್ತು ತಪ್ಪು ಮಾಹಿತಿ, ಸುಳ್ಳು ವದಂತಿಗಳು ಮತ್ತು ಇತರ ಹಿಂಸಾತ್ಮಕ ಚಟುವಟಿಕೆಗಳ ಹರಡುವಿಕೆಯನ್ನು ತಡೆಯುವ ಪ್ರಯತ್ನದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದಲ್ಲಿ 5 ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆ ನಿಷೇಧ, ಶಾಲೆಗೆ ರಜೆ ಘೋಷಣೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Sep 26, 2023 | 9:54 PM

Share

ಇಂಫಾಲ್ ಸೆಪ್ಟೆಂಬರ್ 26: ಶಂಕಿತ ಶಸ್ತ್ರಧಾರಿಗಳು ಇಬ್ಬರು ವಿದ್ಯಾರ್ಥಿಗಳನ್ನು ಬರ್ಬರವಾಗಿ ಹತ್ಯೆ ಮಾಡಿದ ನಂತರ ರಾಜ್ಯದಲ್ಲಿ ಹೊಸ ಪ್ರತಿಭಟನೆಗಳು ಭುಗಿಲೆದ್ದಿದ್ದು ಮಣಿಪುರ (Manipur) ಮಂಗಳವಾರ ಮತ್ತೊಮ್ಮೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು (Mobile Internet) ಐದು ದಿನಗಳ ಕಾಲ ಸ್ಥಗಿತಗೊಳಿಸಿದೆ. ಸಂತ್ರಸ್ತರಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಮಂಗಳವಾರ ನೂರಾರು ವಿದ್ಯಾರ್ಥಿಗಳು ಬೀದಿಗಿಳಿದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ (N Biren Singh) ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸಿದರು. ಇಬ್ಬರು ವಿದ್ಯಾರ್ಥಿಗಳ ಶವದ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಇಲ್ಲಿ ಪರಿಸ್ಥಿತಿ ಹದಗೆಟ್ಟಿದೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆ (ಸೆಪ್ಟೆಂಬರ್ 27)ಯಿಂದ ಸೆಪ್ಟೆಂಬರ್ 29(ಶುಕ್ರವಾರ) ವರೆಗೆ ರಜೆ ಘೋಷಿಸಲಾಗಿದೆ. ಈಗಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ದೃಷ್ಟಿಯಿಂದ ಮತ್ತು ತಪ್ಪು ಮಾಹಿತಿ, ಸುಳ್ಳು ವದಂತಿಗಳು ಮತ್ತು ಇತರ ಹಿಂಸಾತ್ಮಕ ಚಟುವಟಿಕೆಗಳ ಹರಡುವಿಕೆಯನ್ನು ತಡೆಯುವ ಪ್ರಯತ್ನದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ.

“ರಾಜ್ಯ ಸರ್ಕಾರವು ಅಕ್ಟೋಬರ್ 10 ರ ಸಂಜೆ 7:45 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಐದು ದಿನಗಳ ಕಾಲ ಮಣಿಪುರ ರಾಜ್ಯದ ಪ್ರಾದೇಶಿಕ ವ್ಯಾಪ್ತಿಯಲ್ಲಿ VPN ಮೂಲಕ ಮೊಬೈಲ್ ಇಂಟರ್ನೆಟ್ ಡೇಟಾ ಸೇವೆಗಳು, ಇಂಟರ್ನೆಟ್ / ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು / ನಿಗ್ರಹಿಸಲು ನಿರ್ಧರಿಸಿದೆ” ಎಂದು ಸುತ್ತೋಲೆ ಹೇಳಿದೆ.

ಮೇ ತಿಂಗಳಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ನಂತರ ಸುಮಾರು ಐದು ತಿಂಗಳ ನಿಷೇಧದ ನಂತರ ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳನ್ನು ಇತ್ತೀಚೆಗೆ ಪುನಃಸ್ಥಾಪಿಸಲಾಗಿತ್ತು. ಒಂದು ಚಿತ್ರದಲ್ಲಿ, ಇಬ್ಬರು ವಿದ್ಯಾರ್ಥಿಗಳು 20ರ ಹರೆಯದ ಬ್ಬ ಪುರುಷ ಮತ್ತು 17ರ ಹರೆಯದ ಒಬ್ಬ ಹುಡುಗಿ ಸಶಸ್ತ್ರ ಗುಂಪಿನ ತಾತ್ಕಾಲಿಕ ಕಾಡಿನ ಶಿಬಿರದಲ್ಲಿ ಕುಳಿತಿರುವುದು ಕಂಡುಬಂದಿದೆ. ಇದಲ್ಲದೆ, ಇಬ್ಬರು ವ್ಯಕ್ತಿಗಳು ಅವರ ಹಿಂದೆ ಬಂದೂಕುಗಳನ್ನು ಹಿಡಿದಿರುವುದನ್ನು ಚಿತ್ರದಲ್ಲಿ ಕಾಣಬಹುದು. ಜುಲೈನಲ್ಲಿ ಜನಾಂಗೀಯ ಹಿಂಸಾಚಾರದ ಉತ್ತುಂಗದಲ್ಲಿ ಅವರು ಕಾಣೆಯಾಗಿದ್ದರು.

ಇದನ್ನೂ ಓದಿ: ಮಣಿಪುರ: ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಹತ್ಯೆ, ಶವದ ಚಿತ್ರಗಳು ವೈರಲ್

ಇನ್ನೊಂದು ಚಿತ್ರದಲ್ಲಿ ವಿದ್ಯಾರ್ಥಿಗಳಿಬ್ಬರ ದೇಹಗಳು ನೆಲದ ಮೇಲೆ ಬಿದ್ದಿರುವುದು ಕಾಣುತ್ತದೆ. ವ್ಯಕ್ತಿಯ ತಲೆ ಕಾಣೆಯಾಗಿದೆ. ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾದ ಎರಡು ದಿನಗಳ ನಂತರ ಜುಲೈ 8 ರಂದು ಫೋಟೋಗಳನ್ನು ತೆಗೆದುಕೊಳ್ಳಲಾಗಿದೆ.

ಮುಖ್ಯಮಂತ್ರಿಗಳ ಕಚೇರಿಯ ಪ್ರಕಾರ, ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ಉಸ್ತುವಾರಿ ವಹಿಸಿಕೊಂಡಿದೆ ಮತ್ತು ರಾಜ್ಯ ಸರ್ಕಾರವು ಅಪರಾಧಿಗಳ ವಿರುದ್ಧ ‘ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ, ಮಣಿಪುರದಲ್ಲಿ ಮೈತಿ ಬುಡಕಟ್ಟು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆಗಳಿಂದ ತತ್ತರಿಸಿದ ನಂತರ ಇದೀಗ ಮತ್ತೊಮ್ಮೆ ಇಲ್ಲಿ ಪರಿಸ್ಥಿತಿ ಹದಗೆಡುತ್ತಿದೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!