AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ ರೂಪದರ್ಶಿ; ಬಾಲಿವುಡ್​ ಪ್ರಮುಖ ನಟ ಸೇರಿ 9 ಮಂದಿ ವಿರುದ್ಧ ಎಫ್​ಐಆರ್​

ಮಹಿಳೆ ನೀಡಿದ ದೂರಿನ ಅನ್ವಯ 9 ಗಣ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ಇವರೆಲ್ಲ ಬಾಲಿವುಡ್ ಮನರಂಜನಾ ಕ್ಷೇತ್ರದಲ್ಲಿ ಹೆಸರು ಮಾಡಿದವರೇ ಆಗಿದ್ದಾರೆ. ಇನ್ನು ಈ ರೂಪದರ್ಶಿ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಪೋಸ್ಟ್ ಹಾಕಿಕೊಂಡಿದ್ದಾರೆ.

ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ ರೂಪದರ್ಶಿ; ಬಾಲಿವುಡ್​ ಪ್ರಮುಖ ನಟ ಸೇರಿ 9 ಮಂದಿ ವಿರುದ್ಧ ಎಫ್​ಐಆರ್​
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Jun 01, 2021 | 11:22 AM

Share

ಮುಂಬೈ: ಬಾಲಿವುಡ್​ ನಟನೊಬ್ಬ ಸೇರಿ, ಚಲನಚಿತ್ರ, ಮನರಂಜನೆ ಕ್ಷೇತ್ರದ 11 ಮಂದಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 28ವರ್ಷದ ರೂಪದರ್ಶಿಯೊಬ್ಬರು ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ. ಈಕೆ ಗೀತರಚನೆಕಾರರೂ ಆಗಿದ್ದು, ತನಗೆ ಸುಮಾರು 11 ಜನರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ, ಮುಂಬೈ ಝೋನ್​ 10 ಡಿಸಿಪಿ ಮಹೇಶ್ವರ್​ ರೆಡ್ಡಿ ಅವರನ್ನು ಸಂಪರ್ಕಿಸಿದ್ದರು. ಅವರು ಅಂಧೇರಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರಿಗೆ ಈಕೆಯ ಹೇಳಿಕೆಗಳನ್ನು ದಾಖಲಿಸುವಂತೆ ನಿರ್ದೇಶಿಸಿದ್ದಾರೆ. ಇದೀಗ ಪ್ರಕರಣವನ್ನು ಬಾಂದ್ರಾದಲ್ಲಿರುವ ಝೋನ್​ 9ರ ಡಿಸಿಪಿ ಕಚೇರಿಗೆ ವರ್ಗಾಯಿಸಲಾಗಿದೆ.

ಮಹಿಳೆ ನೀಡಿದ ದೂರಿನ ಅನ್ವಯ 9 ಗಣ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ಇವರೆಲ್ಲ ಬಾಲಿವುಡ್ ಮನರಂಜನಾ ಕ್ಷೇತ್ರದಲ್ಲಿ ಹೆಸರು ಮಾಡಿದವರೇ ಆಗಿದ್ದಾರೆ. ಇನ್ನು ಈ ರೂಪದರ್ಶಿ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಪೋಸ್ಟ್ ಹಾಕಿಕೊಂಡಿದ್ದಾರೆ. ಈ ಘಟನೆಗಳು ನಡೆದಿದ್ದು 2013-2019ರ ಅವಧಿಯಲ್ಲಿ. ನಾನು 11 ಮಂದಿ ವಿರುದ್ಧ ದೂರು ನೀಡಿದ್ದೇನೆ. ಆದರೆ ಪೊಲೀಸರು 9 ಜನರ ವಿರುದ್ಧ ಮಾತ್ರ ಎಫ್​ಐಆರ್​ ದಾಖಲಿಸಿದ್ದಾರೆ. ಮುಂಬೈನಿಂದ ಹೊರಗೆ ನಡೆದ ಘಟನೆಯ ಬಗ್ಗೆ ನಾವು ಕೇಸ್​ ದಾಖಲು ಮಾಡಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳಿ, ಎರಡು ಘಟನೆಯನ್ನು ಪರಿಗಣಿಸಿಲ್ಲ ಎಂದು ಮಾಡೆಲ್ ಆರೋಪಿಸಿದ್ದಾರೆ. ನಾನು ಡಿಸಿಪಿ ಮಹೇಶ್ವರ್ ರೆಡ್ಡಿಯವರನ್ನು ಏಪ್ರಿಲ್​ 1ರಂದು ಭೇಟಿಯಾಗಿದ್ದೆ. ಆಗಲೇ ಎಫ್​ಐಆರ್​ ದಾಖಲಾಗಬೇಕಿತ್ತು. ಆದರೆ ಪೊಲೀಸರು ಇತ್ತೀಚೆಗೆ ಮೇ 26ರಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ 9 ಮಂದಿ ವಿರುದ್ಧ ಎಫ್​ಐಆರ್ ದಾಖಲು ಮಾಡಿದ್ದಾರೆ ಎಂದೂ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ನಿವೃತ್ತ ಕೆಇಬಿ ನೌಕರ ಬಲಿ; 4 ಲಕ್ಷ ಹಣ ಕಟ್ಟಿ ಬಾಡಿ ತೆಗೆದುಕೊಂಡು ಹೋಗಿ ಅಂತಿರೋ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

Published On - 11:11 am, Tue, 1 June 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್