24,634 ಕೋಟಿ ರೂ. ಮೌಲ್ಯದ 4 ರೈಲ್ವೆ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟವು ಇಂದು 24,634 ಕೋಟಿ ರೂ. ಮೌಲ್ಯದ 4 ಪ್ರಮುಖ ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಿದೆ. ಮಧ್ಯ ಭಾರತದಾದ್ಯಂತ ಸಾಮರ್ಥ್ಯ ಮತ್ತು ಸಂಪರ್ಕವನ್ನು ಹೆಚ್ಚಿಸಲು ಪ್ರಮುಖ ಮಾರ್ಗಗಳಲ್ಲಿ ಮೂರನೇ ಮತ್ತು ನಾಲ್ಕನೇ ಮಾರ್ಗಗಳ ನಿರ್ಮಾಣವನ್ನು ಅನುಮೋದಿಸಲಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್ ಮತ್ತು ಛತ್ತೀಸ್‌ಗಢ ರಾಜ್ಯಗಳಾದ್ಯಂತ 18 ಜಿಲ್ಲೆಗಳನ್ನು ಒಳಗೊಂಡ ನಾಲ್ಕು ಯೋಜನೆಗಳು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 894 ಕಿಮೀ ಹೆಚ್ಚಿಸುತ್ತವೆ.

24,634 ಕೋಟಿ ರೂ. ಮೌಲ್ಯದ 4 ರೈಲ್ವೆ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ
Ashwini Vaishnaw

Updated on: Oct 07, 2025 | 8:54 PM

ನವದೆಹಲಿ, ಅಕ್ಟೋಬರ್ 7: ಮಧ್ಯ ಭಾರತದಾದ್ಯಂತ ರೈಲು ಸಂಪರ್ಕವನ್ನು ಹೆಚ್ಚಿಸಲು 24,634 ಕೋಟಿ ರೂ. ಮೌಲ್ಯದ 4 ಪ್ರಮುಖ ರೈಲ್ವೆ ಯೋಜನೆಗಳಿಗೆ ಇಂದು ಕೇಂದ್ರ ಸಚಿವ ಸಂಪುಟ (Union Cabinet Meeting) ಅನುಮೋದನೆ ನೀಡಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್ ಮತ್ತು ಛತ್ತೀಸ್‌ಗಢ ರಾಜ್ಯಗಳ 18 ಜಿಲ್ಲೆಗಳನ್ನು ವ್ಯಾಪಿಸಿರುವ ವಾರ್ಧಾ-ಭುಸಾವಲ್ (314 ಕಿಮೀ), ಗೊಂಡಿಯಾ-ಡೊಂಗರ್‌ಗಢ (84 ಕಿಮೀ), ವಡೋದರಾ-ರತ್ಲಾಮ್ (259 ಕಿಮೀ) ಮತ್ತು ಇಟಾರ್ಸಿ-ಭೋಪಾಲ್-ಬಿನಾ (237 ಕಿಮೀ) ಮಾರ್ಗಗಳ ಮೂರನೇ ಮತ್ತು ನಾಲ್ಕನೇ ಮಾರ್ಗಗಳು ಇದರಲ್ಲಿ ಸೇರಿವೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್ ಮತ್ತು ಛತ್ತೀಸ್‌ಗಢ ರಾಜ್ಯಗಳಾದ್ಯಂತ 18 ಜಿಲ್ಲೆಗಳನ್ನು ಒಳಗೊಂಡ 4 ಯೋಜನೆಗಳು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 894 ಕಿ.ಮೀ ಹೆಚ್ಚಿಸುತ್ತವೆ. ಅನುಮೋದನೆಗೊಂಡಿರುವ ಮಲ್ಟಿ-ಟ್ರ್ಯಾಕಿಂಗ್ ಯೋಜನೆಯು ಸುಮಾರು 85.84 ಲಕ್ಷ ಜನಸಂಖ್ಯೆಯನ್ನು ಹೊಂದಿರುವ 3,633 ಹಳ್ಳಿಗಳು ಮತ್ತು 2 ಜಿಲ್ಲೆಗಳಾದ ವಿದಿಶಾ ಮತ್ತು ರಾಜನಂದಗಾಂವ್​ಗೆ ಸಂಪರ್ಕವನ್ನು ಹೆಚ್ಚಿಸುತ್ತದೆ.


ಇದನ್ನೂ ಓದಿ: ಹಡಗು ನಿರ್ಮಾಣ, ಕಡಲ ಅಭಿವೃದ್ಧಿಗಾಗಿ 69,725 ಕೋಟಿ ರೂ.ಗಳ ಯೋಜನೆಗೆ ಮೋದಿ ಸಂಪುಟ ಅನುಮೋದನೆ

ಈ ಯೋಜನೆಗಳನ್ನು ಪ್ರಧಾನಮಂತ್ರಿ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಯೋಜಿಸಲಾಗಿದೆ. ಈ ಯೋಜನೆಗಳು ಜನರು, ಸರಕುಗಳು ಮತ್ತು ಸೇವೆಗಳ ಚಲನೆಗೆ ತಡೆರಹಿತ ಸಂಪರ್ಕವನ್ನು ಒದಗಿಸುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. “ಇದು ದೇಶಾದ್ಯಂತ ಪ್ರವಾಸಿಗರನ್ನು ಆಕರ್ಷಿಸುವ ಸಾಂಚಿ, ಸತ್ಪುರ ಹುಲಿ ಮೀಸಲು ಪ್ರದೇಶ, ಭಿಂಬೆಟ್ಕಾದ ರಾಕ್ ಶೆಲ್ಟರ್, ಹಜಾರ ಜಲಪಾತ, ನವೇಗಾಂವ್ ರಾಷ್ಟ್ರೀಯ ಉದ್ಯಾನವನ ಮುಂತಾದ ಪ್ರಮುಖ ಪ್ರವಾಸಿ ತಾಣಗಳಿಗೆ ರೈಲು ಸಂಪರ್ಕವನ್ನು ಒದಗಿಸುತ್ತದೆ” ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us