Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayushman Bharat: ಮೋದಿ ಸರ್ಕಾರದ ಮಹತ್ವದ ನಿರ್ಧಾರ; 70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ಆಯುಷ್ಮಾನ್ ಭಾರತ್ ವ್ಯಾಪ್ತಿಯನ್ನು ವಿಸ್ತರಿಸುವುದರಿಂದ 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯುತ್ತಾರೆ. ಈ ಆರೋಗ್ಯ ವಿಮೆಯನ್ನು ಮೋದಿ ಸಂಪುಟ ಅನುಮೋದಿಸಿದೆ.

Ayushman Bharat: ಮೋದಿ ಸರ್ಕಾರದ ಮಹತ್ವದ ನಿರ್ಧಾರ; 70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ
ಅಶ್ವಿನಿ ವೈಷ್ಣವ್
Follow us
ಸುಷ್ಮಾ ಚಕ್ರೆ
|

Updated on:Sep 11, 2024 | 9:25 PM

ನವದೆಹಲಿ: 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಸಚಿವ ಸಂಪುಟ ಸಭೆಯ ನಂತರ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಒಳಗೊಳ್ಳಲು ಕೇಂದ್ರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB PM-JAY) ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಅವರ ಆದಾಯವನ್ನು ಲೆಕ್ಕಿಸದೆ 5 ಲಕ್ಷ ರೂ. ಆರೋಗ್ಯ ರಕ್ಷಣೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ.

ಇದನ್ನೂ ಓದಿ: ಸೆಮಿಕಂಡಕ್ಟರ್ ಡಿಜಿಟಲ್ ಯುಗದ ಆಧಾರವಾಗಿದೆ; ಪ್ರಧಾನಿ ನರೇಂದ್ರ ಮೋದಿ

“ಇದೊಂದು ದೊಡ್ಡ ನಿರ್ಧಾರ. ಈ ನಿರ್ಧಾರದಲ್ಲಿ ಮಾನವೀಯ ಚಿಂತನೆ ಇದೆ. ಅವರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಸಿಗಲಿದೆ ಮತ್ತು ಇದು ದೇಶದ ಸುಮಾರು 4.5 ಕೋಟಿ ಕುಟುಂಬಗಳನ್ನು ಒಳಗೊಳ್ಳುತ್ತದೆ. ಇದರಲ್ಲಿ ಸುಮಾರು 6 ಕೋಟಿ ಹಿರಿಯ ನಾಗರಿಕರು ಸೇರಿದ್ದಾರೆ.” ಎಂದು ಸಚಿವ ಅಶ್ವಿನ್ ವೈಷ್ಣವ್ ಹೇಳಿದ್ದಾರೆ.

ಸರ್ಕಾರದ ಉಚಿತ ಆರೋಗ್ಯ ವಿಮೆಯನ್ನು ಹೇಗೆ ಪಡೆಯುವುದು?:

– 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB PM-JAY) ಅಡಿಯಲ್ಲಿ ವಿಶಿಷ್ಟವಾದ ಕಾರ್ಡ್ ಅನ್ನು ಸ್ವೀಕರಿಸುತ್ತಾರೆ.

– ಈಗಾಗಲೇ AB PM-JAY ವ್ಯಾಪ್ತಿಗೆ ಒಳಪಡುವವರು ತಮ್ಮ ಕುಟುಂಬದ ಹಿರಿಯ ನಾಗರಿಕರಿಗೆ ವಾರ್ಷಿಕವಾಗಿ 5 ಲಕ್ಷ ರೂ. ಹೆಚ್ಚುವರಿ ಟಾಪ್ ಅಪ್ ಪಡೆಯುತ್ತಾರೆ.

– ಇತರ ಸಾರ್ವಜನಿಕ ಆರೋಗ್ಯ ವಿಮಾ ಯೋಜನೆಗಳಿಂದ ಈಗಾಗಲೇ ಪ್ರಯೋಜನ ಪಡೆಯುತ್ತಿರುವ ಹಿರಿಯ ನಾಗರಿಕರು ತಮ್ಮ ಪ್ರಸ್ತುತ ಯೋಜನೆಯನ್ನು ಮುಂದುವರಿಸಬಹುದು ಅಥವಾ AB PM-JAY ಅಡಿಯಲ್ಲಿ ವ್ಯಾಪ್ತಿಯನ್ನು ಆರಿಸಿಕೊಳ್ಳಬಹುದು.

ಇದನ್ನೂ ಓದಿ: ಎಂಟೋಡ್ ಐ ಡ್ರಾಪ್​ಗಳ ತಯಾರಿಕೆಯ ಅನುಮತಿ ರದ್ದುಗೊಳಿಸಿದ ಡ್ರಗ್ ರೆಗ್ಯುಲೇಟರ್

ಏನಿದು ಆಯುಷ್ಮಾನ್ ಭಾರತ್ ಯೋಜನೆ?:

– ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯು ವಿಶ್ವದ ಅತಿ ದೊಡ್ಡ ಸಾರ್ವಜನಿಕ ಹಣದ ಆರೋಗ್ಯ ಭರವಸೆ ಯೋಜನೆಯಾಗಿದೆ.

– ಇದು ದ್ವಿತೀಯ ಮತ್ತು ತೃತೀಯ ಆರೈಕೆ ಆಸ್ಪತ್ರೆಗಳಿಗೆ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ. ಆರೋಗ್ಯ ರಕ್ಷಣೆ ನೀಡುತ್ತದೆ.

– ಈ ಯೋಜನೆಯು ಕುಟುಂಬದ ಸದಸ್ಯರ ವಯಸ್ಸನ್ನು ಲೆಕ್ಕಿಸದೆ 12.34 ಕೋಟಿ ಕುಟುಂಬಗಳಿಂದ 55 ಕೋಟಿ ಜನರನ್ನು ಒಳಗೊಂಡಿದೆ.

– 7.37 ಕೋಟಿ ಆಸ್ಪತ್ರೆ ದಾಖಲಾತಿಗಳನ್ನು ಯೋಜನೆಯಡಿ ಒಳಪಡಿಸಲಾಗಿದ್ದು, ಶೇ. 49ರಷ್ಟು ಫಲಾನುಭವಿಗಳು ಮಹಿಳೆಯರಾಗಿದ್ದಾರೆ.

– ಇಲ್ಲಿಯವರೆಗೆ, ಈ ಆರೋಗ್ಯ ಉಪಕ್ರಮದ ಮೂಲಕ ಸಾರ್ವಜನಿಕರು 1 ಲಕ್ಷ ಕೋಟಿ ರೂ.ಗೂ ಹೆಚ್ಚು ಪ್ರಯೋಜನ ಪಡೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Wed, 11 September 24

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು