ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಪ್ರಧಾನಿ ಹರ್ಷ, ಸಂಸದರನ್ನ ಕಚೇರಿಗೆ ಕರೆಸಿ ಅಭಿನಂದಿಸಿದ ಮೋದಿ

ದೆಹಲಿ: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ರಾಜ್ಯದ ಸಂಸದರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ಅಭಿನಂದಿಸಿದ್ದಾರೆ. ರಾಜ್ಯ ಬಿಜೆಪಿ ಘಟಕವನ್ನು ಅಭಿನಂದಿಸಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರ ಸ್ಥಿರವಾಗಿದೆ. ಉಪಚುನಾವಣೆಯಲ್ಲಿ ಉತ್ತಮ ಅಂತರದಿಂದ ಗೆಲುವಾಗಿದೆ ಎಂದು ಇತರೆ ಸಂಸದರನ್ನು ಎದ್ದು ನಿಲ್ಲಿಸಿ ಚಪ್ಪಾಳೆ ತಟ್ಟಿ ಸಿಹಿ ತಂದು ಕೊಡಿ ಎಂದು ಹರ್ಷವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ರಾಜ್ಯದ ಸಂಸದರು ಸಿಎಂ ಬಿಎಸ್‌ಯಡಿಯೂರಪ್ಪಗೆ ಕರೆ ಮಾಡುವ ಮೂಲಕ ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಪ್ರಧಾನಿ ಹರ್ಷ, ಸಂಸದರನ್ನ ಕಚೇರಿಗೆ ಕರೆಸಿ ಅಭಿನಂದಿಸಿದ ಮೋದಿ
ಸಾಧು ಶ್ರೀನಾಥ್​

Updated on: Dec 11, 2019 | 12:44 PM

ದೆಹಲಿ: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ರಾಜ್ಯದ ಸಂಸದರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ಅಭಿನಂದಿಸಿದ್ದಾರೆ. ರಾಜ್ಯ ಬಿಜೆಪಿ ಘಟಕವನ್ನು ಅಭಿನಂದಿಸಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರ ಸ್ಥಿರವಾಗಿದೆ.

ಉಪಚುನಾವಣೆಯಲ್ಲಿ ಉತ್ತಮ ಅಂತರದಿಂದ ಗೆಲುವಾಗಿದೆ ಎಂದು ಇತರೆ ಸಂಸದರನ್ನು ಎದ್ದು ನಿಲ್ಲಿಸಿ ಚಪ್ಪಾಳೆ ತಟ್ಟಿ ಸಿಹಿ ತಂದು ಕೊಡಿ ಎಂದು ಹರ್ಷವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ರಾಜ್ಯದ ಸಂಸದರು ಸಿಎಂ ಬಿಎಸ್‌ಯಡಿಯೂರಪ್ಪಗೆ ಕರೆ ಮಾಡುವ ಮೂಲಕ ತಿಳಿಸಿದ್ದಾರೆ.

Published On - 12:43 pm, Wed, 11 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us