Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ವಿಫಲ; ಕೇಂದ್ರ ಸರ್ಕಾರಕ್ಕೆ ರಿಪೋರ್ಟ್ ಕಾರ್ಡ್ ಕೊಟ್ಟು ಟೀಕಿಸಿದ ಸುಬ್ರಹ್ಮಣಿಯನ್ ಸ್ವಾಮಿ

ಬುಧವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದ ಸುಬ್ರಹ್ಮಣಿಯನ್ ಸ್ವಾಮಿ ನಂತರ ಟ್ವೀಟ್ ಮೂಲಕ ಅವರನ್ನು ಹೊಗಳಿದ್ದರು. ಅಷ್ಟೇ ಅಲ್ಲ, ಜಯಪ್ರಕಾಶ್​ ನಾರಾಯಣ್​, ಮೊರಾರ್ಜಿ ದೇಸಾಯಿ, ರಾಜೀವ್​ ಗಾಂಧಿ, ಚಂದ್ರಶೇಖರ್​ ಮತ್ತು ಪಿ.ವಿ.ನರಸಿಂಹ ರಾವ್​ ಅವರಂಥ ರಾಜಕೀಯ ದಿಗ್ಗಜರೊಂದಿಗೆ ಹೋಲಿಸಿದ್ದರು.

ಮೋದಿ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ವಿಫಲ; ಕೇಂದ್ರ ಸರ್ಕಾರಕ್ಕೆ ರಿಪೋರ್ಟ್ ಕಾರ್ಡ್ ಕೊಟ್ಟು ಟೀಕಿಸಿದ ಸುಬ್ರಹ್ಮಣಿಯನ್ ಸ್ವಾಮಿ
ಸುಬ್ರಹ್ಮಣಿಯನ್ ಸ್ವಾಮಿ
Follow us
TV9 Web
| Updated By: Lakshmi Hegde

Updated on:Nov 25, 2021 | 10:20 AM

ನಿನ್ನೆ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಸ್ಪರ ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ. ಅದರ ಬೆನ್ನಲ್ಲೇ ಇಂದು ಸುಬ್ರಹ್ಮಣಿಯನ್ ಸ್ವಾಮಿ ಮತ್ತೆ ಬಿಜೆಪಿ ಸರ್ಕಾರವನ್ನು ತೀವ್ರವಾಗಿಯೇ ಟೀಕಿಸಿದ್ದಾರೆ. ಕೇಂದ್ರ ಸರ್ಕಾರ ತನ್ನ ಆಡಳಿತದ ಪ್ರತಿ ಅಂಶದಲ್ಲೂ ವಿಫಲವಾಗಿದೆ ಎಂದು ಕಟುವಾಗಿ ಹೇಳಿದ್ದಾರೆ.  ಆರ್ಥಿಕತೆ, ಗಡಿ ಭದ್ರತೆ ಸೇರಿ ಪ್ರತಿಯೊಂದರಲ್ಲೂ ಮೋದಿ ಸರ್ಕಾರದ ವಿಫಲತೆ ಎದ್ದು ಕಾಣುತ್ತಿದೆ ಎಂದು ಹೇಳಿರುವ ಸ್ವಾಮಿ, ಪೆಗಾಸಸ್​ ಡಾಟಾ ಭದ್ರತೆ ಉಲ್ಲಂಘನೆ, ಅಫ್ಘಾನಿಸ್ತಾನ ಬಿಕ್ಕಟ್ಟನ್ನು ನಿರ್ವಹಣೆ ಮಾಡುತ್ತಿರುವ ರೀತಿಯಲ್ಲೂ ಕೇಂದ್ರ ಸರ್ಕಾರ ನಗೆಪಾಟಲಿಗೀಡಾಗಿದೆ ಎಂದು ಹೇಳಿದ್ದಾರೆ.  

ಟ್ವೀಟ್ ಮಾಡಿರುವ ಸುಬ್ರಹ್ಮಣಿಯನ್​ ಸ್ವಾಮಿ ಪ್ರಧಾನಿ ಮೋದಿ ಸರ್ಕಾರಕ್ಕೆ ರಿಪೋರ್ಟ್ ಕಾರ್ಡ್​ ಕೊಟ್ಟಿದ್ದಾರೆ. ಅದರಲ್ಲಿ ಆರ್ಥಿಕತೆ-ಫೇಲ್​, ಗಡಿ ಭದ್ರತೆ-ಫೇಲ್​, ವಿದೇಶಾಂಗ ನೀತಿ-ಅಫ್ಘಾನಿಸ್ತಾನ ಬಿಕ್ಕಟ್ಟು ನಿರ್ವಹಣೆ ವೈಫಲ್ಯ, ರಾಷ್ಟ್ರೀಯ ಭದ್ರತೆ-ಪೆಗಾಸಸ್​ ಎನ್​ಎಸ್ಒ, ಅಂತಾರಾಷ್ಟ್ರೀಯ ಭದ್ರತೆ-ಕಾಶ್ಮೀರದ ಕರಾಳತೆ ಕಾರಣ ಯಾರು?

ಬುಧವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದ ಸುಬ್ರಹ್ಮಣಿಯನ್ ಸ್ವಾಮಿ ನಂತರ ಟ್ವೀಟ್ ಮೂಲಕ ಅವರನ್ನು ಹೊಗಳಿದ್ದರು. ಅಷ್ಟೇ ಅಲ್ಲ, ಜಯಪ್ರಕಾಶ್​ ನಾರಾಯಣ್​, ಮೊರಾರ್ಜಿ ದೇಸಾಯಿ, ರಾಜೀವ್​ ಗಾಂಧಿ, ಚಂದ್ರಶೇಖರ್​ ಮತ್ತು ಪಿ.ವಿ.ನರಸಿಂಹ ರಾವ್​ ಅವರಂಥ ರಾಜಕೀಯ ದಿಗ್ಗಜರೊಂದಿಗೆ ಹೋಲಿಸಿದ್ದರು. ಟ್ವೀಟ್ ಮಾಡಿದ್ದ ಅವರು,  ನಾನು ಅನೇಕ ರಾಜಕಾರಣಿಗಳೊಟ್ಟಿಗೆ ಕೆಲಸ ಮಾಡಿದ್ದೇನೆ ಮತ್ತು ಭೇಟಿಯಾಗಿದ್ದೇನೆ. ಅವರಲ್ಲಿ ಮಮತಾ ಬ್ಯಾನರ್ಜಿ, ಜೆಪಿ, ಮೊರಾರ್ಜಿ ದೇಸಾಯಿ, ರಾಜೀವ್ ಗಾಂಧಿ, ಚಂದ್ರಶೇಖರ್​ ಮತ್ತು ಪಿ.ವಿ.ನರಸಿಂಹ ರಾವ್​ ಅವರು ಏನು ಹೇಳಿದ್ದಾರೋ ಅದನ್ನೇ ಮಾಡಿದ್ದಾರೆ ಮತ್ತು ಏನನ್ನು ಮಾಡುತ್ತಿದ್ದರೋ ಅದನ್ನೇ ಹೇಳಿದ್ದಾರೆ. ಭಾರತೀಯ ರಾಜಕಾರಣದಲ್ಲಿ ಅವರು ಅಪರೂಪದ ಗುಣವುಳ್ಳವರು ಎಂದು ಸುಬ್ರಹ್ಮಣಿಯನ್​ ಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ: ಆಹಾರ ಪದ್ಧತಿಯ ಬದಲಾವಣೆಯಿಂದ ದೀರ್ಘಕಾಲದ ಮೈಗ್ರೇನ್ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದೇ? ತಜ್ಞರು ಹೇಳುವುದೇನು?

Published On - 9:56 am, Thu, 25 November 21

ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?