AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದಿಂದ ದೇಶದ ಮೊದಲ ಆದಿ ವಾಣಿ ಅನುವಾದ ಅಪ್ಲಿಕೇಶನ್‌ನ ಬೀಟಾ ಆವೃತ್ತಿ ಬಿಡುಗಡೆ

ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಇಂದು (ಸೆಪ್ಟೆಂಬರ್ 1) ದೇಶದ ಮೊದಲ AI ಆಧಾರಿತ ಅನುವಾದ ಅಪ್ಲಿಕೇಶನ್ 'ಆದಿ ವಾಣಿ'ಯ ಬೀಟಾ ಆವೃತ್ತಿಯನ್ನು ಬಿಡುಗಡೆ ಮಾಡಿತು. ರಾಷ್ಟ್ರೀಯ ಗೌರವ ವರ್ಷ (ಜೆಜೆಜಿವಿ) ಆಚರಣೆಯ ಭಾಗವಾಗಿ ನವದೆಹಲಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ಆದಿ ವಾಣಿ AI ಅತ್ಯುತ್ತಮ ಅನುವಾದ ಸಾಧನ ಮಾತ್ರವಲ್ಲದೆ ಸಮುದಾಯಗಳನ್ನು ಸಂಪರ್ಕಿಸಲು ಮತ್ತು ಸಾಂಸ್ಕೃತಿಕ ಗುರುತನ್ನು ಸಂರಕ್ಷಿಸಲು ಉತ್ತಮ ವೇದಿಕೆಯಾಗಿದೆ. ಈ ಉಪಕ್ರಮವು ಅಳಿವಿನಂಚಿನಲ್ಲಿರುವ ಭಾಷೆಗಳ ಡಿಜಿಟಲೀಕರಣಕ್ಕೆ ಸಹಾಯ ಮಾಡುತ್ತದೆ.

ಕೇಂದ್ರ ಸರ್ಕಾರದಿಂದ ದೇಶದ ಮೊದಲ ಆದಿ ವಾಣಿ ಅನುವಾದ ಅಪ್ಲಿಕೇಶನ್‌ನ ಬೀಟಾ ಆವೃತ್ತಿ ಬಿಡುಗಡೆ
Adi Vaani
ಸುಷ್ಮಾ ಚಕ್ರೆ
|

Updated on: Sep 01, 2025 | 9:33 PM

Share

ನವದೆಹಲಿ, ಸೆಪ್ಟೆಂಬರ್ 1: ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಇಂದು ಭಾರತದ ಮೊದಲ AI ಆಧಾರಿತ ಅನುವಾದಕ ವೇದಿಕೆ ಆದಿ ವಾಣಿಯ (Adi Vaani) ಬೀಟಾ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ದೇಶದಲ್ಲಿ ಸಮಗ್ರ ಬುಡಕಟ್ಟು ಸಬಲೀಕರಣ ಮತ್ತು ಭಾಷಾ ಸಂರಕ್ಷಣೆಯ ಕಡೆಗೆ ಸಚಿವಾಲಯ ಈ ಐತಿಹಾಸಿಕ ಉಪಕ್ರಮವನ್ನು ಪ್ರಾರಂಭಿಸಿದೆ. ಬುಡಕಟ್ಟು ಹೆಮ್ಮೆಯ ವರ್ಷ (ಜೆಜೆಜಿವಿ) ಅಡಿಯಲ್ಲಿ ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದ ಸಂರಸ್ತಾ ಸಭಾಂಗಣದಲ್ಲಿ ಇದನ್ನು ಇಂದು ಆಯೋಜಿಸಲಾಗಿದೆ.

ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವ ದುರ್ಗಾದಾಸ್ ಉಯಿಕೆ ಈ ಸಮಾರಂಭದಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿದ್ದರು. ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಭು ನಾಯರ್, ಐಐಟಿ ದೆಹಲಿಯ ನಿರ್ದೇಶಕ ರಂಗನ್ ಬ್ಯಾನರ್ಜಿ, ಬುಡಕಟ್ಟು ವ್ಯವಹಾರಗಳ ಸಚಿವಾಲಯದ ನಿರ್ದೇಶಕ ಅನಂತ್ ಪ್ರಕಾಶ್ ಪಾಂಡೆ, ಐಐಟಿ ದೆಹಲಿಯ ಬಿಬಿಎಂಸಿ ಸೆಲ್‌ನ ಪ್ರಾಧ್ಯಾಪಕ ದೀಪಾಲಿ ಮಸಿರ್ಕರ್, ಐಐಟಿ ದೆಹಲಿಯ ಅಸೋಸಿಯೇಟ್ ಪ್ರೊಫೆಸರ್ ಸಂದೀಪ್ ಕುಮಾರ್ ಕೂಡ ಭಾಗವಹಿಸಿದ್ದರು. ಎಲ್ಲಾ ರಾಜ್ಯಗಳ ಬುಡಕಟ್ಟು ಸಂಶೋಧನಾ ಸಂಸ್ಥೆಗಳು (ಟಿಆರ್‌ಐ) ಮತ್ತು ಬುಡಕಟ್ಟು ಭಾಷಾ ತಜ್ಞರು ಸಹ ಈ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ದುರ್ಗಾದಾಸ್ ಉಯಿಕೆ, ಭಾಷೆ ಸಾಂಸ್ಕೃತಿಕ ಗುರುತಿನ ಆಧಾರವಾಗಿದೆ ಮತ್ತು ವಿವಿಧ ಸಮುದಾಯಗಳನ್ನು ಸಂಪರ್ಕಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಒತ್ತಿ ಹೇಳಿದರು. ಆದಿ ವಾಣಿಯು ದೂರದ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಸಂವಹನ ಅಂತರವನ್ನು ಕಡಿಮೆ ಮಾಡಲು, ಬುಡಕಟ್ಟು ಯುವಕರನ್ನು ಡಿಜಿಟಲ್ ರೂಪದಲ್ಲಿ ಸಬಲೀಕರಣಗೊಳಿಸಲು ಮತ್ತು ಆದಿ ಕರ್ಮಯೋಗಿ ಚೌಕಟ್ಟಿನ ಅಡಿಯಲ್ಲಿ ಕೊನೆಯ ಹಂತದ ಸೇವೆಗಳನ್ನು ಒದಗಿಸಲು ಸಹಾಯ ಮಾಡುತ್ತದೆ ಎಂದರು.

ಇದನ್ನೂ ಓದಿ: ಬಿಡುಗಡೆಗೆ ಸಿದ್ಧವಾದ ದೇಶದ ಮೊದಲ AI ಬುಡಕಟ್ಟು ಭಾಷಾ ಅನುವಾದಕ “ಆದಿ ವಾಣಿ”

ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಭು ನಾಯರ್, ಆದಿ ವಾಣಿಯನ್ನು ಮಿತವ್ಯಯದ ನಾವೀನ್ಯತೆ ಎಂದು ಕರೆದರು. ಇದನ್ನು ವಾಣಿಜ್ಯ ವೇದಿಕೆಗಳ ವೆಚ್ಚದ ಕೇವಲ 10ನೇ ಒಂದು ಭಾಗದಷ್ಟು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು. ಈ ಯೋಜನೆಯು ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಗಳು (ಟಿಆರ್‌ಐ) ಸಂಗ್ರಹಿಸಿದ ಅಧಿಕೃತ ಭಾಷಾ ದತ್ತಾಂಶದೊಂದಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಸಂಯೋಜಿಸುತ್ತದೆ ಮತ್ತು ಸಮುದಾಯದ ಭಾಗವಹಿಸುವಿಕೆಯ ಮೂಲಕ ನಿರಂತರ ಸುಧಾರಣೆಯನ್ನು ಉತ್ತೇಜಿಸಲು ಪ್ರತಿಕ್ರಿಯೆ ವ್ಯವಸ್ಥೆಯೊಂದಿಗೆ ವಿನ್ಯಾಸಗೊಳಿಸಲಾಗಿದೆ ಎಂದರು.

ಐಐಟಿ ದೆಹಲಿಯ ನಿರ್ದೇಶಕ ಪ್ರೊ. ರಂಗನ್ ಬ್ಯಾನರ್ಜಿ ಮಾತನಾಡಿ, ಆದಿ ವಾಣಿಯು ಭಾಷೆಗಳು, ಸಂಸ್ಕೃತಿಗಳು ಮತ್ತು ಸಂಪ್ರದಾಯಗಳನ್ನು ಸಂರಕ್ಷಿಸಲು AI ಅನ್ನು ಹೇಗೆ ಪರಿಣಾಮಕಾರಿಯಾಗಿ ಬಳಸಬಹುದು ಎಂಬುದನ್ನು ಪ್ರದರ್ಶಿಸುತ್ತದೆ. ಇದು ಜನರ ಜೀವನದ ಮೇಲೆ ಅರ್ಥಪೂರ್ಣ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಬುಡಕಟ್ಟು ಸಮುದಾಯಗಳ ಏಳ್ಗೆಗೆ ಕೇಂದ್ರದಿಂದ ‘ಆದಿ ಕರ್ಮಯೋಗಿ’ ಆಂದೋಲನ; 20 ಲಕ್ಷ ಜನರ ತಂಡ ಅಖಾಡಕ್ಕೆ

ಆದಿ ವಾಣಿ ಎಂದರೇನು?:

ಆದಿ ವಾಣಿ ಕೇವಲ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಅನುವಾದ ಸಾಧನವಲ್ಲ. ಇದು ಸಮುದಾಯಗಳನ್ನು ಸಂಪರ್ಕಿಸಲು ಮತ್ತು ಸಾಂಸ್ಕೃತಿಕ ಗುರುತನ್ನು ಸಂರಕ್ಷಿಸಲು ಉತ್ತಮ ವೇದಿಕೆಯಾಗಿದೆ. ಈ ಉಪಕ್ರಮವು ಅಳಿವಿನಂಚಿನಲ್ಲಿರುವ ಭಾಷೆಗಳ ಡಿಜಿಟಲೀಕರಣಕ್ಕೆ ಸಹಾಯ ಮಾಡುತ್ತದೆ, ಜೊತೆಗೆ ಮಾತೃಭಾಷೆಯಲ್ಲಿ ಶಿಕ್ಷಣ, ಆರೋಗ್ಯ ಮತ್ತು ಆಡಳಿತದ ಪ್ರವೇಶವನ್ನು ಸುಧಾರಿಸುತ್ತದೆ. ಇದು ಬುಡಕಟ್ಟು ಉದ್ಯಮಶೀಲತೆಯನ್ನು ಉತ್ತೇಜಿಸುತ್ತದೆ ಮತ್ತು ಸಂಶೋಧಕರಿಗೆ ಜ್ಞಾನದ ಮೂಲವಾಗಿ ಕಾರ್ಯನಿರ್ವಹಿಸುತ್ತದೆ. ಐಐಟಿ ದೆಹಲಿ ನೇತೃತ್ವದ ರಾಷ್ಟ್ರೀಯ ಮಟ್ಟದ ತಂಡವು ಆದಿ ವಾಣಿ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ. ಈ ಮಿಷನ್ ಅನ್ನು ಬಿಟ್ಸ್ ಪಿಲಾನಿ, ಐಐಐಟಿ ಹೈದರಾಬಾದ್, ಐಐಐಟಿ ನವ ರಾಯ್‌ಪುರ ಮತ್ತು ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಮೇಘಾಲಯದ ಬುಡಕಟ್ಟು ಸಂಶೋಧನಾ ಸಂಸ್ಥೆಗಳ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ. ಆದಿ ವಾಣಿ – AI ವೆಬ್ ಪೋರ್ಟಲ್‌ನಲ್ಲಿ (https://adivaani.tribal.gov.in) ಲಭ್ಯವಿದೆ ಮತ್ತು ಅಪ್ಲಿಕೇಶನ್‌ನ ಬೀಟಾ ಆವೃತ್ತಿಯು ಶೀಘ್ರದಲ್ಲೇ ಪ್ಲೇ ಸ್ಟೋರ್ ಮತ್ತು iOSನಲ್ಲಿಯೂ ಲಭ್ಯವಿರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ