AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಜೀ ಭರವಸೆಯನ್ನು ಪೂರೈಸಿದ್ದಾರೆ: ಸಿಎಎ ಸ್ವಾಗತಿಸಿದ ಪಾಕ್ ಮಹಿಳೆ ಸೀಮಾ ಹೈದರ್

ಭಾರತ ಸರ್ಕಾರ ಇಂದು ನಮ್ಮ ದೇಶದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತಂದಿದೆ. ನಮಗೆ ತುಂಬಾ ಸಂತೋಷವಾಗಿದೆ. ಇದಕ್ಕಾಗಿ ಸರ್ಕಾರವನ್ನು ಅಭಿನಂದಿಸುತ್ತೇವೆ. ನಿಜ ಹೇಳಬೇಕೆಂದರೆ  ಮೋದಿ ಜೀ ಅವರು ವಾಗ್ದಾನ ಮಾಡಿದ್ದನ್ನು ಪೂರೈಸಿದ್ದಾರೆ. ನನ್ನ ಜೀವನದುದ್ದಕ್ಕೂ ನಾನು ಅವರಿಗೆ ಋಣಿಯಾಗಿರುತ್ತೇನೆ ಎಂದು ಪಾಕ್ ಮಹಿಳೆ ಸೀಮಾ ಹೈದರ್ ಹೇಳಿದ್ದಾರೆ.

ಮೋದಿ ಜೀ ಭರವಸೆಯನ್ನು ಪೂರೈಸಿದ್ದಾರೆ: ಸಿಎಎ ಸ್ವಾಗತಿಸಿದ ಪಾಕ್ ಮಹಿಳೆ ಸೀಮಾ ಹೈದರ್
ಸೀಮಾ ಹೈದರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Mar 12, 2024 | 2:09 PM

Share

ನೋಯ್ಡಾ  ಮಾರ್ಚ್ 12 : ಕಳೆದ ವರ್ಷ ತನ್ನ ನಾಲ್ಕು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ಈಗ ಗ್ರೇಟರ್ ನೋಯ್ಡಾದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ (Seema Haider)ಅವರು ಪೌರತ್ವ (ತಿದ್ದುಪಡಿ) ಕಾಯ್ದೆಯ ( Citizenship (Amendment) Act) ಅನುಷ್ಠಾನ ಕುರಿತು ಕೇಂದ್ರದ ಅಧಿಸೂಚನೆ ಕ್ರಮವನ್ನು ಶ್ಲಾಘಿಸಿದ್ದಾರೆ. ಹಿಂದೂ ಧರ್ಮ ಸ್ವೀಕರಿಸಿ ಗ್ರೇಟರ್ ನೋಯ್ಡಾ ನಿವಾಸಿ ಸಚಿನ್ ಮೀನಾ ಅವರನ್ನು ವಿವಾಹವಾಗಿದ್ದೇನೆ ಎಂದು ಹೇಳಿಕೊಳ್ಳುವ ಹೈದರ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದು, ಸಿಎಎ ಭಾರತೀಯ ಪೌರತ್ವವನ್ನು ಪಡೆಯಲು ಸಹಾಯ ಮಾಡುತ್ತದೆ ಎಂದಿದ್ದಾರೆ.

ಆದಾಗ್ಯೂ, ಡಿಸೆಂಬರ್ 31, 2014 ರ ಮೊದಲು ಭಾರತಕ್ಕೆ ಬಂದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಸಿಎಎ ಮೂಲಕ ಪೌರತ್ವ ನೀಡಲಾಗುತ್ತದೆ. ಆದಾಗ್ಯೂ,ಸೀಮಾ ಹೈದರ್ ಸಿಎಎ ನೇರ ಫಲಾನುಭವಿ ಆಗುವುದಿಲ್ಲ. ಭಾರತ ಸರ್ಕಾರ ಇಂದು ನಮ್ಮ ದೇಶದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತಂದಿದೆ. ನಮಗೆ ತುಂಬಾ ಸಂತೋಷವಾಗಿದೆ. ಇದಕ್ಕಾಗಿ ಸರ್ಕಾರವನ್ನು ಅಭಿನಂದಿಸುತ್ತೇವೆ. ನಿಜ ಹೇಳಬೇಕೆಂದರೆ  ಮೋದಿ ಜೀ ಅವರು ವಾಗ್ದಾನ ಮಾಡಿದ್ದನ್ನು ಪೂರೈಸಿದ್ದಾರೆ. ನನ್ನ ಜೀವನದುದ್ದಕ್ಕೂ ನಾನು ಅವರಿಗೆ ಋಣಿಯಾಗಿರುತ್ತೇನೆ. ನಾನು ಅವರಿಗೆ ಧನ್ಯವಾದ ಹೇಳುತ್ತಲೇ ಇರುತ್ತೇನೆ” ಎಂದು ವಿಡಿಯೊ ಸಂದೇಶದಲ್ಲಿ ಸೀಮಾ ಹೈದರ್ ಹೇಳಿದ್ದಾರೆ.

ಸೀಮಾ ಹೈದರ್ ವಿಡಿಯೊ

“ಈ ಸಂತೋಷದ ಸಂದರ್ಭದಲ್ಲಿ, ನನ್ನ ಸಹೋದರ ವಕೀಲ ಎ ಪಿ ಸಿಂಗ್ ಅವರ ಕೆಲಸಕ್ಕಾಗಿ ನಾನು ಅಭಿನಂದಿಸುತ್ತೇನೆ. ಏಕೆಂದರೆ ಈಗ ನನ್ನ ಪೌರತ್ವ ಸಂಬಂಧಿತ ಅಡೆತಡೆಗಳು ಈ ಕಾನೂನಿನೊಂದಿಗೆ ನಿವಾರಣೆಯಾಗುತ್ತವೆ” ಎಂದು ಹೇಳಿದ ಸೀಮಾ ಹೈದರ್ ಮಾತು ಮುಗಿಸುವ ಮುನ್ನ “ಜೈ ಶ್ರೀ ರಾಮ್” “ರಾಧೆ ರಾಧೆ” ಮತ್ತು “ಭಾರತ್ ಮಾತಾ ಕಿ ಜೈ” ಎಂದು ಘೋಷಣೆ ಕೂಗಿದ್ದಾರೆ.

ವಕೀಲ ಸಿಂಗ್ ಅವರು ಕೇಂದ್ರದ ಘೋಷಣೆಯನ್ನು ಶ್ಲಾಘಿಸಿದ್ದು, ಭಾರತದಲ್ಲಿ ಪೌರತ್ವ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ವಿವಿಧ ಧರ್ಮಗಳ ಜನರಿಗೆ ಈ ನಿರ್ಧಾರವು ಸಹಾಯ ಮಾಡುತ್ತದೆ ಎಂದು ಹೇಳಿದರು. “ಈ ದೇಶಗಳಲ್ಲಿ ಕಿರುಕುಳಕ್ಕೊಳಗಾದ ಮತ್ತು ಭಾರತದಲ್ಲಿ ಹೇಗೋ ಬದುಕು ಸಾಗಿಸಿದ ಜನರಿಗೆ ಇದು ದೊಡ್ಡ ದಿನವಾಗಿದೆ” ಎಂದು ಸಿಂಗ್ ಹೇಳಿದರು.

ಕಳೆದ ತಿಂಗಳು, ಸೀಮಾ ಹೈದರ್ ಅವರ ಪಾಕಿಸ್ತಾನಿ ಪತಿ ಗುಲಾಮ್ ಹೈದರ್ ತಮ್ಮ ನಾಲ್ಕು ಮಕ್ಕಳ ಪಾಲನೆಗಾಗಿ ಭಾರತೀಯ ವಕೀಲರನ್ನು ನೇಮಿಸಿಕೊಂಡಿದ್ದರು.

ಇದನ್ನೂ ಓದಿ: ಭಾರತೀಯ ಮುಸ್ಲಿಮರು ಸಿಎಎ ಸ್ವಾಗತಿಸಬೇಕು: ಅಖಿಲ ಭಾರತ ಮುಸ್ಲಿಂ ಜಮಾತ್ ಮುಖ್ಯಸ್ಥ

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಾಕೋಬಾಬಾದ್ ಮೂಲದ ಸೀಮಾ ಕಳೆದ ವರ್ಷ ಮೇ ತಿಂಗಳಲ್ಲಿ ತನ್ನ ಮಕ್ಕಳನ್ನು ಕರೆದುಕೊಂಡು ಕರಾಚಿಯಲ್ಲಿರುವ ತನ್ನ ಮನೆಯಿಂದ ನೇಪಾಳದ ಮೂಲಕ ಭಾರತಕ್ಕೆ ಪ್ರಯಾಣ ಬೆಳೆಸಿದ್ದಳು. ಗ್ರೇಟರ್ ನೋಯ್ಡಾದಲ್ಲಿ ಭಾರತೀಯ ಪ್ರಜೆ (ಈಗ ಅವರ ಪತಿ) ಸಚಿನ್ ಮೀನಾ ಅವರೊಂದಿಗೆ ವಾಸಿಸುತ್ತಿರುವುದನ್ನು ಭಾರತೀಯ ಅಧಿಕಾರಿಗಳು ಕಂಡುಕೊಂಡಾಗ ಸೀಮಾ ಸುದ್ದಿಯಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ