AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಜೀ ಭರವಸೆಯನ್ನು ಪೂರೈಸಿದ್ದಾರೆ: ಸಿಎಎ ಸ್ವಾಗತಿಸಿದ ಪಾಕ್ ಮಹಿಳೆ ಸೀಮಾ ಹೈದರ್

ಭಾರತ ಸರ್ಕಾರ ಇಂದು ನಮ್ಮ ದೇಶದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತಂದಿದೆ. ನಮಗೆ ತುಂಬಾ ಸಂತೋಷವಾಗಿದೆ. ಇದಕ್ಕಾಗಿ ಸರ್ಕಾರವನ್ನು ಅಭಿನಂದಿಸುತ್ತೇವೆ. ನಿಜ ಹೇಳಬೇಕೆಂದರೆ  ಮೋದಿ ಜೀ ಅವರು ವಾಗ್ದಾನ ಮಾಡಿದ್ದನ್ನು ಪೂರೈಸಿದ್ದಾರೆ. ನನ್ನ ಜೀವನದುದ್ದಕ್ಕೂ ನಾನು ಅವರಿಗೆ ಋಣಿಯಾಗಿರುತ್ತೇನೆ ಎಂದು ಪಾಕ್ ಮಹಿಳೆ ಸೀಮಾ ಹೈದರ್ ಹೇಳಿದ್ದಾರೆ.

ಮೋದಿ ಜೀ ಭರವಸೆಯನ್ನು ಪೂರೈಸಿದ್ದಾರೆ: ಸಿಎಎ ಸ್ವಾಗತಿಸಿದ ಪಾಕ್ ಮಹಿಳೆ ಸೀಮಾ ಹೈದರ್
ಸೀಮಾ ಹೈದರ್
ರಶ್ಮಿ ಕಲ್ಲಕಟ್ಟ
|

Updated on: Mar 12, 2024 | 2:09 PM

Share

ನೋಯ್ಡಾ  ಮಾರ್ಚ್ 12 : ಕಳೆದ ವರ್ಷ ತನ್ನ ನಾಲ್ಕು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ಈಗ ಗ್ರೇಟರ್ ನೋಯ್ಡಾದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ (Seema Haider)ಅವರು ಪೌರತ್ವ (ತಿದ್ದುಪಡಿ) ಕಾಯ್ದೆಯ ( Citizenship (Amendment) Act) ಅನುಷ್ಠಾನ ಕುರಿತು ಕೇಂದ್ರದ ಅಧಿಸೂಚನೆ ಕ್ರಮವನ್ನು ಶ್ಲಾಘಿಸಿದ್ದಾರೆ. ಹಿಂದೂ ಧರ್ಮ ಸ್ವೀಕರಿಸಿ ಗ್ರೇಟರ್ ನೋಯ್ಡಾ ನಿವಾಸಿ ಸಚಿನ್ ಮೀನಾ ಅವರನ್ನು ವಿವಾಹವಾಗಿದ್ದೇನೆ ಎಂದು ಹೇಳಿಕೊಳ್ಳುವ ಹೈದರ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದು, ಸಿಎಎ ಭಾರತೀಯ ಪೌರತ್ವವನ್ನು ಪಡೆಯಲು ಸಹಾಯ ಮಾಡುತ್ತದೆ ಎಂದಿದ್ದಾರೆ.

ಆದಾಗ್ಯೂ, ಡಿಸೆಂಬರ್ 31, 2014 ರ ಮೊದಲು ಭಾರತಕ್ಕೆ ಬಂದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಸಿಎಎ ಮೂಲಕ ಪೌರತ್ವ ನೀಡಲಾಗುತ್ತದೆ. ಆದಾಗ್ಯೂ,ಸೀಮಾ ಹೈದರ್ ಸಿಎಎ ನೇರ ಫಲಾನುಭವಿ ಆಗುವುದಿಲ್ಲ. ಭಾರತ ಸರ್ಕಾರ ಇಂದು ನಮ್ಮ ದೇಶದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತಂದಿದೆ. ನಮಗೆ ತುಂಬಾ ಸಂತೋಷವಾಗಿದೆ. ಇದಕ್ಕಾಗಿ ಸರ್ಕಾರವನ್ನು ಅಭಿನಂದಿಸುತ್ತೇವೆ. ನಿಜ ಹೇಳಬೇಕೆಂದರೆ  ಮೋದಿ ಜೀ ಅವರು ವಾಗ್ದಾನ ಮಾಡಿದ್ದನ್ನು ಪೂರೈಸಿದ್ದಾರೆ. ನನ್ನ ಜೀವನದುದ್ದಕ್ಕೂ ನಾನು ಅವರಿಗೆ ಋಣಿಯಾಗಿರುತ್ತೇನೆ. ನಾನು ಅವರಿಗೆ ಧನ್ಯವಾದ ಹೇಳುತ್ತಲೇ ಇರುತ್ತೇನೆ” ಎಂದು ವಿಡಿಯೊ ಸಂದೇಶದಲ್ಲಿ ಸೀಮಾ ಹೈದರ್ ಹೇಳಿದ್ದಾರೆ.

ಸೀಮಾ ಹೈದರ್ ವಿಡಿಯೊ

“ಈ ಸಂತೋಷದ ಸಂದರ್ಭದಲ್ಲಿ, ನನ್ನ ಸಹೋದರ ವಕೀಲ ಎ ಪಿ ಸಿಂಗ್ ಅವರ ಕೆಲಸಕ್ಕಾಗಿ ನಾನು ಅಭಿನಂದಿಸುತ್ತೇನೆ. ಏಕೆಂದರೆ ಈಗ ನನ್ನ ಪೌರತ್ವ ಸಂಬಂಧಿತ ಅಡೆತಡೆಗಳು ಈ ಕಾನೂನಿನೊಂದಿಗೆ ನಿವಾರಣೆಯಾಗುತ್ತವೆ” ಎಂದು ಹೇಳಿದ ಸೀಮಾ ಹೈದರ್ ಮಾತು ಮುಗಿಸುವ ಮುನ್ನ “ಜೈ ಶ್ರೀ ರಾಮ್” “ರಾಧೆ ರಾಧೆ” ಮತ್ತು “ಭಾರತ್ ಮಾತಾ ಕಿ ಜೈ” ಎಂದು ಘೋಷಣೆ ಕೂಗಿದ್ದಾರೆ.

ವಕೀಲ ಸಿಂಗ್ ಅವರು ಕೇಂದ್ರದ ಘೋಷಣೆಯನ್ನು ಶ್ಲಾಘಿಸಿದ್ದು, ಭಾರತದಲ್ಲಿ ಪೌರತ್ವ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ವಿವಿಧ ಧರ್ಮಗಳ ಜನರಿಗೆ ಈ ನಿರ್ಧಾರವು ಸಹಾಯ ಮಾಡುತ್ತದೆ ಎಂದು ಹೇಳಿದರು. “ಈ ದೇಶಗಳಲ್ಲಿ ಕಿರುಕುಳಕ್ಕೊಳಗಾದ ಮತ್ತು ಭಾರತದಲ್ಲಿ ಹೇಗೋ ಬದುಕು ಸಾಗಿಸಿದ ಜನರಿಗೆ ಇದು ದೊಡ್ಡ ದಿನವಾಗಿದೆ” ಎಂದು ಸಿಂಗ್ ಹೇಳಿದರು.

ಕಳೆದ ತಿಂಗಳು, ಸೀಮಾ ಹೈದರ್ ಅವರ ಪಾಕಿಸ್ತಾನಿ ಪತಿ ಗುಲಾಮ್ ಹೈದರ್ ತಮ್ಮ ನಾಲ್ಕು ಮಕ್ಕಳ ಪಾಲನೆಗಾಗಿ ಭಾರತೀಯ ವಕೀಲರನ್ನು ನೇಮಿಸಿಕೊಂಡಿದ್ದರು.

ಇದನ್ನೂ ಓದಿ: ಭಾರತೀಯ ಮುಸ್ಲಿಮರು ಸಿಎಎ ಸ್ವಾಗತಿಸಬೇಕು: ಅಖಿಲ ಭಾರತ ಮುಸ್ಲಿಂ ಜಮಾತ್ ಮುಖ್ಯಸ್ಥ

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಾಕೋಬಾಬಾದ್ ಮೂಲದ ಸೀಮಾ ಕಳೆದ ವರ್ಷ ಮೇ ತಿಂಗಳಲ್ಲಿ ತನ್ನ ಮಕ್ಕಳನ್ನು ಕರೆದುಕೊಂಡು ಕರಾಚಿಯಲ್ಲಿರುವ ತನ್ನ ಮನೆಯಿಂದ ನೇಪಾಳದ ಮೂಲಕ ಭಾರತಕ್ಕೆ ಪ್ರಯಾಣ ಬೆಳೆಸಿದ್ದಳು. ಗ್ರೇಟರ್ ನೋಯ್ಡಾದಲ್ಲಿ ಭಾರತೀಯ ಪ್ರಜೆ (ಈಗ ಅವರ ಪತಿ) ಸಚಿನ್ ಮೀನಾ ಅವರೊಂದಿಗೆ ವಾಸಿಸುತ್ತಿರುವುದನ್ನು ಭಾರತೀಯ ಅಧಿಕಾರಿಗಳು ಕಂಡುಕೊಂಡಾಗ ಸೀಮಾ ಸುದ್ದಿಯಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ