ಕನ್ಯಾಕುಮಾರಿಯಲ್ಲಿ 2 ದಿನ ಮೋದಿ ಧ್ಯಾನ: 2014, 2019ರಲ್ಲಿ ಚುನಾವಣಾ ಪ್ರಚಾರ ಮುಗಿಸಿ ಮೋದಿ ಎಲ್ಲಿಗೆ ಹೋಗಿದ್ರು?

ಮೇ 30 ರಂದು ಲೋಕಸಭಾ ಚುನಾವಣಾ ಪ್ರಚಾರ ಅಂತ್ಯಗೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ಕನ್ಯಾಕುಮಾರಿಗೆ ಭೇಟಿ ನೀಡಲಿದ್ದಾರೆ. ಇಲ್ಲಿ ಅವರು ಸ್ವಾಮಿ ವಿವೇಕಾನಂದರಿಗೆ ಗೌರವ ಸಲ್ಲಿಸಲು ನಿರ್ಮಿಸಲಾದ ಸ್ಮಾರಕ ರಾಕ್ ಸ್ಮಾರಕದಲ್ಲಿ ಧ್ಯಾನ ಮಾಡಲಿದ್ದಾರೆ. ಮೇ 30 ರ ಸಂಜೆಯಿಂದ ಜೂನ್ 1 ರ ಸಂಜೆಯವರೆಗೆ ಧ್ಯಾನ ಮಂಟಪದಲ್ಲಿ ಧ್ಯಾನ ಮಾಡಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಹಾಗಾದರೆ 2014 ಹಾಗೂ 2019ರಲ್ಲಿ ಚುನಾವಣಾ ಪ್ರಚಾರ ಮುಗಿದ ಬಳಿಕ ಮೋದಿ ಎಲ್ಲಿದ್ದರು ಎನ್ನುವ ಮಾಹಿತಿ ಇಲ್ಲಿದೆ.

ಕನ್ಯಾಕುಮಾರಿಯಲ್ಲಿ 2 ದಿನ ಮೋದಿ ಧ್ಯಾನ: 2014, 2019ರಲ್ಲಿ ಚುನಾವಣಾ ಪ್ರಚಾರ ಮುಗಿಸಿ ಮೋದಿ ಎಲ್ಲಿಗೆ ಹೋಗಿದ್ರು?
ನರೇಂದ್ರ ಮೋದಿ

Updated on: May 31, 2024 | 10:27 AM

ಲೋಕಸಭೆ ಚುನಾವಣೆ(Lok Sabha Election) ಯ ಏಳನೇ ಹಂತದ ಪ್ರಚಾರದ ಕೊನೆಯ ದಿನವಾದ ಮೇ 30 ರಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ತಮಿಳುನಾಡಿನ ಕನ್ಯಾಕುಮಾರಿ(Kanniyakumari)ಗೆ ಆಧ್ಯಾತ್ಮಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 1ರವರೆಗೆ ಪ್ರಧಾನಿ ಮೋದಿ ಇಲ್ಲಿಯೇ ಇರಲಿದ್ದಾರೆ. ಈ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಲಿದ್ದು, ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಧ್ಯಾನ ಮಾಡಲಿದ್ದಾರೆ. ಈ ಸ್ಥಳದ ಹೆಸರು ಧ್ಯಾನ ಮಂಟಪ, ಪ್ರಧಾನಿ ಮೋದಿ ಮೇ 30 ರ ಸಂಜೆಯಿಂದ ಜೂನ್ 1 ರ ಸಂಜೆಯವರೆಗೆ ಇಲ್ಲಿ ತಂಗುತ್ತಾರೆ ಮತ್ತು ಧ್ಯಾನ ಮಾಡುತ್ತಾರೆ.

ಮೇ 30 ಕೊನೆಯ ಹಂತದ ಚುನಾವಣಾ ಪ್ರಚಾರದ ಕೊನೆಯ ದಿನವಾಗಿದೆ. ಪ್ರಧಾನಿಯವರು ಈ ದಿನದಂದು ಬಿಡುವಿಲ್ಲದ ವೇಳಾಪಟ್ಟಿಯನ್ನು ಹೊಂದಿದ್ದಾರೆ. ಈ ದಿನ, ಪ್ರಧಾನಿ ಮೋದಿ ಪಂಜಾಬ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ಬಳಿಕ ತಮಿಳುನಾಡಿಗೆ ತೆರಳಲಿದ್ದಾರೆ. ಜೂನ್ 1 ರಂದು ದೇಶದ 57 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಇದಕ್ಕೂ ಮುನ್ನ ಎರಡೂ ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ಆಧ್ಯಾತ್ಮಿಕ ಪಯಣ ಕೈಗೊಂಡಿದ್ದರು.

ಕನ್ಯಾಕುಮಾರಿಯ ಈ ಸ್ಥಳದ ಪ್ರಾಮುಖ್ಯತೆ ಏನು?
ಇಲ್ಲಿರುವ ಬಂಡೆಯು ಸ್ವಾಮಿ ವಿವೇಕಾನಂದರ ಜೀವನದ ಒಂದು ಭಾಗವಾಗಿದೆ. ಜನರು ಸಾರನಾಥದಲ್ಲಿ ಆಳವಾದ ನಂಬಿಕೆಯನ್ನು ಹೊಂದಿದ್ದಾರೆ. ಗೌತಮ ಬುದ್ಧನ ಜೀವನದಲ್ಲಿ ಈ ಸ್ಥಳಕ್ಕೆ ವಿಶೇಷ ಮಹತ್ವವಿದೆ. ದೇಶಾದ್ಯಂತ ಸಂಚರಿಸಿದ ನಂತರ ಇಲ್ಲಿಗೆ ತಲುಪಿದರು. ಇಲ್ಲಿ ಮೂರು ದಿನ ತಪಸ್ಸು ಮಾಡಿ ಅಭಿವೃದ್ಧಿ ಹೊಂದಿದ ಭಾರತದ ಕನಸು ಕಂಡರು. ಇದೀಗ ಅದೇ ಸ್ಥಳದಲ್ಲಿ ಧ್ಯಾನ ಮಾಡಿ ಸ್ವಾಮಿ ವಿವೇಕಾನಂದರ ಅಭಿವೃದ್ಧಿ ಭಾರತವನ್ನು ಸಾಕಾರಗೊಳಿಸುವ ಬದ್ಧತೆಯನ್ನು ಪ್ರಧಾನಿ ಮೋದಿ ತೋರಿದ್ದಾರೆ.

ಮತ್ತಷ್ಟು ಓದಿ: PM Narendra Modi: ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿಯಿಂದ ಧ್ಯಾನ

ಭೌಗೋಳಿಕವಾಗಿಯೂ ಕನ್ಯಾಕುಮಾರಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಇದು ದೇಶದ ಪೂರ್ವ ಮತ್ತು ಪಶ್ಚಿಮ ಕರಾವಳಿಗಳು ಸಂಧಿಸುವ ಭಾರತದ ದಕ್ಷಿಣ ತುದಿಯಾಗಿದೆ. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವಾಗಿದೆ. ಈ ಸ್ಥಳಕ್ಕೆ ಹೋಗುವ ಮೂಲಕ ಪ್ರಧಾನಿ ಮೋದಿ ದೇಶಕ್ಕೆ ರಾಷ್ಟ್ರೀಯ ಏಕತೆಯ ಸಂಕೇತವನ್ನೂ ನೀಡುತ್ತಿದ್ದಾರೆ.ಎಲ್ಲ ಚುನಾವಣೆ ಮುಗಿದ ಮೇಲೆ ಪ್ರಧಾನಿ ಮೋದಿ ಇಲ್ಲಿಗೆ ಹೋಗುತ್ತಿದ್ದಾರೆ.

2014 ಹಾಗೂ 2019ರಲ್ಲಿ ಮೋದಿ ಎಲ್ಲಿಗೆ ಭೇಟಿ ನೀಡಿದ್ದರು?

ಈ ಭೇಟಿಯು ತಮಿಳುನಾಡಿನ ಬಗ್ಗೆ ಪ್ರಧಾನಿಯವರ ಹೃದಯದಲ್ಲಿರುವ ಆಳವಾದ ಬದ್ಧತೆ ಮತ್ತು ಪ್ರೀತಿಯನ್ನು ಪ್ರತಿಬಿಂಬಿಸುತ್ತದೆ. 2019 ರಲ್ಲಿ ಅವರು ಕೇದಾರನಾಥಕ್ಕೆ ಭೇಟಿ ನೀಡಿದ್ದರು, 2014 ರಲ್ಲಿ ಅವರು ಶಿವಾಜಿಯ ಪ್ರತಾಪಗಢಕ್ಕೆ ಭೇಟಿ ನೀಡಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:23 am, Wed, 29 May 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us