AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi Ki Guarantee: ವಿಶ್ವದ ಮೂರು ಅತಿದೊಡ್ಡ ಆರ್ಥಿಕತೆಗಳಲ್ಲೊಂದಾಗಲಿದೆ ಭಾರತ; ಇದು ಮೋದಿ ಗ್ಯಾರಂಟಿ ಎಂದ ಪ್ರಧಾನಿ

ನಮ್ಮ ಸರ್ಕಾರದ ಮುಂದಿನ ಅವಧಿಯಲ್ಲಿ ಅಭಿವೃದ್ಧಿಯು ಇನ್ನಷ್ಟು ವೇಗ ಪಡೆದುಕೊಳ್ಳಲಿದೆ. ಪರಿಣಾಮವಾಗಿ ದೇಶವು ವಿಶ್ವದ ಅಗ್ರ ಮೂರು ಅತಿದೊಡ್ಡ ಆರ್ಥಿಕತೆಗಳಲ್ಲೊಂದಾಗಲಿದೆ ಎಂದು ಮೋದಿ ಹೇಳಿದ್ದಾರೆ.

Modi Ki Guarantee: ವಿಶ್ವದ ಮೂರು ಅತಿದೊಡ್ಡ ಆರ್ಥಿಕತೆಗಳಲ್ಲೊಂದಾಗಲಿದೆ ಭಾರತ; ಇದು ಮೋದಿ ಗ್ಯಾರಂಟಿ ಎಂದ ಪ್ರಧಾನಿ
ದೆಹಲಿಯಲ್ಲಿ ಅಂತಾರಾಷ್ಟ್ರೀಯ ಪ್ರದರ್ಶನ ಹಾಗೂ ಸಮ್ಮೇಳನ ಕೇಂದ್ರದಲ್ಲಿ ಪ್ರಧಾನಿ ಮೋದಿ
ಗಣಪತಿ ಶರ್ಮಾ
|

Updated on: Jul 26, 2023 | 10:20 PM

Share

ನವದೆಹಲಿ: ‘ನಮ್ಮ ಸರ್ಕಾರದ ಮೂರನೇ ಅವಧಿಯಲ್ಲಿ ಭಾರತವು ವಿಶ್ವದ ಮೂರು ಅತಿದೊಡ್ಡ ಆರ್ಥಿಕತೆಗಳಲ್ಲಿ ಒಂದಾಗಿರಲಿದೆ. ಇದು ಎನ್​ಡಿಎ ಸರ್ಕಾರದ ಮೂರನೇ ಅವಧಿಗೆ ನಿಮಗೆ ಮೋದಿ ನೀಡುವ (Guarantee) ಗ್ಯಾರಂಟಿಯಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ದೆಹಲಿಯಲ್ಲಿ ಅಂತಾರಾಷ್ಟ್ರೀಯ ಪ್ರದರ್ಶನ ಹಾಗೂ ಸಮ್ಮೇಳನ ಕೇಂದ್ರ ‘ಭಾರತ್ವ ಮಂಟಪಂ’ ಅನ್ನು (IECC Complex) ಉದ್ಘಾಟನೆ ಮಾಡಿದ ನಂತರ ಮಾತನಾಡಿದ ಅವರು, ನಮ್ಮ ಸರ್ಕಾರದ ಮುಂದಿನ ಅವಧಿಯಲ್ಲಿ ಅಭಿವೃದ್ಧಿಯು ಇನ್ನಷ್ಟು ವೇಗ ಪಡೆದುಕೊಳ್ಳಲಿದೆ. ಪರಿಣಾಮವಾಗಿ ದೇಶವು ವಿಶ್ವದ ಅಗ್ರ ಮೂರು ಅತಿದೊಡ್ಡ ಆರ್ಥಿಕತೆಗಳಲ್ಲೊಂದಾಗಲಿದೆ. ಇದು ನಮ್ಮ ಸರ್ಕಾರದ ಮೂರನೇ ಅವಧಿಗೆ ನಿಮಗೆ ನೀಡುತ್ತಿರುವ ಗ್ಯಾರಂಟಿಯಾಗಿದೆ ಎಂದು ಹೇಳಿದರು.

ಸರ್ಕಾರದ ಕೆಲವು ಸಾಧನೆಗಳನ್ನು ಒತ್ತಿಹೇಳಿದ ಮೋದಿ, ಕಳೆದ 5 ವರ್ಷಗಳಲ್ಲಿ ದೇಶದಲ್ಲಿ 13.5 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಭಾರತದಲ್ಲಿ ತೀವ್ರ ಬಡತನ ಕೊನೆಗೊಳ್ಳುವ ಹಂತದಲ್ಲಿದೆ ಎಂದು ಅಂತಾರಾಷ್ಟ್ರೀಯ ಏಜೆನ್ಸಿಗಳು ಹೇಳುತ್ತಿವೆ. ಕಳೆದ 9 ವರ್ಷಗಳಲ್ಲಿ ಕೈಗೊಂಡ ನಿರ್ಧಾರಗಳು ಮತ್ತು ನೀತಿಗಳು ದೇಶವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯುತ್ತಿವೆ ಎಂಬುದನ್ನು ಇದು ತೋರಿಸುತ್ತದೆ ಎಂದು ಹೇಳಿದರು.

ಪ್ರತಿಪಕ್ಷಗಳ ವಿರುದ್ಧ ಮೋದಿ ವ್ಯಂಗ್ಯ

ಪ್ರತಿಪಕ್ಷಗಳ ವಿರುದ್ಧ ವ್ಯಂಗ್ಯವಾಡಿದ ಮೋದಿ, ಕೆಲವರು ಒಳ್ಳೆಯ ಕೆಲಸಗಳ ಬಗ್ಗೆ ನಕಾರಾತ್ಮಕ ಹೇಳಿಕೆಗಳನ್ನು ನೀಡುವ ಮತ್ತು ಅವುಗಳಿಗೆ ತಡೆಯೊಡ್ಡುವ ಪ್ರವೃತ್ತಿಯನ್ನು ಹೊಂದಿದ್ದಾರೆ ಎಂದು ಹೇಳಿದರು. ‘ಕರ್ತವ್ಯ ಪಥ’ ನಿರ್ಮಾಣವಾಗುತ್ತಿದ್ದಾಗ ಪತ್ರಿಕೆಗಳ ಮುಖಪುಟದಲ್ಲಿ ಬ್ರೇಕಿಂಗ್ ನ್ಯೂಸ್ ಆಗಿ ಹಲವು ವಿಷಯಗಳು ರಾರಾಜಿಸುತ್ತಿದ್ದವು. ಕೋರ್ಟುಗಳಲ್ಲಿಯೂ ಪ್ರಶ್ನಿಸಲಾಯಿತು. ಆಮೇಲೆ ನಿರ್ಮಾಣವಾದಾಗ ಅದೇ ಜನ ಚೆನ್ನಾಗಿದೆ ಎಂದರು.

ಇದನ್ನೂ ಓದಿ: 2027ಕ್ಕೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಭಾರತ: ವರದಿ

ತಮ್ಮ ಭಾಷಣದ ವೇಳೆ ಪ್ರಧಾನಿ ಮೋದಿ ಅವರು ಕಾರ್ಗಿಲ್ ವಿಜಯ್ ದಿವಸದ ಬಗ್ಗೆ ಪ್ರಸ್ತಾಪಿಸಿದರು ಮತ್ತು ಕಾರ್ಗಿಲ್ ಯುದ್ಧದ ವೀರರಿಗೆ ಗೌರವ ಸಲ್ಲಿಸಿದರು.

ಇಂದು ಕಾರ್ಗಿಲ್ ವಿಜಯ್ ದಿವಸ್ ಆಗಿದ್ದು, ದೇಶದ ಪಾಲಿಗೆ ಐತಿಹಾಸಿಕ ದಿನ. ದೇಶದ ಶತ್ರುಗಳನ್ನು ನಮ್ಮ ವೀರ ಪುತ್ರರು ಸೋಲಿಸಿದರು. ಕಾರ್ಗಿಲ್ ಯುದ್ಧದಲ್ಲಿ ಪ್ರಾಣ ತ್ಯಾಗ ಮಾಡಿದ ಪ್ರತಿಯೊಬ್ಬ ವೀರರಿಗೆ ನಾನು ಗೌರವ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು