AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi Mann Ki Baat: ಭಾರತದ ಶಕ್ತಿ ವಿವಿಧತೆಯಲ್ಲಿದೆ, ಯುವ ಸಂಗಮದ ಮಹತ್ವ ತಿಳಿಸಿದ ಪ್ರಧಾನಿ ಮೋದಿ

ಭಾರತದ ಶಕ್ತಿ ವಿವಿಧತೆಯಲ್ಲಿದೆ, ನಮ್ಮ ದೇಶದಲ್ಲಿ ನೋಡಬಹುದಾದ ಪ್ರದೇಶಗಳು, ಕಲಿಯಬಹುದಾದ ಸಂಸ್ಕೃತಿ, ಸಂಸ್ಕಾರ ತುಂಬಾ ಇದೆ.

Modi Mann Ki Baat: ಭಾರತದ ಶಕ್ತಿ ವಿವಿಧತೆಯಲ್ಲಿದೆ, ಯುವ ಸಂಗಮದ ಮಹತ್ವ ತಿಳಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ನಯನಾ ರಾಜೀವ್
|

Updated on: May 28, 2023 | 11:38 AM

Share

ಭಾರತದ ಶಕ್ತಿ ವಿವಿಧತೆಯಲ್ಲಿದೆ, ನಮ್ಮ ದೇಶದಲ್ಲಿ ನೋಡಬಹುದಾದ ಪ್ರದೇಶಗಳು, ಕಲಿಯಬಹುದಾದ ಸಂಸ್ಕೃತಿ, ಸಂಸ್ಕಾರ ತುಂಬಾ ಇದೆ. ಶಿಕ್ಷಣ ಸಚಿವಾಲಯವು ಆರಂಭಿಸಿರುವ ಯುವ ಸಂಗಮ ಕಾರ್ಯಕ್ರಮದಿಂದ ದೇಶದ ವಿವಿಧ ಭಾಗಗಳಲ್ಲಿರುವ ಯುವಕರು ಒಟ್ಟಿಗೆ ಸೇರಿ ತಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನು ವಿನಿಯಮ ಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಮನ್​ ಕಿ ಬಾತ್(Mann Ki Baat)​ನ 101ನೇ ಸಂಚಿಕೆಯಲ್ಲಿ ಮಾತನಾಡಿದರು.

ಯುವ ಸಂಗಮ ಕಾರ್ಯಕ್ರಮದಲ್ಲಿ ಯುವಕರು ತಮ್ಮ ರಾಜ್ಯವನ್ನು ಬಿಟ್ಟು ಬೇರೆ ರಾಜ್ಯಗಳಿಗೆ ಭೇಟಿ ನೀಡಲು ಅಲ್ಲಿಯ ಸಂಸ್ಕೃತಿ, ಆಹಾರ ಸೇರಿದಂತೆ ವಿವಿಧತೆಯನ್ನು ನೋಡಲು ಅವಕಾಶ ಮಾಡಿಕೊಡಲಾಯಿತು ಇದನ್ನು ಯುವಕರು ಜೀವನ ಪರ್ಯಂತ ಮರೆಯುವುದಿಲ್ಲ.

ತಮ್ಮ ಜಪಾನ್ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಕೆಲವು ದಿನಗಳ ಹಿಂದೆ ನಾನು ಜಪಾನ್‌ಗೆ ಹೋಗಿದ್ದೆ, ಅಲ್ಲಿ ಹಿರೋಷಿಮಾ ಶಾಂತಿ ಸ್ಮಾರಕಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿತು. ಅದೊಂದು ಭಾವನಾತ್ಮಕ ಕ್ಷಣ. ನಾವು ಇತಿಹಾಸದ ನೆನಪುಗಳನ್ನು ಉಳಿಸಿಕೊಂಡಾಗ, ಅದು ಮುಂದಿನ ಪೀಳಿಗೆಗೆ ಬಹಳಷ್ಟು ಸಹಾಯ ಮಾಡುತ್ತದೆ ಎಂದರು.

ಪ್ರಧಾನಿ ಮೋದಿ ಯುವ ಸಂಗಮ ಬಗ್ಗೆ ಪ್ರಸ್ತಾಪಿಸಿ, ಏಕ ಭಾರತ, ಶ್ರೇಷ್ಠ ಭಾರತ ಎಂಬ ಮನೋಭಾವಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದೇಶದಲ್ಲಿ ಇಂತಹದೊಂದು ವಿಶಿಷ್ಟ ಪ್ರಯತ್ನ ನಡೆದಿದೆ ಎಂದರು.

ಪ್ರಧಾನಮಂತ್ರಿಯವರು ಅರುಣಾಚಲ ಪ್ರದೇಶದ ಗ್ಯಾಮರ್ ನ್ಯೋಕುಮ್ ಜಿ ಅವರೊಂದಿಗೆ ಸಂವಾದ ನಡೆಸಿದರು. ಯುವ ಸಂಗಮದಲ್ಲಿ ನಿಮ್ಮ ಅನುಭವದ ಬಗ್ಗೆ ಬ್ಲಾಗ್ ಬರೆಯಿರಿ ಎಂದು ಪ್ರಧಾನಿ ಮೋದಿ ಹೇಳಿದರು.

ಇದರಿಂದ ದೇಶದ ಇತರ ಯುವ ಸ್ನೇಹಿತರಿಗೆ ಏಕ್ ಭಾರತ್ ಶ್ರೇಷ್ಠ ಭಾರತ್ ಯೋಜನೆ ಏನೆಂದು ತಿಳಿಯುತ್ತದೆ. ಯುವ ಸಂಗಮಕ್ಕೆ ಸಂಬಂಧಿಸಿದಂತೆ ಬಿಹಾರದ ವಿಶಾಖಾ ಸಿಂಗ್ ಅವರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ತನ್ನ ಅನುಭವದ ಬಗ್ಗೆ ಬ್ಲಾಗ್ ಬರೆಯಲು ವಿಶಾಖಾಳನ್ನು ಕೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?