AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi Mann Ki Baat: ಭಾರತದ ಶಕ್ತಿ ವಿವಿಧತೆಯಲ್ಲಿದೆ, ಯುವ ಸಂಗಮದ ಮಹತ್ವ ತಿಳಿಸಿದ ಪ್ರಧಾನಿ ಮೋದಿ

ಭಾರತದ ಶಕ್ತಿ ವಿವಿಧತೆಯಲ್ಲಿದೆ, ನಮ್ಮ ದೇಶದಲ್ಲಿ ನೋಡಬಹುದಾದ ಪ್ರದೇಶಗಳು, ಕಲಿಯಬಹುದಾದ ಸಂಸ್ಕೃತಿ, ಸಂಸ್ಕಾರ ತುಂಬಾ ಇದೆ.

Modi Mann Ki Baat: ಭಾರತದ ಶಕ್ತಿ ವಿವಿಧತೆಯಲ್ಲಿದೆ, ಯುವ ಸಂಗಮದ ಮಹತ್ವ ತಿಳಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ನಯನಾ ರಾಜೀವ್
|

Updated on: May 28, 2023 | 11:38 AM

Share

ಭಾರತದ ಶಕ್ತಿ ವಿವಿಧತೆಯಲ್ಲಿದೆ, ನಮ್ಮ ದೇಶದಲ್ಲಿ ನೋಡಬಹುದಾದ ಪ್ರದೇಶಗಳು, ಕಲಿಯಬಹುದಾದ ಸಂಸ್ಕೃತಿ, ಸಂಸ್ಕಾರ ತುಂಬಾ ಇದೆ. ಶಿಕ್ಷಣ ಸಚಿವಾಲಯವು ಆರಂಭಿಸಿರುವ ಯುವ ಸಂಗಮ ಕಾರ್ಯಕ್ರಮದಿಂದ ದೇಶದ ವಿವಿಧ ಭಾಗಗಳಲ್ಲಿರುವ ಯುವಕರು ಒಟ್ಟಿಗೆ ಸೇರಿ ತಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನು ವಿನಿಯಮ ಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಮನ್​ ಕಿ ಬಾತ್(Mann Ki Baat)​ನ 101ನೇ ಸಂಚಿಕೆಯಲ್ಲಿ ಮಾತನಾಡಿದರು.

ಯುವ ಸಂಗಮ ಕಾರ್ಯಕ್ರಮದಲ್ಲಿ ಯುವಕರು ತಮ್ಮ ರಾಜ್ಯವನ್ನು ಬಿಟ್ಟು ಬೇರೆ ರಾಜ್ಯಗಳಿಗೆ ಭೇಟಿ ನೀಡಲು ಅಲ್ಲಿಯ ಸಂಸ್ಕೃತಿ, ಆಹಾರ ಸೇರಿದಂತೆ ವಿವಿಧತೆಯನ್ನು ನೋಡಲು ಅವಕಾಶ ಮಾಡಿಕೊಡಲಾಯಿತು ಇದನ್ನು ಯುವಕರು ಜೀವನ ಪರ್ಯಂತ ಮರೆಯುವುದಿಲ್ಲ.

ತಮ್ಮ ಜಪಾನ್ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಕೆಲವು ದಿನಗಳ ಹಿಂದೆ ನಾನು ಜಪಾನ್‌ಗೆ ಹೋಗಿದ್ದೆ, ಅಲ್ಲಿ ಹಿರೋಷಿಮಾ ಶಾಂತಿ ಸ್ಮಾರಕಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿತು. ಅದೊಂದು ಭಾವನಾತ್ಮಕ ಕ್ಷಣ. ನಾವು ಇತಿಹಾಸದ ನೆನಪುಗಳನ್ನು ಉಳಿಸಿಕೊಂಡಾಗ, ಅದು ಮುಂದಿನ ಪೀಳಿಗೆಗೆ ಬಹಳಷ್ಟು ಸಹಾಯ ಮಾಡುತ್ತದೆ ಎಂದರು.

ಪ್ರಧಾನಿ ಮೋದಿ ಯುವ ಸಂಗಮ ಬಗ್ಗೆ ಪ್ರಸ್ತಾಪಿಸಿ, ಏಕ ಭಾರತ, ಶ್ರೇಷ್ಠ ಭಾರತ ಎಂಬ ಮನೋಭಾವಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದೇಶದಲ್ಲಿ ಇಂತಹದೊಂದು ವಿಶಿಷ್ಟ ಪ್ರಯತ್ನ ನಡೆದಿದೆ ಎಂದರು.

ಪ್ರಧಾನಮಂತ್ರಿಯವರು ಅರುಣಾಚಲ ಪ್ರದೇಶದ ಗ್ಯಾಮರ್ ನ್ಯೋಕುಮ್ ಜಿ ಅವರೊಂದಿಗೆ ಸಂವಾದ ನಡೆಸಿದರು. ಯುವ ಸಂಗಮದಲ್ಲಿ ನಿಮ್ಮ ಅನುಭವದ ಬಗ್ಗೆ ಬ್ಲಾಗ್ ಬರೆಯಿರಿ ಎಂದು ಪ್ರಧಾನಿ ಮೋದಿ ಹೇಳಿದರು.

ಇದರಿಂದ ದೇಶದ ಇತರ ಯುವ ಸ್ನೇಹಿತರಿಗೆ ಏಕ್ ಭಾರತ್ ಶ್ರೇಷ್ಠ ಭಾರತ್ ಯೋಜನೆ ಏನೆಂದು ತಿಳಿಯುತ್ತದೆ. ಯುವ ಸಂಗಮಕ್ಕೆ ಸಂಬಂಧಿಸಿದಂತೆ ಬಿಹಾರದ ವಿಶಾಖಾ ಸಿಂಗ್ ಅವರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ತನ್ನ ಅನುಭವದ ಬಗ್ಗೆ ಬ್ಲಾಗ್ ಬರೆಯಲು ವಿಶಾಖಾಳನ್ನು ಕೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು