AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi Mann Ki Baat: ಭಾರತದ ಶಕ್ತಿ ವಿವಿಧತೆಯಲ್ಲಿದೆ, ಯುವ ಸಂಗಮದ ಮಹತ್ವ ತಿಳಿಸಿದ ಪ್ರಧಾನಿ ಮೋದಿ

ಭಾರತದ ಶಕ್ತಿ ವಿವಿಧತೆಯಲ್ಲಿದೆ, ನಮ್ಮ ದೇಶದಲ್ಲಿ ನೋಡಬಹುದಾದ ಪ್ರದೇಶಗಳು, ಕಲಿಯಬಹುದಾದ ಸಂಸ್ಕೃತಿ, ಸಂಸ್ಕಾರ ತುಂಬಾ ಇದೆ.

Modi Mann Ki Baat: ಭಾರತದ ಶಕ್ತಿ ವಿವಿಧತೆಯಲ್ಲಿದೆ, ಯುವ ಸಂಗಮದ ಮಹತ್ವ ತಿಳಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ನಯನಾ ರಾಜೀವ್
|

Updated on: May 28, 2023 | 11:38 AM

Share

ಭಾರತದ ಶಕ್ತಿ ವಿವಿಧತೆಯಲ್ಲಿದೆ, ನಮ್ಮ ದೇಶದಲ್ಲಿ ನೋಡಬಹುದಾದ ಪ್ರದೇಶಗಳು, ಕಲಿಯಬಹುದಾದ ಸಂಸ್ಕೃತಿ, ಸಂಸ್ಕಾರ ತುಂಬಾ ಇದೆ. ಶಿಕ್ಷಣ ಸಚಿವಾಲಯವು ಆರಂಭಿಸಿರುವ ಯುವ ಸಂಗಮ ಕಾರ್ಯಕ್ರಮದಿಂದ ದೇಶದ ವಿವಿಧ ಭಾಗಗಳಲ್ಲಿರುವ ಯುವಕರು ಒಟ್ಟಿಗೆ ಸೇರಿ ತಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನು ವಿನಿಯಮ ಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಮನ್​ ಕಿ ಬಾತ್(Mann Ki Baat)​ನ 101ನೇ ಸಂಚಿಕೆಯಲ್ಲಿ ಮಾತನಾಡಿದರು.

ಯುವ ಸಂಗಮ ಕಾರ್ಯಕ್ರಮದಲ್ಲಿ ಯುವಕರು ತಮ್ಮ ರಾಜ್ಯವನ್ನು ಬಿಟ್ಟು ಬೇರೆ ರಾಜ್ಯಗಳಿಗೆ ಭೇಟಿ ನೀಡಲು ಅಲ್ಲಿಯ ಸಂಸ್ಕೃತಿ, ಆಹಾರ ಸೇರಿದಂತೆ ವಿವಿಧತೆಯನ್ನು ನೋಡಲು ಅವಕಾಶ ಮಾಡಿಕೊಡಲಾಯಿತು ಇದನ್ನು ಯುವಕರು ಜೀವನ ಪರ್ಯಂತ ಮರೆಯುವುದಿಲ್ಲ.

ತಮ್ಮ ಜಪಾನ್ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಕೆಲವು ದಿನಗಳ ಹಿಂದೆ ನಾನು ಜಪಾನ್‌ಗೆ ಹೋಗಿದ್ದೆ, ಅಲ್ಲಿ ಹಿರೋಷಿಮಾ ಶಾಂತಿ ಸ್ಮಾರಕಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿತು. ಅದೊಂದು ಭಾವನಾತ್ಮಕ ಕ್ಷಣ. ನಾವು ಇತಿಹಾಸದ ನೆನಪುಗಳನ್ನು ಉಳಿಸಿಕೊಂಡಾಗ, ಅದು ಮುಂದಿನ ಪೀಳಿಗೆಗೆ ಬಹಳಷ್ಟು ಸಹಾಯ ಮಾಡುತ್ತದೆ ಎಂದರು.

ಪ್ರಧಾನಿ ಮೋದಿ ಯುವ ಸಂಗಮ ಬಗ್ಗೆ ಪ್ರಸ್ತಾಪಿಸಿ, ಏಕ ಭಾರತ, ಶ್ರೇಷ್ಠ ಭಾರತ ಎಂಬ ಮನೋಭಾವಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದೇಶದಲ್ಲಿ ಇಂತಹದೊಂದು ವಿಶಿಷ್ಟ ಪ್ರಯತ್ನ ನಡೆದಿದೆ ಎಂದರು.

ಪ್ರಧಾನಮಂತ್ರಿಯವರು ಅರುಣಾಚಲ ಪ್ರದೇಶದ ಗ್ಯಾಮರ್ ನ್ಯೋಕುಮ್ ಜಿ ಅವರೊಂದಿಗೆ ಸಂವಾದ ನಡೆಸಿದರು. ಯುವ ಸಂಗಮದಲ್ಲಿ ನಿಮ್ಮ ಅನುಭವದ ಬಗ್ಗೆ ಬ್ಲಾಗ್ ಬರೆಯಿರಿ ಎಂದು ಪ್ರಧಾನಿ ಮೋದಿ ಹೇಳಿದರು.

ಇದರಿಂದ ದೇಶದ ಇತರ ಯುವ ಸ್ನೇಹಿತರಿಗೆ ಏಕ್ ಭಾರತ್ ಶ್ರೇಷ್ಠ ಭಾರತ್ ಯೋಜನೆ ಏನೆಂದು ತಿಳಿಯುತ್ತದೆ. ಯುವ ಸಂಗಮಕ್ಕೆ ಸಂಬಂಧಿಸಿದಂತೆ ಬಿಹಾರದ ವಿಶಾಖಾ ಸಿಂಗ್ ಅವರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ತನ್ನ ಅನುಭವದ ಬಗ್ಗೆ ಬ್ಲಾಗ್ ಬರೆಯಲು ವಿಶಾಖಾಳನ್ನು ಕೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್