Modi Mann Ki Baat: ಭಾರತದ ಶಕ್ತಿ ವಿವಿಧತೆಯಲ್ಲಿದೆ, ಯುವ ಸಂಗಮದ ಮಹತ್ವ ತಿಳಿಸಿದ ಪ್ರಧಾನಿ ಮೋದಿ

ಭಾರತದ ಶಕ್ತಿ ವಿವಿಧತೆಯಲ್ಲಿದೆ, ನಮ್ಮ ದೇಶದಲ್ಲಿ ನೋಡಬಹುದಾದ ಪ್ರದೇಶಗಳು, ಕಲಿಯಬಹುದಾದ ಸಂಸ್ಕೃತಿ, ಸಂಸ್ಕಾರ ತುಂಬಾ ಇದೆ.

Modi Mann Ki Baat: ಭಾರತದ ಶಕ್ತಿ ವಿವಿಧತೆಯಲ್ಲಿದೆ, ಯುವ ಸಂಗಮದ ಮಹತ್ವ ತಿಳಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ

Updated on: May 28, 2023 | 11:38 AM

ಭಾರತದ ಶಕ್ತಿ ವಿವಿಧತೆಯಲ್ಲಿದೆ, ನಮ್ಮ ದೇಶದಲ್ಲಿ ನೋಡಬಹುದಾದ ಪ್ರದೇಶಗಳು, ಕಲಿಯಬಹುದಾದ ಸಂಸ್ಕೃತಿ, ಸಂಸ್ಕಾರ ತುಂಬಾ ಇದೆ. ಶಿಕ್ಷಣ ಸಚಿವಾಲಯವು ಆರಂಭಿಸಿರುವ ಯುವ ಸಂಗಮ ಕಾರ್ಯಕ್ರಮದಿಂದ ದೇಶದ ವಿವಿಧ ಭಾಗಗಳಲ್ಲಿರುವ ಯುವಕರು ಒಟ್ಟಿಗೆ ಸೇರಿ ತಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನು ವಿನಿಯಮ ಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಮನ್​ ಕಿ ಬಾತ್(Mann Ki Baat)​ನ 101ನೇ ಸಂಚಿಕೆಯಲ್ಲಿ ಮಾತನಾಡಿದರು.

ಯುವ ಸಂಗಮ ಕಾರ್ಯಕ್ರಮದಲ್ಲಿ ಯುವಕರು ತಮ್ಮ ರಾಜ್ಯವನ್ನು ಬಿಟ್ಟು ಬೇರೆ ರಾಜ್ಯಗಳಿಗೆ ಭೇಟಿ ನೀಡಲು ಅಲ್ಲಿಯ ಸಂಸ್ಕೃತಿ, ಆಹಾರ ಸೇರಿದಂತೆ ವಿವಿಧತೆಯನ್ನು ನೋಡಲು ಅವಕಾಶ ಮಾಡಿಕೊಡಲಾಯಿತು ಇದನ್ನು ಯುವಕರು ಜೀವನ ಪರ್ಯಂತ ಮರೆಯುವುದಿಲ್ಲ.

ತಮ್ಮ ಜಪಾನ್ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಕೆಲವು ದಿನಗಳ ಹಿಂದೆ ನಾನು ಜಪಾನ್‌ಗೆ ಹೋಗಿದ್ದೆ, ಅಲ್ಲಿ ಹಿರೋಷಿಮಾ ಶಾಂತಿ ಸ್ಮಾರಕಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿತು. ಅದೊಂದು ಭಾವನಾತ್ಮಕ ಕ್ಷಣ. ನಾವು ಇತಿಹಾಸದ ನೆನಪುಗಳನ್ನು ಉಳಿಸಿಕೊಂಡಾಗ, ಅದು ಮುಂದಿನ ಪೀಳಿಗೆಗೆ ಬಹಳಷ್ಟು ಸಹಾಯ ಮಾಡುತ್ತದೆ ಎಂದರು.

ಪ್ರಧಾನಿ ಮೋದಿ ಯುವ ಸಂಗಮ ಬಗ್ಗೆ ಪ್ರಸ್ತಾಪಿಸಿ, ಏಕ ಭಾರತ, ಶ್ರೇಷ್ಠ ಭಾರತ ಎಂಬ ಮನೋಭಾವಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದೇಶದಲ್ಲಿ ಇಂತಹದೊಂದು ವಿಶಿಷ್ಟ ಪ್ರಯತ್ನ ನಡೆದಿದೆ ಎಂದರು.

ಪ್ರಧಾನಮಂತ್ರಿಯವರು ಅರುಣಾಚಲ ಪ್ರದೇಶದ ಗ್ಯಾಮರ್ ನ್ಯೋಕುಮ್ ಜಿ ಅವರೊಂದಿಗೆ ಸಂವಾದ ನಡೆಸಿದರು. ಯುವ ಸಂಗಮದಲ್ಲಿ ನಿಮ್ಮ ಅನುಭವದ ಬಗ್ಗೆ ಬ್ಲಾಗ್ ಬರೆಯಿರಿ ಎಂದು ಪ್ರಧಾನಿ ಮೋದಿ ಹೇಳಿದರು.

ಇದರಿಂದ ದೇಶದ ಇತರ ಯುವ ಸ್ನೇಹಿತರಿಗೆ ಏಕ್ ಭಾರತ್ ಶ್ರೇಷ್ಠ ಭಾರತ್ ಯೋಜನೆ ಏನೆಂದು ತಿಳಿಯುತ್ತದೆ. ಯುವ ಸಂಗಮಕ್ಕೆ ಸಂಬಂಧಿಸಿದಂತೆ ಬಿಹಾರದ ವಿಶಾಖಾ ಸಿಂಗ್ ಅವರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ತನ್ನ ಅನುಭವದ ಬಗ್ಗೆ ಬ್ಲಾಗ್ ಬರೆಯಲು ವಿಶಾಖಾಳನ್ನು ಕೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us