AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Executive Meeting: ಪ್ರಧಾನಿ ಮೋದಿ ದೆಹಲಿಯಲ್ಲಿ ಮೆಗಾ ರೋಡ್ ಶೋ, ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಮೆಗಾ ರೋಡ್ ಶೋ ನಡೆಸುತ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಪ್ರಮುಖ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ರೋಡ್ ಶೋ ನಡೆಸಲಾಗುತ್ತಿದೆ.

National Executive Meeting: ಪ್ರಧಾನಿ ಮೋದಿ ದೆಹಲಿಯಲ್ಲಿ ಮೆಗಾ ರೋಡ್ ಶೋ, ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಚಾಲನೆ
Modi
TV9 Web
| Edited By: |

Updated on:Jan 17, 2023 | 11:22 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಮೆಗಾ ರೋಡ್ ಶೋ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಪ್ರಮುಖ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ (National Executive Meeting) ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ರೋಡ್ ಶೋ ನಡೆಸಲಾಯಿತು. ಜೊತೆಗೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಚಾಲನೆ ನೀಡಿದರು. ಬಿಜೆಪಿ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ ರೋಡ್‌ಶೋಗೆ ಮುನ್ನ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇದೀಗ ರೋಡ್ ಶೋ ಮೂಲಕ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿದ್ದಾರೆ. ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಂದ್ರ ಸಚಿವರಾದ ರಾಜನಾಥ್​ ಸಿಂಗ್, ನಿತಿನ್​ ಗಡ್ಕರಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ದೀಪ ಬೆಳಗಿಸುವ ಮೂಲಕ ಸಭೆಗೆ ಚಾಲನೆ ನೀಡಿದ್ದಾರೆ.

ದೆಹಲಿ ಸಂಚಾರ ಪೊಲೀಸರು ವ್ಯಾಪಕ ಬಂದೋಬಸ್ತ್ ಮಾಡಿದ್ದಾರೆ. ಜಂತರ್ ಮಂತರ್ ರಸ್ತೆ, ಅಶೋಕ ರಸ್ತೆ ಮತ್ತು ಬಾಂಗ್ಲಾ ಸಾಹಿಬ್ ಲೇನ್ ಸೇರಿದಂತೆ ಎಂಟು ರಸ್ತೆಗಳನ್ನು ಸೋಮವಾರ ಸಂಜೆ 5 ಗಂಟೆಯವರೆಗೆ “ರೋಡ್ ಶೋಗಾಗಿ ಮಾಡಿದ ಸಂಚಾರ ವ್ಯವಸ್ಥೆಗಳ ಭಾಗವಾಗಿ” ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಲುಟ್ಯೆನ್ಸ್ ದೆಹಲಿಯಲ್ಲಿ ಸಂಚಾರದ ಮೇಲೆ ಪರಿಣಾಮ ಬೀರಲಿದೆ ಮತ್ತು ಪೊಲೀಸರು ಅಗತ್ಯ ತಿರುವುಗಳನ್ನು ಯೋಜಿಸಿದ್ದಾರೆ” ಎಂದು ಅಧಿಕಾರಿಗಳು ಹಿಂದಿನ HT ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿ:Modi Road Show: ಸೂರತ್​​ನಲ್ಲಿ ಪ್ರಧಾನಿ ರೋಡ್​​ ಶೋ; ರಸ್ತೆಯುದ್ದಕ್ಕೂ ಮೋದಿಗೆ ಜೈಕಾರ ಹಾಕಿ ಸ್ವಾಗತ

ಸೋಮವಾರ ಮಧ್ಯಾಹ್ನ 3 ಗಂಟೆಯಿಂದ ಪಟೇಲ್ ಚೌಕ್‌ನಿಂದ ಸಂಸದ್ ಮಾರ್ಗ್ ಮತ್ತು ಜೈ ಸಿಂಗ್ ರಸ್ತೆ ಜಂಕ್ಷನ್‌ವರೆಗೆ ಬಿಜೆಪಿ ರೋಡ್ ಶೋ ಆಯೋಜಿಸುತ್ತಿದೆ. ರೋಡ್ ಶೋ ನಡೆಯುವ ಮಾರ್ಗದ ಸುತ್ತಮುತ್ತಲಿನ ಪ್ರದೇಶದಲ್ಲಿ ವಿಶೇಷ ಟ್ರಾಫಿಕ್ ವ್ಯವಸ್ಥೆ ಮಾಡಲಾಗುವುದು ಎಂದು ದೆಹಲಿ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಕಳೆದ ವಾರ, ಪ್ರಧಾನಿಯವರು ಹುಬ್ಬಳ್ಳಿಯಲ್ಲಿ ರೋಡ್‌ಶೋ ನಡೆಸಿದ್ದರು, ಅಲ್ಲಿ ಯುವಕನೊಬ್ಬ ತನ್ನ ಕಡೆಗೆ ಧಾವಿಸುತ್ತಿರುವುದನ್ನು ಕಂಡು , ಅವರ ಭದ್ರತೆಯ ಬಗ್ಗೆ ಕಳವಳವನ್ನು ಉಂಟುಮಾಡಿತು. ಆದರೆ ನಂತರ ಪೊಲೀಸರು, ಈ ಘಟನೆಯನ್ನು ಭದ್ರತಾ ಲೋಪ ಎಂದು ಕರೆಯಲು ಸಾಧ್ಯವಿಲ್ಲ, ಏಕೆಂದರೆ ಎಲ್ಲರನ್ನೂ ಪರೀಕ್ಷಿಸಲಾಗಿದೆ ಮತ್ತು ಪರಿಶೀಲಿಸಲಾಗಿದೆ. ಆ ಬಾಲಕ ಮೂಲ ಯೋಜನೆಯ ಪ್ರಕಾರ ಪ್ರಧಾನಿಯನ್ನು ಬಳಿ ಬರಲು ಈ ಮೊದಲೇ ಅನುಮತಿಯನ್ನು ಹೊಂದಿದ್ದರು. ಆದರೆ ನಾವು ಪ್ರೋಟೋಕಾಲ್ ಪ್ರಕಾರ ಎಸ್‌ಪಿಜಿಗೆ ವರದಿಯನ್ನು ಸಲ್ಲಿಸುತ್ತೇವೆ ಎಂದು ಅಧಿಕಾರಿಯೊಬ್ಬರು ಈ ಹಿಂದೆ ಎಚ್‌ಟಿ ವರದಿಯಲ್ಲಿ ಹೇಳಿದ್ದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Mon, 16 January 23

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?