AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಂಗ ಮಾರ್ಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣೆಗೆ ಅಗತ್ಯ ನೆರವು ನೀಡಿದ ಮೋದಿ: ಜನರಲ್ ವಿಕೆ ಸಿಂಗ್

ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಂಭವಿಸಿದ ಸುರಂಗ ಮಾರ್ಗ ಕುಸಿತ ಪ್ರಕರಣ ಸಂಬಂಧ ಸುರಂಗದೊಳಗೆ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್, ಕಾರ್ಮಿಕರ ರಕ್ಷಣೆಗೆ ಬೇಕಾದ ಅಗತ್ಯ ನೆರವನ್ನು ಪ್ರಧಾನಿ ಮೋದಿ ಒದಗಿಸಿದ್ದಾರೆ ಎಂದರು.

ಸುರಂಗ ಮಾರ್ಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣೆಗೆ ಅಗತ್ಯ ನೆರವು ನೀಡಿದ ಮೋದಿ: ಜನರಲ್ ವಿಕೆ ಸಿಂಗ್
ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್
Follow us
Rakesh Nayak Manchi
|

Updated on: Nov 28, 2023 | 10:46 PM

ಉತ್ತರಕಾಶಿ, ನ.28: ಉತ್ತರಕಾಂಡದ ಉತ್ತರಕಾಶಿಯಲ್ಲಿ ಕುಸಿದ ಸುರಂಗ ಮಾರ್ಗದೊಳಗೆ ಸಿಲುಕಿದ್ದ ಕಾರ್ಮಿಕರ ರಕ್ಷಣೆಗೆ ಬೇಕಾದ ಎಲ್ಲಾ ನೆರವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಒದಗಿಸಿದ್ದಾರೆ ಎಂದು ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್ (General VK Singh) ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶಕ್ಕೆ ಏನು ಬೇಕೋ ಅದನ್ನು ಪ್ರಧಾನಿ ಒದಗಿಸಿದ್ದಾರೆ. ಇದುವರೆಗೆ ಯಾವ ಕಾರ್ಯಾಚರಣೆಗೂ ಸಿಗದ ಸಹಕಾರ, ಸಂಪನ್ಮೂಲ ಈ ಕಾರ್ಯಾಚರಣೆಗೆ ಸಿಕ್ಕಿದೆ ಎಂದರು.

ಉತ್ತರಕಾಶಿ ಡಿಸಿ ಅಭಿಷೇಕ್ ರುಹೇಲಾ ಮಾತನಾಡಿ, “ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎಲ್ಲಾ ಸಿಬ್ಬಂದಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಪ್ರಧಾನಿ ಮೋದಿ ಮತ್ತು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಕಾರ್ಯಾಚರಣೆ ವಿಚಾರವಾಗಿ ನಿರಂತವಾಗಿ ಸಂಪರ್ಕದಲ್ಲಿದ್ದರು. ಸಂಪನ್ಮೂಲಗಳನ್ನು ಕ್ರೋಢೀಕರಿಸುವಲ್ಲಿ ಯಾವುದೇ ಸಮಯವನ್ನು ವ್ಯರ್ಥ ಮಾಡಲಿಲ್ಲ. ಎಲ್ಲಾ ಕಾರ್ಮಿಕರು ಆರೋಗ್ಯವಂತರಾಗಿದ್ದು, ಅವರನ್ನು ಪ್ರಾಥಮಿಕ ನಿಗಾದಲ್ಲಿ ಇರಿಸಲಾಗುವುದು” ಎಂದರು.

ಇದನ್ನೂ ಓದಿ: ಉತ್ತರಾಖಂಡ ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಮಂದಿಯ ರಕ್ಷಣೆ: ಪ್ರಧಾನಿ ಮೋದಿ, ಸಚಿವ ನಿತಿನ್ ಗಡ್ಕರಿ ಅಭಿನಂದನೆ

ಯಶಸ್ವಿಯಾಗಿ ರಕ್ಷಿಸಲ್ಪಟ್ಟ 41 ಕಾರ್ಮಿಕರನ್ನು ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ವೈದ್ಯರು ನಿಗಾ ಇರಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ