ಸುರಂಗ ಮಾರ್ಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣೆಗೆ ಅಗತ್ಯ ನೆರವು ನೀಡಿದ ಮೋದಿ: ಜನರಲ್ ವಿಕೆ ಸಿಂಗ್

ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಂಭವಿಸಿದ ಸುರಂಗ ಮಾರ್ಗ ಕುಸಿತ ಪ್ರಕರಣ ಸಂಬಂಧ ಸುರಂಗದೊಳಗೆ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್, ಕಾರ್ಮಿಕರ ರಕ್ಷಣೆಗೆ ಬೇಕಾದ ಅಗತ್ಯ ನೆರವನ್ನು ಪ್ರಧಾನಿ ಮೋದಿ ಒದಗಿಸಿದ್ದಾರೆ ಎಂದರು.

ಸುರಂಗ ಮಾರ್ಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣೆಗೆ ಅಗತ್ಯ ನೆರವು ನೀಡಿದ ಮೋದಿ: ಜನರಲ್ ವಿಕೆ ಸಿಂಗ್
ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್
Rakesh Nayak Manchi

Updated on: Nov 28, 2023 | 10:46 PM

ಉತ್ತರಕಾಶಿ, ನ.28: ಉತ್ತರಕಾಂಡದ ಉತ್ತರಕಾಶಿಯಲ್ಲಿ ಕುಸಿದ ಸುರಂಗ ಮಾರ್ಗದೊಳಗೆ ಸಿಲುಕಿದ್ದ ಕಾರ್ಮಿಕರ ರಕ್ಷಣೆಗೆ ಬೇಕಾದ ಎಲ್ಲಾ ನೆರವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಒದಗಿಸಿದ್ದಾರೆ ಎಂದು ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್ (General VK Singh) ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶಕ್ಕೆ ಏನು ಬೇಕೋ ಅದನ್ನು ಪ್ರಧಾನಿ ಒದಗಿಸಿದ್ದಾರೆ. ಇದುವರೆಗೆ ಯಾವ ಕಾರ್ಯಾಚರಣೆಗೂ ಸಿಗದ ಸಹಕಾರ, ಸಂಪನ್ಮೂಲ ಈ ಕಾರ್ಯಾಚರಣೆಗೆ ಸಿಕ್ಕಿದೆ ಎಂದರು.

ಉತ್ತರಕಾಶಿ ಡಿಸಿ ಅಭಿಷೇಕ್ ರುಹೇಲಾ ಮಾತನಾಡಿ, “ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎಲ್ಲಾ ಸಿಬ್ಬಂದಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಪ್ರಧಾನಿ ಮೋದಿ ಮತ್ತು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಕಾರ್ಯಾಚರಣೆ ವಿಚಾರವಾಗಿ ನಿರಂತವಾಗಿ ಸಂಪರ್ಕದಲ್ಲಿದ್ದರು. ಸಂಪನ್ಮೂಲಗಳನ್ನು ಕ್ರೋಢೀಕರಿಸುವಲ್ಲಿ ಯಾವುದೇ ಸಮಯವನ್ನು ವ್ಯರ್ಥ ಮಾಡಲಿಲ್ಲ. ಎಲ್ಲಾ ಕಾರ್ಮಿಕರು ಆರೋಗ್ಯವಂತರಾಗಿದ್ದು, ಅವರನ್ನು ಪ್ರಾಥಮಿಕ ನಿಗಾದಲ್ಲಿ ಇರಿಸಲಾಗುವುದು” ಎಂದರು.

ಇದನ್ನೂ ಓದಿ: ಉತ್ತರಾಖಂಡ ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಮಂದಿಯ ರಕ್ಷಣೆ: ಪ್ರಧಾನಿ ಮೋದಿ, ಸಚಿವ ನಿತಿನ್ ಗಡ್ಕರಿ ಅಭಿನಂದನೆ

ಯಶಸ್ವಿಯಾಗಿ ರಕ್ಷಿಸಲ್ಪಟ್ಟ 41 ಕಾರ್ಮಿಕರನ್ನು ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ವೈದ್ಯರು ನಿಗಾ ಇರಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us