AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ, ಶಾ, ಜೇಬುಗಳ್ಳರು ಹೇಳಿಕೆ: ರಾಹುಲ್ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ನಿರ್ದೇಶನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ. ಜೇಬುಗಳ್ಳರ ಹೇಳಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್​​​​​ ಈ ಆದೇಶವನ್ನು ನೀಡಿದೆ.

ಮೋದಿ, ಶಾ, ಜೇಬುಗಳ್ಳರು ಹೇಳಿಕೆ: ರಾಹುಲ್ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ನಿರ್ದೇಶನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Dec 21, 2023 | 4:30 PM

Share

ದೆಹಲಿ, ಡಿ.21: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ. ಜೇಬುಗಳ್ಳರ ಹೇಳಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್​​​​​ ಈ ಆದೇಶವನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಉದ್ಯಮಿ ಗೌತಮ್ ಅದಾನಿಯನ್ನು ‘ಪಿಕ್‌ಪಾಕೆಟ್‌ಗಳು’ ಎಂದು ಹೇಳಿಕೆಯನ್ನು ನೀಡಿದರು. 8 ವಾರದ ಒಳಗಾಗಿ ಕ್ರಮ ಕೈಗೊಳ್ಳುವಂತೆ ಭಾರತ ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ಹೇಳಿಕೆಗಳು ಉತ್ತಮವಲ್ಲ, ಇದನ್ನು ಚುನಾವಣೆ ಸಮಯದಲ್ಲಿ ನೀಡಿರುವ ಕಾರಣ, ಈ ಬಗ್ಗೆ ಚುನಾವಣಾ ಆಯೋಗವೇ ಕ್ರಮ ಕೈಗೊಳ್ಳಬೇಕು. ಎಂಟು ವಾರದ ಒಳಗೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಿ. ಈ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಂದುವರಿಸುವುದಿಲ್ಲ. ಈ ಪ್ರಕರಣವನ್ನು ವಿಲೇವಾರಿ ಮಾಡಲಾಗಿದೆ ಎಂದು ಹೈಕೋರ್ಟ್​​​ ಸ್ಪಷ್ಟವಾಗಿ ಆದೇಶದಲ್ಲಿ ಹೇಳಿದೆ.

ರಾಹುಲ್​​​ ಗಾಂಧಿ ಅವರು ಚುನಾವಣೆ ಸಮಯದಲ್ಲಿ ನೀಡಿದ ಈ ಹೇಳಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ನವೆಂಬರ್ 23 ರಂದು ರಾಹುಲ್​​ ಅವರಿಗೆ ನೋಟಿಸ್​​​ ನೀಡಿದೆ. ನವೆಂಬರ್ 26 ರೊಳಗೆ ಉತ್ತರಿಸದಿದ್ದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿತ್ತು. ಇದೀಗ ಅವರು ಈ ನೋಟಿಸ್​​​ಗೆ ಉತ್ತರ ನೀಡದ ಕಾರಣ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್​​​​​​ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಪ್ರಧಾನಿ ನನ್ನನ್ನು ನಿಂದಿಸುತ್ತಾರೆ, ನಾನು ತಲೆಕೆಡಿಸಿಕೊಳ್ಳುವುದಿಲ್ಲ: ರಾಹುಲ್​​​ ಗಾಂಧಿ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ‘ಅತ್ಯಂತ ಹಿರಿಯ ನಾಯಕರಿಗೆ’ ಇಂತಹ ಭಾಷೆ ಬಳಸುವುದು ಸೂಕ್ತವಲ್ಲ ಎಂದು ಹೇಳಿದೆ. ಚುನಾವಣಾ ನೀತಿ ಸಂಹಿತೆಯ ಪ್ರಕಾರ, ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ದೃಢೀಕರಿಸದ ಆರೋಪಗಳನ್ನು ಮಾಡಲು ನಾಯಕರಿಗೆ ಅವಕಾಶವಿಲ್ಲ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Thu, 21 December 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ