AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Quit India Movement: ಕ್ವಿಟ್ ಇಂಡಿಯಾ ಚಳುವಳಿ ನೆನಪಿಗಾಗಿ ಮಹಾತ್ಮ ಗಾಂಧಿ ಫೋಟೋ ಹಂಚಿಕೊಂಡ ಮೋದಿ

ಪ್ರಧಾನಿ ಮೋದಿ ಅವರು ತಮ್ಮ ಟ್ವಿಟರ್​ನಲ್ಲಿ ಚಳವಳಿಯ ಬಗ್ಗೆ ನೆನಪಿಸಿದ್ದಾರೆ. ಆಂದೋಲನದಲ್ಲಿ ಸಮಾಜದ ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿತು ಎಂದರು. ಕ್ವಿಟ್ ಇಂಡಿಯಾ ಚಳವಳಿಯ ಆರಂಭದಲ್ಲಿ ಮಹಾತ್ಮ ಗಾಂಧಿಯವರ ಚಿತ್ರವನ್ನು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.

Quit India Movement: ಕ್ವಿಟ್ ಇಂಡಿಯಾ ಚಳುವಳಿ ನೆನಪಿಗಾಗಿ ಮಹಾತ್ಮ ಗಾಂಧಿ ಫೋಟೋ ಹಂಚಿಕೊಂಡ ಮೋದಿ
Quit India movement
TV9 Web
| Edited By: |

Updated on:Aug 09, 2022 | 2:46 PM

Share

ಕ್ವಿಟ್ ಇಂಡಿಯಾ ಚಳವಳಿಯ ನಡೆದ ಈ ದಿನದಂದು ಪ್ರಧಾನಿ ಮೋದಿ ಅವರು ತಮ್ಮ ಟ್ವಿಟರ್​ನಲ್ಲಿ ಚಳವಳಿಯ ಬಗ್ಗೆ ನೆನಪಿಸಿದ್ದಾರೆ. ಆಂದೋಲನದಲ್ಲಿ ಸಮಾಜದ ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿತು ಎಂದರು. ಕ್ವಿಟ್ ಇಂಡಿಯಾ ಚಳವಳಿಯ ಆರಂಭದಲ್ಲಿ ಮಹಾತ್ಮ ಗಾಂಧಿಯವರ ಚಿತ್ರವನ್ನು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ. ಬಾಪು ಅವರ ನೇತೃತ್ವದಲ್ಲಿ ಭಾರತ ಬಿಟ್ಟು ತೊಲಗಿ ಚಳುವಳಿಯಲ್ಲಿ ಭಾಗವಹಿಸಿ ನಮ್ಮ ಸ್ವಾತಂತ್ರ್ಯ ಹೋರಾಟವನ್ನು ಬಲಪಡಿಸಿದ ಎಲ್ಲರನ್ನು ಸ್ಮರಿಸುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಆಗಸ್ಟ್ 8, 1942 ರಂದು ಬಾಂಬೆ ಅಧಿವೇಶನದಲ್ಲಿ ಕ್ವಿಟ್ ಇಂಡಿಯಾ ಚಳುವಳಿಯನ್ನು ಪ್ರಾರಂಭಿಸಲಾಯಿತು. ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯನ್ನು ಕೊನೆಗೊಳಿಸುವುದು ಚಳವಳಿಯ ಉದ್ದೇಶವಾಗಿತ್ತು. ಬಾಂಬೆಯಲ್ಲಿ ಮಾಡಿದ ಕ್ವಿಟ್ ಇಂಡಿಯಾ ಭಾಷಣದಲ್ಲಿ ಗಾಂಧಿಯವರು “ಮಾಡು ಇಲ್ಲವೇ ಮಡಿ” ಎಂಬ ಘೋಷಣೆಯನ್ನು ನೀಡಿದರು. ಆಗಿನ ಬ್ರಿಟಿಷ್ ಸರ್ಕಾರವು ಕಾಂಗ್ರೆಸ್‌ನ ಉನ್ನತ ನಾಯಕರನ್ನು ಜೈಲಿಗೆ ಹಾಕುವ ಮೂಲಕ ಚಳವಳಿಯನ್ನು ಹತ್ತಿಕ್ಕಿಲ್ಲೂ ಪ್ರಯತ್ನಿಸಿದರೂ, ಆದರೆ ಅದಕ್ಕೆ ಬಲವಾದ ಪ್ರತಿರೋಧವಿತ್ತು.

ಆಗಸ್ಟ್ 9 ನಮ್ಮ ರಾಷ್ಟ್ರೀಯ ಕ್ರಾಂತಿಯ ಜ್ವಲಂತ ಸಂಕೇತವಾಗಿದೆ ಎಂಬ ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಅವರ ಹೇಳಿಕೆಯನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ. ಬಾಪು ಅವರಿಂದ ಪ್ರೇರಿತವಾದ ಕ್ವಿಟ್ ಇಂಡಿಯಾ ಚಳುವಳಿಯು ಜೆಪಿ ಮತ್ತು ಡಾ. ಲೋಹಿಯಾ ಅವರಂತಹ ಶ್ರೇಷ್ಠರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳ ಜನರ ಗಮನಾರ್ಹ ಭಾಗವಹಿಸುವಿಕೆಗೆ ಸಾಕ್ಷಿಯಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Published On - 2:46 pm, Tue, 9 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ