AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಉಪನಾಮ ಹೇಳಿಕೆ: ಪಾಟ್ನಾ ಹೈಕೋರ್ಟ್​ನಿಂದ ರಾಹುಲ್​ ಗಾಂಧಿಗೆ ರಿಲೀಫ್

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಗೆ ಪಾಟ್ನಾ ಹೈಕೋರ್ಟ್​ ರಿಲೀಫ್ ನೀಡಿದೆ. 

ಮೋದಿ ಉಪನಾಮ ಹೇಳಿಕೆ: ಪಾಟ್ನಾ ಹೈಕೋರ್ಟ್​ನಿಂದ ರಾಹುಲ್​ ಗಾಂಧಿಗೆ ರಿಲೀಫ್
ರಾಹುಲ್ ಗಾಂಧಿImage Credit source: Hindustan Times
ನಯನಾ ರಾಜೀವ್
|

Updated on:Apr 24, 2023 | 3:22 PM

Share

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ(Rahul Gandhi) ಗೆ ಪಾಟ್ನಾ ಹೈಕೋರ್ಟ್​ ರಿಲೀಫ್ ನೀಡಿದೆ. ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಿಲೀಫ್ ಸಿಕ್ಕಿದೆ. ಆದರೆ ಆರೋಪ ಒಂದೇ ಆದರೂ ಗುಜರಾತ್​ನ ಸೂರತ್ ಕೋರ್ಟ್​ನಲ್ಲಿರುವ ಪ್ರಕರಣಕ್ಕೂ ಇದಕ್ಕೂ ಸಂಬಂಧವಿಲ್ಲ. ಇನ್ನೊಂದು ಪ್ರಕರಣದಲ್ಲಿ ವಯನಾಡ್‌ ನ ಲೋಕಸಭಾ ಸಂಸದರಾದ ರಾಹುಲ್ ಗಾಂಧಿ ಅವರನ್ನು ಸೂರತ್‌ ನ ಕೆಳ ನ್ಯಾಯಾಲಯವು ಮಾರ್ಚ್ 23 ರಂದು ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅನರ್ಹಗೊಳಿಸಲಾಗಿತ್ತು.

2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.

ಮತ್ತಷ್ಟು ಓದಿ: ಮಾನನಷ್ಟ ಪ್ರಕರಣ: ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಅಲ್ಲದೆ, 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡವನ್ನು ವಿಧಿಸಿತ್ತು. ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿ, 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿತ್ತು.

ರಾಹುಲ್​  ಗಾಂಧಿ ಹೇಳಿಕೆಯಿಂದ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ, ದೂರು ದಾಖಲಿಸಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಗುಜರಾತ್​ನ ಸೂರತ್ ನ್ಯಾಯಾಲಯವು ಮಾರ್ಚ್ 23 ರಂದು ಮಹತ್ವದ ತೀರ್ಪು ನೀಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Mon, 24 April 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ