AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶ್ನೆಪತ್ರಿಕೆ ಸೋರಿಕೆ ಸಣ್ಣ ವಿಷಯವಲ್ಲ, ಕಠಿಣ ಕಾನೂನು ರೂಪಿಸ್ತೇವೆ: ತಡರಾತ್ರಿ ಸೆಲ್ಫಿ ವಿಡಿಯೋ ಮಾಡಿ ಮೋದಿ ಭರವಸೆ

ಪ್ರಶ್ನೆಪತ್ರಿಕೆ ಸೋರಿಕೆ ಗಂಭೀರ ಅಪರಾಧ ಎಂದ ಪ್ರಧಾನಿ ಮೋದಿ, ಈ ದಂಧೆಯಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಭರವಸೆ ನೀಡಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸಲು ಕೇಂದ್ರ ಸರ್ಕಾರವು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸಲು ಮತ್ತು ಹೊಸ ಕಠಿಣ ಕಾನೂನು ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಸಣ್ಣ ವಿಷಯವಲ್ಲ, ಕಠಿಣ ಕಾನೂನು ರೂಪಿಸ್ತೇವೆ: ತಡರಾತ್ರಿ ಸೆಲ್ಫಿ ವಿಡಿಯೋ ಮಾಡಿ ಮೋದಿ ಭರವಸೆ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Jul 24, 2026 | 7:34 AM

Share

ನವದೆಹಲಿ, ಜುಲೈ 24: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮದ ಕುರಿತು ಪ್ರಧಾನಿ ನರೇಂದ್ರ ಮೋದಿ(Narendra Modi) ವಿಡಿಯೋ ಸಂದೇಶದ ಮೂಲಕ ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಎನ್ನುವುದು ಸಾಮಾನ್ಯ ಅಥವಾ ಸಣ್ಣ ವಿಷಯವಲ್ಲ, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಪಡುವ ಕಷ್ಟ-ವೇದನೆ ನನಗೂ ಅರ್ಥವಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ತನ್ನ ಹೋರಾಟವನ್ನು ಇನ್ನಷ್ಟು ಬಿಗಿಗೊಳಿಸಿದೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಮತ್ತು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಶುಕ್ರವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮತ್ತಷ್ಟು ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆಯಾದ ಕಳೆದ ಎರಡೂವರೆ ತಿಂಗಳಿನಿಂದ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈ ದಂಧೆಯಲ್ಲಿ ಭಾಗಿಯಾಗಿದ್ದ ಮುಖ್ಯ ಅಪರಾಧಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಅವರು ಜೈಲಿನಲ್ಲಿದ್ದಾರೆ. ವಿದ್ಯಾರ್ಥಿಗಳ ಒಂದು ಶೈಕ್ಷಣಿಕ ವರ್ಷ ವ್ಯರ್ಥವಾಗಬಾರದು ಎಂಬುದು ಸರ್ಕಾರದ ಮೊದಲ ಆದ್ಯತೆಯಾಗಿತ್ತು. ಹೀಗಾಗಿ, ಸರ್ಕಾರ ತನ್ನ ಸಂಪೂರ್ಣ ಶಕ್ತಿಯನ್ನು ಬಳಸಿ ಅಲ್ಪಾವಧಿಯಲ್ಲೇ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ, ಜುಲೈ 19 ರಂದೇ ಫಲಿತಾಂಶವನ್ನು ಪ್ರಕಟಿಸಿದೆ.

ಮತ್ತಷ್ಟು ಓದಿ: ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಮೋದಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ:ಪ್ರಲ್ಹಾದ್ ಜೋಶಿ

ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳ ಕರಡು ಸಿದ್ಧ

ನಾವು ಕೇವಲ ಇಷ್ಟಕ್ಕೇ ತೃಪ್ತರಾಗುವವರಲ್ಲ ಎಂದಿರುವ ಪ್ರಧಾನಿ, ಅಕ್ರಮ ಎಸಗಿದವರಿಗೆ ಅತ್ಯಂತ ಶೀಘ್ರ ಹಾಗೂ ಕಠಿಣ ಶಿಕ್ಷೆ ವಿಧಿಸಲು ‘ಫಾಸ್ಟ್ ಟ್ರ್ಯಾಕ್ ನ್ಯಾಯಾಲಯ’ ಸ್ಥಾಪಿಸುವ ಕರಡು ಪ್ರಸ್ತಾಪವನ್ನು ಜಾರಿಗೆ ತರಲು ಇಲಾಖೆಗಳಿಗೆ ಸೂಚನೆ ನೀಡಿದ್ದರು. ತಡರಾತ್ರಿ ಇಲಾಖೆಗಳು ಈ ಕಾನೂನಿನ ಕರಡನ್ನು ಪ್ರಧಾನಿಯವರಿಗೆ ಹಸ್ತಾಂತರಿಸಿವೆ.

ಪ್ರಧಾನಿ ಮೋದಿ ವಿಡಿಯೋ

ಸಂಸತ್ತಿನಲ್ಲಿ ಮಸೂದೆ ಮಂಡನೆ

ಫಾಸ್ಟ್ ಟ್ರ್ಯಾಕ್ ಕೋರ್ಟ್ ಮತ್ತು ಕಠಿಣ ಶಿಕ್ಷೆಯ ಈ ಹೊಸ ಕರಡು ಮಸೂದೆಯ ಕುರಿತು ಕೇಂದ್ರ ಸಚಿವ ಸಂಪುಟ ಚರ್ಚಿಸಲಿದ್ದು, ಮುಂಗಾರು ಅಧಿವೇಶನದ ಎರಡನೇ ವಾರದಲ್ಲೇ ಈ ವಿಧೇಯಕವನ್ನು ಮಂಡಿಸಿ ಅಂಗೀಕರಿಸಲು ಪ್ರಯತ್ನಿಸಲಾಗುವುದು ಎಂದು ಪ್ರಧಾನಿ ಭರವಸೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:27 am, Fri, 24 July 26

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ