AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 21ರಂದು ಸಿಖ್ ಗುರು ತೇಗ್ ಬಹದ್ದೂರ್ ಜನ್ಮ ದಿನಾಚರಣೆ; ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಮೋದಿ

ಏಪ್ರಿಲ್ 21 ರಂದು ಸಿಖ್ ಗುರು ತೇಗ್ ಬಹದ್ದೂರ್ ಅವರ 400 ನೇ ಪ್ರಕಾಶ್ ಪುರಬ್‌ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ಸೋಮವಾರ ತಿಳಿಸಿದೆ.

ಏಪ್ರಿಲ್ 21ರಂದು ಸಿಖ್ ಗುರು ತೇಗ್ ಬಹದ್ದೂರ್ ಜನ್ಮ ದಿನಾಚರಣೆ; ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on:Apr 18, 2022 | 9:57 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಏಪ್ರಿಲ್ 21 ರಂದು ಸಿಖ್ ಗುರು ತೇಗ್ ಬಹದ್ದೂರ್ (Sikh guru Tegh Bahadur) ಅವರ 400 ನೇ ಪ್ರಕಾಶ್ ಪುರಬ್‌ (ಜನ್ಮ ದಿನಾಚರಣೆ) ಸಂದರ್ಭದಲ್ಲಿ (400th Parkash Purab) ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ಸೋಮವಾರ ತಿಳಿಸಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಈ ಶುಭ ಸಂದರ್ಭದಲ್ಲಿ ನಾಲ್ಕು ನೂರು ‘ರಾಗೀಸ್’ (ಸಿಖ್ ಸಂಗೀತಗಾರರು) ‘ಶಾಬಾದ್ ಕೀರ್ತನ್’ ನಲ್ಲಿ ಪ್ರದರ್ಶನ ನೀಡುತ್ತಾರೆ ಎಂದು ಸಚಿವಾಲಯ ತಿಳಿಸಿದೆ. ದೆಹಲಿಯ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯ ಸಹಯೋಗದೊಂದಿಗೆ ಸಂಸ್ಕೃತಿ ಸಚಿವಾಲಯವು ಕಾರ್ಯಕ್ರಮವನ್ನು ಆಯೋಜಿಸಲಿದೆ. ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ವಿದೇಶಗಳ ಹಲವಾರು ಪ್ರಮುಖ ವ್ಯಕ್ತಿಗಳು ಆಚರಣೆಯ ಭಾಗವಾಗಲಿದ್ದಾರೆ ಎಂದು ಅದು ಹೇಳಿದೆ. ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸಿಖ್ ಗುರು ತೇಗ್ ಬಹದ್ದೂರ್ ಅವರ 400 ನೇ ಪ್ರಕಾಶ್ ಪುರಬ್  ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.  ಏಪ್ರಿಲ್ 21 ರಂದು ಕೆಂಪು ಕೋಟೆಯಲ್ಲಿ ಸಿಖ್ ಗುರು ತೇಜ್ ಬಹದ್ದೂರ್ ಅವರ 400 ನೇ ಪ್ರಕಾಶ್ ಪುರಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ತಿಳಿಸಿದ್ದಾರೆ.

ಒಂಬತ್ತನೇ ಸಿಖ್ ಗುರು ಗುರು ತೇಗ್ ಬಹದ್ದೂರ್ ಸಾಹಿಬ್ ಅವರ 400 ನೇ ಪ್ರಕಾಶ್ ಗುರುಪುರಬ್ ಅವರ ಶುಭ ಸಂದರ್ಭದಲ್ಲಿ, ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಭಾರತ ಸರ್ಕಾರವು ಏಪ್ರಿಲ್ 20 ಮತ್ತು 21 ರಂದು ಕೆಂಪು ಕೋಟೆ ಆವರಣದಲ್ಲಿ ಭವ್ಯವಾದ ಕಾರ್ಯಕ್ರಮವನ್ನು ಆಯೋಜಿಸಲಿದೆ.

ಕಳೆದ ಏಪ್ರಿಲ್‌ನಲ್ಲಿ, 400 ನೇ ಪ್ರಕಾಶ್ ಪುರಬ್ ಆಚರಣೆಯ ಕುರಿತು ಚರ್ಚಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಮೋದಿ, ಗುರು ತೇಗ್ ಬಹದ್ದೂರ್ ಅವರ ಜೀವನದ ಹಂತಗಳನ್ನು ತಿಳಿದುಕೊಳ್ಳುವುದು ಮತ್ತು ಅರ್ಥಮಾಡಿಕೊಳ್ಳುವುದು ರಾಷ್ಟ್ರದ ಹೊಸ ಪೀಳಿಗೆಗೆ ಮುಖ್ಯವಾಗಿದೆ ಎಂದು ಹೇಳಿದ್ದರು.

ಏಪ್ರಿಲ್ 20 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಮೊದಲ ದಿನ ಲೈಟ್ ಶೋ ಮತ್ತು ‘ಕೀರ್ತನೆ’ ಆಯೋಜಿಸಲಾಗಿದೆ. ಗುರು ತೇಗ್ ಬಹದ್ದೂರ್ ಅವರು ಸಿಖ್ ಧರ್ಮದ ಒಂಬತ್ತನೇ ಗುರು (ಏಪ್ರಿಲ್ 1, 1621-ನವೆಂಬರ್ 11, 1675) ಆಗಿದ್ದಾರೆ.

ಇದನ್ನೂ ಓದಿ: Electricity shortage ಈ ಬೇಸಿಗೆಯಲ್ಲಿ ಭಾರತದಲ್ಲಿ ವಿದ್ಯುತ್ ಕೊರತೆಯುಂಟಾಗುತ್ತಿರುವುದಕ್ಕೆ ಕಾರಣಗಳೇನು?

Published On - 8:07 pm, Mon, 18 April 22