AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi@20: ಶೀಘ್ರದಲ್ಲೇ ಬರಲಿದೆ ಪ್ರಧಾನಿ ಮೋದಿಯವರ 20 ವರ್ಷಗಳ ರಾಜಕೀಯ ಪಯಣದ ಪುಸ್ತಕ

Modi@20 ಎಂಬ ಈ ಪುಸ್ತಕವು ಮೋದಿಯವರು ಗುಜರಾತ್ ಸಿಎಂ ಆಗಿದ್ದ ಅವಧಿಯಿಂದ ಹಿಡಿದು ಭಾರತದ ಪ್ರಧಾನಿ ಆಗುವವರೆಗೆ ಅಂದರೆ ಮೋದಿಯವರ ಕಳೆದ 20 ವರ್ಷಗಳ ರಾಜಕೀಯ ಜೀವನದ ಪಯಣವನ್ನು ವಿವರಿಸುತ್ತದೆ.

Modi@20: ಶೀಘ್ರದಲ್ಲೇ ಬರಲಿದೆ ಪ್ರಧಾನಿ ಮೋದಿಯವರ 20 ವರ್ಷಗಳ ರಾಜಕೀಯ ಪಯಣದ ಪುಸ್ತಕ
ಪುಸ್ತಕದ ಮುಖಪುಟ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Mar 15, 2022 | 3:12 PM

Share

ದೆಹಲಿ : 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಯಶಸ್ಸನ್ನು ಕಂಡ ನಂತರ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜೀವನದ ಬಗ್ಗೆ ಪುಸ್ತಕ ಬಿಡುಗಡೆ ಮಾಡಲು ಸಜ್ಜಾಗಿದೆ. Modi@20 ಎಂಬ ಈ ಪುಸ್ತಕವು ಮೋದಿಯವರು ಗುಜರಾತ್ ಸಿಎಂ ಆಗಿದ್ದ ಅವಧಿಯಿಂದ ಹಿಡಿದು ಭಾರತದ ಪ್ರಧಾನಿ ಆಗುವವರೆಗೆ ಅಂದರೆ ಮೋದಿಯವರ ಕಳೆದ 20 ವರ್ಷಗಳ ರಾಜಕೀಯ ಜೀವನದ ಪಯಣವನ್ನು ವಿವರಿಸುತ್ತದೆ. ಕಳೆದ 20 ವರ್ಷಗಳು ನರೇಂದ್ರ ಮೋದಿಯವರಿಗೆ ಬಹಳ ಮಹತ್ತರವಾದುದಾಗಿದೆ. ಅವರು 2002 ರಲ್ಲಿ ಗುಜರಾತ್‌ನ (Gujrat) ಆಡಳಿತವನ್ನು ವಹಿಸಿಕೊಂಡರು. 2014 ರಿಂದ ಸುಮಾರು 8 ವರ್ಷಗಳಿಂದ ರಾಷ್ಟ್ರವನ್ನು ಮುನ್ನಡೆಸುತ್ತಿದ್ದಾರೆ. ಈ ಪುಸ್ತಕವು ಕಳೆದ 20 ವರ್ಷಗಳಲ್ಲಿ ನರೇಂದ್ರ ಮೋದಿಯವರು ರೂಪಿಸಿದ ಮತ್ತು ಜಾರಿಗೆ ತಂದ ಆಡಳಿತದ ಮಾದರಿಯನ್ನು ಎತ್ತಿ ತೋರಿಸುವ ಮತ್ತು ಪ್ರದರ್ಶಿಸುವ ಪ್ರಯತ್ನವಾಗಿದೆ. ಬುದ್ದಿಜೀವಿಗಳು ಮತ್ತು ತಜ್ಞರು ಬರೆದಿರುವ ತುಣುಕುಗಳ ಸಂಕಲನವಾಗಿರುವ ಈ ಪುಸ್ತಕವು, ಪ್ರಧಾನಿ ಮೋದಿಯವರ ಅನನ್ಯ ಆಡಳಿತ ಮಾದರಿಯ ಖಾತೆಯಲ್ಲಿ ಕಳೆದ 20 ವರ್ಷಗಳಲ್ಲಿ ಗುಜರಾತ್ ಮತ್ತು ದೇಶದ ಮೂಲಭೂತ ಪರಿವರ್ತನೆಯ ಮೇಲೆ ಬೆಳಕು ಚೆಲ್ಲುತ್ತದೆ. ಪುಸ್ತಕವನ್ನು ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್ ಸಂಪಾದಿಸಿದೆ. ಇದು ಮುಂದಿನ ತಿಂಗಳಿನಿಂದ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.ಈ ಲಿಂಕ್‌ನಲ್ಲಿ ಪುಸ್ತಕವನ್ನು ಪ್ರೀ ಆರ್ಡರ್ ಮಾಡಬಹುದು ಎಂದು ರೂಪಾ ಪಬ್ಲಿಕೇಷನ್ಸ್ ಟ್ವೀಟ್ ಮಾಡಿದೆ.

5 ದಶಕಗಳ ಸಕ್ರಿಯ ರಾಜಕೀಯ ಜೀವನದಲ್ಲಿ ಪ್ರಧಾನಿ ಮೋದಿಯವರ ಜನಪ್ರಿಯತೆಗೆ ಹೆಚ್ಚಿದೆ. ಅದು ಅವರ ತವರು ರಾಜ್ಯ ಗುಜರಾತ್ ಆಗಿರಲಿ, ಇಡೀ ದೇಶವೇ ಅಥವಾ ಅಂತರಾಷ್ಟ್ರೀಯ ಮಟ್ಟದಲ್ಲಿ, ಅವರು ಜಾಗತಿಕ ಖ್ಯಾತಿಯನ್ನು ಹೊಂದಿರುವ ನಾಯಕರಾಗಿದ್ದಾರೆ. ಅನುಮೋದಿತ ರೇಟಿಂಗ್‌ಗಳಲ್ಲಿ ಎಲ್ಲಾ ವಿಶ್ವ ನಾಯಕರನ್ನು ವರ್ಷದಿಂದ ವರ್ಷಕ್ಕೆ ಹಿಂದಿಕ್ಕಿದ ಏಕೈಕ ಭಾರತೀಯ ನಾಯರಾಗಿದ್ದಾರೆ ಮೋದಿ.

ಇದನ್ನ ಓದಿ: ಉದ್ಯೋಗ ಸೃಷ್ಟಿಸುವುದರ ಜತೆ ಸ್ವಾವಲಂಬಿ ಭಾರತಕ್ಕಾಗಿ ಗ್ರಾಮ ಆರ್ಥಿಕತೆ ನಿರ್ಮಿಸಲು ಯೋಜನೆ ರೂಪಿಸಿದ ಆರ್​​ಎಸ್ಎಸ್

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ