AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modipara vs Didir Doot: ಪಶ್ಚಿಮ ಬಂಗಾಳದಲ್ಲಿ ಆ್ಯಪ್​ ಫೈಟ್​! ಬಿಡುಗಡೆ ಆಯ್ತು ಮೋದಿ-ಮಮತಾ ಅಪ್ಲಿಕೇಶ್​​ನಗಳು!

ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿರುವ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕರು​,ಕಾರ್ಯಕರ್ತರು ಆ್ಯಪ್​ ಡೌನ್​ಲೋಡ್​ ಮಾಡುವಂತೆ ಕೋರುತ್ತಿದ್ದಾರೆ.

Modipara vs Didir Doot: ಪಶ್ಚಿಮ ಬಂಗಾಳದಲ್ಲಿ ಆ್ಯಪ್​ ಫೈಟ್​! ಬಿಡುಗಡೆ ಆಯ್ತು ಮೋದಿ-ಮಮತಾ ಅಪ್ಲಿಕೇಶ್​​ನಗಳು!
ನರೇಂದ್ರ ಮೋದಿ ಮತ್ತು ಮಮತಾ ಬ್ಯಾನರ್ಜಿ
ರಾಜೇಶ್ ದುಗ್ಗುಮನೆ
|

Updated on:Feb 15, 2021 | 2:13 PM

Share

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಅಧಿಕಾರಕ್ಕೇರಿದ ನಂತರ ಡಿಜಿಟಲ್​ ಇಂಡಿಯಾದ ಕನಸನ್ನು ಜನರ ಮುಂದಿಟ್ಟರು. ಅದರ ಪರಿಣಾಮವಾಗಿ ಇಂದು ನಿಧಾನವಾಗಿ ಭಾರತ ಡಿಜಿಟಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಅಂತಯೇ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ಚುನಾವಣೆಯ ಪ್ರಚಾರಕ್ಕೆ ಡಿಜಿಟಲೀಕರಣದ ಆಯಾಮ ನೀಡಿದ್ದಾರೆ. ಮೋದಿ, ಮೋದಿಪರ (ಮೋದಿಯ ನೆರೆಹೊರೆಯವರು) ಆ್ಯಪ್​ ಬಿಡುಗಡೆ ಮಾಡಿದ್ದಾರೆ. ಇದು ಮಮತಾ ಬ್ಯಾನರ್ಜಿ ಬಿಡುಗಡೆ ಮಾಡಿರುವ, ದೀದಿರ್ ದೂತ್​ (ದಿದಿಯ ಮೆಸೆಂಜರ್) ಆ್ಯಪ್​​ಗೆ ಕೌಂಟರ್​ ಎನ್ನಲಾಗುತ್ತಿದೆ.

ಡಿಜಿಟಲೀಕರಣದ ಮಂತ್ರ ಪಠಿಸುತ್ತಾ ಮಮತಾ ಬ್ಯಾನರ್ಜಿ ಫೆಬ್ರವರಿ 4ರಂದು ದೀದಿರ್ ದೂತ್​ ಆ್ಯಪ್​ ರಿಲೀಸ್​ ಮಾಡಿದ್ದರು. ಮೂರು ದಿನಗಳ ಹಿಂದೆ ಅಮಿತ್​ ಶಾ ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಈ ವೇಳೆ ಮೋದಿಪರ ಆ್ಯಪ್​   ಬಿಡುಗಡೆ ಮಾಡಿದ್ದರು.

ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿರುವ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕರು​,ಕಾರ್ಯಕರ್ತರು ಆ್ಯಪ್​ ಡೌನ್​ಲೋಡ್​ ಮಾಡುವಂತೆ ಕೋರುತ್ತಿದ್ದಾರೆ. ಅಷ್ಟೇ ಅಲ್ಲ, ಈ ಆ್ಯಪ್​ನ ವಿಶೇಷತೆ ಹಾಗೂ ಆ್ಯಪ್​ ಬಳಕೆ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಹೀಗಾಗಿ, ಕೆಲವೇ ದಿನಗಳಲ್ಲಿ ಈ ಆ್ಯಪ್​ಗಳು ಲಕ್ಷಾಂತರ ಡೌನ್​ಲೋಡ್​ ಕಂಡಿವೆ.

ಇದನ್ನೂ ಓದಿ:  ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ಐದು ರೂಪಾಯಿ ಊಟ, ‘ಮಾ’ ಯೋಜನೆ ಜಾರಿಗೆ ತಂದ ಮಮತಾ

ರಾಜಕೀಯ ಪಂಡಿತ ಪ್ರಶಾಂತ್​ ಕಿಶೋರ್​ ಈ ಬಾರಿ ಟಿಎಂಸಿ ಪ್ರಚಾರಕ್ಕೆ ತಂತ್ರಗಾರಿಕೆ ರೂಪಿಸಿದ್ದಾರೆ. ಅವರು ಈ ಆ್ಯಪ್​ ಐಡಿಯಾದ ಜನಕ. ಈಗ ಬಿಜೆಪಿ ಕೂಡ ತಾವೇನು ಹಿಂದೆ ಬಿದ್ದಿಲ್ಲ ಎನ್ನುವ ರೀತಿಯಲ್ಲಿ ಆ್ಯಪ್​ ಪರಿಚಯಿಸಿದೆ.

ಪಶ್ಚಿಮ ಬಂಗಾಳ ಚುನಾವಣೆಗೂ ಮೊದಲೇ  ಮಮತಾಗೆ ಶಾಕ್​ ಮೇಲೆ ಶಾಕ್​ ಉಂಟಾಗುತ್ತಿದೆ. ಟಿಎಂಸಿ ಸಾಕಷ್ಟು ನಾಯಕರು ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಇದು ಮಮತಾಗೆ ಭಾರೀ ಹಿನ್ನಡೆ ಉಂಟು ಮಾಡುತ್ತಿದೆ.

Published On - 2:10 pm, Mon, 15 February 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ