Sign In

By signing in or creating an account, you agree with Associated Broadcasting Company's Terms & Conditions and Privacy Policy.

Modipara vs Didir Doot: ಪಶ್ಚಿಮ ಬಂಗಾಳದಲ್ಲಿ ಆ್ಯಪ್​ ಫೈಟ್​! ಬಿಡುಗಡೆ ಆಯ್ತು ಮೋದಿ-ಮಮತಾ ಅಪ್ಲಿಕೇಶ್​​ನಗಳು!

ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿರುವ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕರು​,ಕಾರ್ಯಕರ್ತರು ಆ್ಯಪ್​ ಡೌನ್​ಲೋಡ್​ ಮಾಡುವಂತೆ ಕೋರುತ್ತಿದ್ದಾರೆ.

Modipara vs Didir Doot: ಪಶ್ಚಿಮ ಬಂಗಾಳದಲ್ಲಿ ಆ್ಯಪ್​ ಫೈಟ್​! ಬಿಡುಗಡೆ ಆಯ್ತು ಮೋದಿ-ಮಮತಾ ಅಪ್ಲಿಕೇಶ್​​ನಗಳು!
ನರೇಂದ್ರ ಮೋದಿ ಮತ್ತು ಮಮತಾ ಬ್ಯಾನರ್ಜಿ
Follow us
ರಾಜೇಶ್ ದುಗ್ಗುಮನೆ
|

Updated on:Feb 15, 2021 | 2:13 PM

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಅಧಿಕಾರಕ್ಕೇರಿದ ನಂತರ ಡಿಜಿಟಲ್​ ಇಂಡಿಯಾದ ಕನಸನ್ನು ಜನರ ಮುಂದಿಟ್ಟರು. ಅದರ ಪರಿಣಾಮವಾಗಿ ಇಂದು ನಿಧಾನವಾಗಿ ಭಾರತ ಡಿಜಿಟಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಅಂತಯೇ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ಚುನಾವಣೆಯ ಪ್ರಚಾರಕ್ಕೆ ಡಿಜಿಟಲೀಕರಣದ ಆಯಾಮ ನೀಡಿದ್ದಾರೆ. ಮೋದಿ, ಮೋದಿಪರ (ಮೋದಿಯ ನೆರೆಹೊರೆಯವರು) ಆ್ಯಪ್​ ಬಿಡುಗಡೆ ಮಾಡಿದ್ದಾರೆ. ಇದು ಮಮತಾ ಬ್ಯಾನರ್ಜಿ ಬಿಡುಗಡೆ ಮಾಡಿರುವ, ದೀದಿರ್ ದೂತ್​ (ದಿದಿಯ ಮೆಸೆಂಜರ್) ಆ್ಯಪ್​​ಗೆ ಕೌಂಟರ್​ ಎನ್ನಲಾಗುತ್ತಿದೆ.

ಡಿಜಿಟಲೀಕರಣದ ಮಂತ್ರ ಪಠಿಸುತ್ತಾ ಮಮತಾ ಬ್ಯಾನರ್ಜಿ ಫೆಬ್ರವರಿ 4ರಂದು ದೀದಿರ್ ದೂತ್​ ಆ್ಯಪ್​ ರಿಲೀಸ್​ ಮಾಡಿದ್ದರು. ಮೂರು ದಿನಗಳ ಹಿಂದೆ ಅಮಿತ್​ ಶಾ ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಈ ವೇಳೆ ಮೋದಿಪರ ಆ್ಯಪ್​   ಬಿಡುಗಡೆ ಮಾಡಿದ್ದರು.

ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿರುವ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕರು​,ಕಾರ್ಯಕರ್ತರು ಆ್ಯಪ್​ ಡೌನ್​ಲೋಡ್​ ಮಾಡುವಂತೆ ಕೋರುತ್ತಿದ್ದಾರೆ. ಅಷ್ಟೇ ಅಲ್ಲ, ಈ ಆ್ಯಪ್​ನ ವಿಶೇಷತೆ ಹಾಗೂ ಆ್ಯಪ್​ ಬಳಕೆ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಹೀಗಾಗಿ, ಕೆಲವೇ ದಿನಗಳಲ್ಲಿ ಈ ಆ್ಯಪ್​ಗಳು ಲಕ್ಷಾಂತರ ಡೌನ್​ಲೋಡ್​ ಕಂಡಿವೆ.

ಇದನ್ನೂ ಓದಿ:  ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ಐದು ರೂಪಾಯಿ ಊಟ, ‘ಮಾ’ ಯೋಜನೆ ಜಾರಿಗೆ ತಂದ ಮಮತಾ

ರಾಜಕೀಯ ಪಂಡಿತ ಪ್ರಶಾಂತ್​ ಕಿಶೋರ್​ ಈ ಬಾರಿ ಟಿಎಂಸಿ ಪ್ರಚಾರಕ್ಕೆ ತಂತ್ರಗಾರಿಕೆ ರೂಪಿಸಿದ್ದಾರೆ. ಅವರು ಈ ಆ್ಯಪ್​ ಐಡಿಯಾದ ಜನಕ. ಈಗ ಬಿಜೆಪಿ ಕೂಡ ತಾವೇನು ಹಿಂದೆ ಬಿದ್ದಿಲ್ಲ ಎನ್ನುವ ರೀತಿಯಲ್ಲಿ ಆ್ಯಪ್​ ಪರಿಚಯಿಸಿದೆ.

ಪಶ್ಚಿಮ ಬಂಗಾಳ ಚುನಾವಣೆಗೂ ಮೊದಲೇ  ಮಮತಾಗೆ ಶಾಕ್​ ಮೇಲೆ ಶಾಕ್​ ಉಂಟಾಗುತ್ತಿದೆ. ಟಿಎಂಸಿ ಸಾಕಷ್ಟು ನಾಯಕರು ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಇದು ಮಮತಾಗೆ ಭಾರೀ ಹಿನ್ನಡೆ ಉಂಟು ಮಾಡುತ್ತಿದೆ.

Published On - 2:10 pm, Mon, 15 February 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ